ಮುಂದಿನ 12 ತಿಂಗಳಲ್ಲಿ ಯುಎಸ್ ರಾಯಭಾರಿ ಕಚೇರಿಗಳು ಸುಮಾರು 8 ಲಕ್ಷ ವೀಸಾಗಳನ್ನು ವಿತರಿಸಲಿವೆ: ಯುಎಸ್ ಸಚಿವ

ವೀಸಾ ವಿತರಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಮತ್ತು ಭಾರತದಲ್ಲಿರುವ ಯುಎಸ್ ರಾಯಭಾರಿ ಕಚೇರಿಗಳಿಗೆ ಭೇಟಿ ನೀಡುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಮುಂದಿನ 12 ತಿಂಗಳಲ್ಲಿ ಯುಎಸ್ ರಾಯಭಾರಿ ಕಚೇರಿಗಳು ಸುಮಾರು 8 ಲಕ್ಷ ವೀಸಾಗಳನ್ನು ವಿತರಿಸಲಿವೆ: ಯುಎಸ್ ಸಚಿವ
ಡೊನಾಲ್ಡ್ ಎಲ್ ಹೆಫ್ಲಿನ್, ಯುಎಸ್ ಕಾನ್ಸುಲರ್ ವ್ಯವಹಾರಗಳ ಸಚಿವ
Follow us
| Edited By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 20, 2022 | 6:19 AM

ಚೆನೈ: ಮುಂದಿನ 12 ತಿಂಗಳ ಅವಧಿಯಲ್ಲಿ ಭಾರತದಲ್ಲಿರುವ ಅಮೇರಿಕನ್ ರಾಯಭಾರಿ ಕಚೇರಿಯು (US embassy) ಸುಮಾರು 8 ಲಕ್ಷ ವೀಸಾಗಳನ್ನು ವಿತರಿಸಲಿದೆ ಎಂದು ಆ ದೇಶದ ಹಿರಿಯ ರಾಜತಾಂತ್ರಿಕ ಪ್ರತಿನಿಧಿಯೊಬ್ಬರು (diplomat) ಮಂಗಳವಾರ ಚೆನ್ನೈನಲ್ಲಿ ತಿಳಿಸಿದರು. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಯುಎಸ್ ರಾಯಭಾರ ಕಚೇರಿಯ ಕಾನ್ಸುಲರ್ ವ್ಯವಹಾರಗಳ ಸಚಿವ ಡೊನಾಲ್ಡ್ ಎಲ್ ಹೆಫ್ಲಿನ್ (Donald L Heflin) ಅವರು, ‘ಮುಂದಿನ 12 ತಿಂಗಳಲ್ಲಿ 8,00,000 ವೀಸಾಗಳನ್ನು ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ. ವೀಸಾ ವಿತರಿಸುವ ಪ್ರಕ್ರಿಯೆ ಜಾರಿಗೊಳಿಸಲು ಸಾಕಷ್ಟು ಸ್ಲಾಟ್‌ಗಳನ್ನು ಓಪನ್ ಮಾಡಿದ್ದೇವೆ ಅಂತ ನಾವು ಭಾವಿಸುತ್ತೇವೆ. ಅಂತಿಮವಾಗಿ ಎಚ್ ಮತ್ತು ಎಲ್ ವೀಸಾಗಳ ಬೇಡಿಕೆಯನ್ನು ಪೂರೈಸಲಾಗುವುದು,’ ಎಂದು ಹೇಳಿದರು.

ಕೋವಿಡ್-19 ಪಿಡುಗು ತಲೆದೋರುವವ ಮೊದಲು ಒಟ್ಟು ಎಷ್ಟು ವೀಸಾಗಳನ್ನು ವಿತರಿಸಲಾಗಿತ್ತು ಎಂದು ಮಾಧ್ಯಮದವರು ಕೇಳಿದಾಗ, ‘1.2 ಮಿಲಿಯನ್ ವೀಸಾಗಳನ್ನು ನೀಡಲಾಗಿತ್ತು’ ಎಂದು ಹೇಳಿದರು. 2023 ಅಥವಾ 2024 ರ ಹೊತ್ತಿಗೆ ಕೋವಿಡ್-19 ಪೂರ್ವ ಅವಧಿಯಲ್ಲಿ ವಿತರಿಸಲಾಗುತ್ತಿದ್ದ ವೀಸಾಗಳ ಪ್ರಮಾಣವನ್ನು ತಲುಪುವ ನಿರೀಕ್ಷೆ ನಮಗಿದೆ ಎಂದು ಹೆಫ್ಲಿನ್ ಹೇಳಿದರು.

