AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 12 ತಿಂಗಳಲ್ಲಿ ಯುಎಸ್ ರಾಯಭಾರಿ ಕಚೇರಿಗಳು ಸುಮಾರು 8 ಲಕ್ಷ ವೀಸಾಗಳನ್ನು ವಿತರಿಸಲಿವೆ: ಯುಎಸ್ ಸಚಿವ

ವೀಸಾ ವಿತರಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಮತ್ತು ಭಾರತದಲ್ಲಿರುವ ಯುಎಸ್ ರಾಯಭಾರಿ ಕಚೇರಿಗಳಿಗೆ ಭೇಟಿ ನೀಡುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಮುಂದಿನ 12 ತಿಂಗಳಲ್ಲಿ ಯುಎಸ್ ರಾಯಭಾರಿ ಕಚೇರಿಗಳು ಸುಮಾರು 8 ಲಕ್ಷ ವೀಸಾಗಳನ್ನು ವಿತರಿಸಲಿವೆ: ಯುಎಸ್ ಸಚಿವ
ಡೊನಾಲ್ಡ್ ಎಲ್ ಹೆಫ್ಲಿನ್, ಯುಎಸ್ ಕಾನ್ಸುಲರ್ ವ್ಯವಹಾರಗಳ ಸಚಿವ
TV9 Web
| Edited By: |

Updated on: Apr 20, 2022 | 6:19 AM

Share

ಚೆನೈ: ಮುಂದಿನ 12 ತಿಂಗಳ ಅವಧಿಯಲ್ಲಿ ಭಾರತದಲ್ಲಿರುವ ಅಮೇರಿಕನ್ ರಾಯಭಾರಿ ಕಚೇರಿಯು (US embassy) ಸುಮಾರು 8 ಲಕ್ಷ ವೀಸಾಗಳನ್ನು ವಿತರಿಸಲಿದೆ ಎಂದು ಆ ದೇಶದ ಹಿರಿಯ ರಾಜತಾಂತ್ರಿಕ ಪ್ರತಿನಿಧಿಯೊಬ್ಬರು (diplomat) ಮಂಗಳವಾರ ಚೆನ್ನೈನಲ್ಲಿ ತಿಳಿಸಿದರು. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಯುಎಸ್ ರಾಯಭಾರ ಕಚೇರಿಯ ಕಾನ್ಸುಲರ್ ವ್ಯವಹಾರಗಳ ಸಚಿವ ಡೊನಾಲ್ಡ್ ಎಲ್ ಹೆಫ್ಲಿನ್ (Donald L Heflin) ಅವರು, ‘ಮುಂದಿನ 12 ತಿಂಗಳಲ್ಲಿ 8,00,000 ವೀಸಾಗಳನ್ನು ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ. ವೀಸಾ ವಿತರಿಸುವ ಪ್ರಕ್ರಿಯೆ ಜಾರಿಗೊಳಿಸಲು ಸಾಕಷ್ಟು ಸ್ಲಾಟ್‌ಗಳನ್ನು ಓಪನ್ ಮಾಡಿದ್ದೇವೆ ಅಂತ ನಾವು ಭಾವಿಸುತ್ತೇವೆ. ಅಂತಿಮವಾಗಿ ಎಚ್ ಮತ್ತು ಎಲ್ ವೀಸಾಗಳ ಬೇಡಿಕೆಯನ್ನು ಪೂರೈಸಲಾಗುವುದು,’ ಎಂದು ಹೇಳಿದರು.

ಕೋವಿಡ್-19 ಪಿಡುಗು ತಲೆದೋರುವವ ಮೊದಲು ಒಟ್ಟು ಎಷ್ಟು ವೀಸಾಗಳನ್ನು ವಿತರಿಸಲಾಗಿತ್ತು ಎಂದು ಮಾಧ್ಯಮದವರು ಕೇಳಿದಾಗ, ‘1.2 ಮಿಲಿಯನ್ ವೀಸಾಗಳನ್ನು ನೀಡಲಾಗಿತ್ತು’ ಎಂದು ಹೇಳಿದರು. 2023 ಅಥವಾ 2024 ರ ಹೊತ್ತಿಗೆ ಕೋವಿಡ್-19 ಪೂರ್ವ ಅವಧಿಯಲ್ಲಿ ವಿತರಿಸಲಾಗುತ್ತಿದ್ದ ವೀಸಾಗಳ ಪ್ರಮಾಣವನ್ನು ತಲುಪುವ ನಿರೀಕ್ಷೆ ನಮಗಿದೆ ಎಂದು ಹೆಫ್ಲಿನ್ ಹೇಳಿದರು.