ಕೋವಿಡ್-19 ಪೂರ್ವ ಅವಧಿಯಲ್ಲಿ 12 ಲಕ್ಷ ವೀಸಾಗಳನ್ನು ನೀಡಲಾಗಿತ್ತು ಎಂದು ಹೆಫ್ಲಿನ್ ಹೇಳಿದರು. ವೀಸಾ ವಿತರಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಮತ್ತು ಭಾರತದಲ್ಲಿರುವ ಯುಎಸ್ ರಾಯಭಾರಿ ಕಚೇರಿಗಳಿಗೆ ಭೇಟಿ ನೀಡುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

‘ಕೋವಿಡ್-19 ಪಿಡುಗಿನಿಂದಾಗಿ ಕೇವಲ ಶೇ. 50 ರಷ್ಟು ಸಿಬ್ಬಂದಿ ವರ್ಗ ಮಾತ್ರ ವೀಸಾ ಪ್ರಕ್ರಿಯೆಯಲ್ಲಿ ತೊಡಗಿತ್ತು. ಉದ್ಯೋಗಿಗಳ ಸಂಖ್ಯೆ ನಾವು ಹೆಚ್ಚಿಸಲಿದ್ದೇವೆ. ಹೈದರಾಬಾದ್ ನಲ್ಲಿ ಒಂದು ದೊಡ್ಡ ಕಚೇರಿಯನ್ನು ಆರಂಭಿಸಲಿದ್ದೇವೆ, ನವದೆಹಲಿ ಮತ್ತು ಮುಂಬೈ ನಗರಗಳಲ್ಲಿರುವ ಕಚೇರಿಗಳಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲಿದ್ದೇವೆ, ಕೊಲ್ಕತ್ತಾದ ಕಚೇರಿಯಲ್ಲಿ ಈಗಾಗಲೇ ಶೇ. 100 ರಷ್ಟು ಸಿಬ್ಬಂದಿ ಇದೆ,’ ಎಂದು ಹೆಫ್ಲಿನ್ ಹೇಳಿದರು.

ವೀಸಾ ಕೋರಿ ಅರ್ಜಿ ಸಲ್ಲಿಸಿದವರ ಸಂದೇಹ, ದೂರು-ದುಮ್ಮಾನಗಳಿಗೆ ಒಂದು ಸಮರ್ಪಿತ ಸಹಾಯವಾಣಿಯನ್ನು ಸ್ಥಾಪಿಸಲಾಗುವುದೇ ಎಂದು ಕೇಳಿದ ಪ್ರಶ್ನೆಗೆ ಹೆಫ್ಲಿನ್ ಅವರು ಭಾರತದಲ್ಲಿರುವ ಎಲ್ಲ ಅಮೇರಿಕನ್ ರಾಯಭಾರಿ ಕಚೇರಿಗಳು ಡೆಡಿಕೇಟೆಡ್ ಹೆಲ್ಪ್ ಲೈನ್ ಹೊಂದಿವೆ ಮತ್ತು ಇ-ಮೇಲ್ ಅಡ್ರೆಸ್ ಕೂಡ ಸೃಷ್ಟಿಸಲಾಗಿದೆ, ಅರ್ಜಿದಾರರು ಅವುಗಳಿಗೆ ಸಂಪರ್ಕಿಸಿ ತಮ್ಮ ಸಂದೇಹಗಳನ್ನು ನಿವಾರಿಸಿಕೊಳ್ಳಬಹುದು ಎಂದು ಹೇಳಿದರು.

ಕೋವಿಡ್-19 ಪಿಡುಗಿನಿಂದಾಗಿ ಭಾರತೀಯ ವೀಸಾಗಳನ್ನು ತಡೆಹಿಡಿಯಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಹೆಫ್ಲಿನ್ ಅವರು, ‘ಹೆಚ್ಚಿನ ಸಂಖ್ಯೆಯ ವೀಸಾಗಳನ್ನು ತಡೆಹಿಡಿದಿಲ್ಲ ಆದರೆ, ಮುಂಬರುವ ದಿನಗಳಲ್ಲಿನ ನಾವು ವಿದ್ಯಾರ್ಥಿಗಳ ವೀಸಾಗಳಿಗೆ ಸಂಬಂಧಿಸಿದಂತೆ ಕೆಲ ಘೋಷಣೆಗಳನ್ನು ಮಾಡಲಿದ್ದೇವೆ, ಅದರ ಮೇಲೆ ಗಮನವಿರಲಿ,’ ಎಂದು ಹೇಳಿದರು.

ಇದನ್ನೂ ಓದಿ:  MEA Dr S Jaishankar: ಭಾರತದ ವಿದೇಶಾಂಗ ಸಚಿವ ಜೈಶಂಕರ್ ನಿಜವಾದ ದೇಶಭಕ್ತ -ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಪ್ರಶಂಸೆ

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