ಕೋವಿಡ್-19 ಪೂರ್ವ ಅವಧಿಯಲ್ಲಿ 12 ಲಕ್ಷ ವೀಸಾಗಳನ್ನು ನೀಡಲಾಗಿತ್ತು ಎಂದು ಹೆಫ್ಲಿನ್ ಹೇಳಿದರು. ವೀಸಾ ವಿತರಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಮತ್ತು ಭಾರತದಲ್ಲಿರುವ ಯುಎಸ್ ರಾಯಭಾರಿ ಕಚೇರಿಗಳಿಗೆ ಭೇಟಿ ನೀಡುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

‘ಕೋವಿಡ್-19 ಪಿಡುಗಿನಿಂದಾಗಿ ಕೇವಲ ಶೇ. 50 ರಷ್ಟು ಸಿಬ್ಬಂದಿ ವರ್ಗ ಮಾತ್ರ ವೀಸಾ ಪ್ರಕ್ರಿಯೆಯಲ್ಲಿ ತೊಡಗಿತ್ತು. ಉದ್ಯೋಗಿಗಳ ಸಂಖ್ಯೆ ನಾವು ಹೆಚ್ಚಿಸಲಿದ್ದೇವೆ. ಹೈದರಾಬಾದ್ ನಲ್ಲಿ ಒಂದು ದೊಡ್ಡ ಕಚೇರಿಯನ್ನು ಆರಂಭಿಸಲಿದ್ದೇವೆ, ನವದೆಹಲಿ ಮತ್ತು ಮುಂಬೈ ನಗರಗಳಲ್ಲಿರುವ ಕಚೇರಿಗಳಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲಿದ್ದೇವೆ, ಕೊಲ್ಕತ್ತಾದ ಕಚೇರಿಯಲ್ಲಿ ಈಗಾಗಲೇ ಶೇ. 100 ರಷ್ಟು ಸಿಬ್ಬಂದಿ ಇದೆ,’ ಎಂದು ಹೆಫ್ಲಿನ್ ಹೇಳಿದರು.

ವೀಸಾ ಕೋರಿ ಅರ್ಜಿ ಸಲ್ಲಿಸಿದವರ ಸಂದೇಹ, ದೂರು-ದುಮ್ಮಾನಗಳಿಗೆ ಒಂದು ಸಮರ್ಪಿತ ಸಹಾಯವಾಣಿಯನ್ನು ಸ್ಥಾಪಿಸಲಾಗುವುದೇ ಎಂದು ಕೇಳಿದ ಪ್ರಶ್ನೆಗೆ ಹೆಫ್ಲಿನ್ ಅವರು ಭಾರತದಲ್ಲಿರುವ ಎಲ್ಲ ಅಮೇರಿಕನ್ ರಾಯಭಾರಿ ಕಚೇರಿಗಳು ಡೆಡಿಕೇಟೆಡ್ ಹೆಲ್ಪ್ ಲೈನ್ ಹೊಂದಿವೆ ಮತ್ತು ಇ-ಮೇಲ್ ಅಡ್ರೆಸ್ ಕೂಡ ಸೃಷ್ಟಿಸಲಾಗಿದೆ, ಅರ್ಜಿದಾರರು ಅವುಗಳಿಗೆ ಸಂಪರ್ಕಿಸಿ ತಮ್ಮ ಸಂದೇಹಗಳನ್ನು ನಿವಾರಿಸಿಕೊಳ್ಳಬಹುದು ಎಂದು ಹೇಳಿದರು.

ಕೋವಿಡ್-19 ಪಿಡುಗಿನಿಂದಾಗಿ ಭಾರತೀಯ ವೀಸಾಗಳನ್ನು ತಡೆಹಿಡಿಯಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಹೆಫ್ಲಿನ್ ಅವರು, ‘ಹೆಚ್ಚಿನ ಸಂಖ್ಯೆಯ ವೀಸಾಗಳನ್ನು ತಡೆಹಿಡಿದಿಲ್ಲ ಆದರೆ, ಮುಂಬರುವ ದಿನಗಳಲ್ಲಿನ ನಾವು ವಿದ್ಯಾರ್ಥಿಗಳ ವೀಸಾಗಳಿಗೆ ಸಂಬಂಧಿಸಿದಂತೆ ಕೆಲ ಘೋಷಣೆಗಳನ್ನು ಮಾಡಲಿದ್ದೇವೆ, ಅದರ ಮೇಲೆ ಗಮನವಿರಲಿ,’ ಎಂದು ಹೇಳಿದರು.

ಇದನ್ನೂ ಓದಿ:  MEA Dr S Jaishankar: ಭಾರತದ ವಿದೇಶಾಂಗ ಸಚಿವ ಜೈಶಂಕರ್ ನಿಜವಾದ ದೇಶಭಕ್ತ -ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಪ್ರಶಂಸೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?