AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​ ಕ್ಷಿಪಣಿ ದಾಳಿಯಿಂದ ಅದಾನಿಯ ಹೈಫಾ ಬಂದರ್​ಗೆ ಯಾವುದೇ ಹಾನಿ ಇಲ್ಲ

ಇರಾನ್ ನಡೆಸಿದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯಿಂದ ಇಸ್ರೇಲ್‌ನಲ್ಲಿನ ಹೈಫಾ ಬಂದರಿಗೆ ಯಾವುದೇ ಹಾನಿಯಾಗಿಲ್ಲ. ಅದಾನಿ ಗ್ರೂಪ್‌ಗೆ ಸೇರಿದ ಈ ಬಂದರಿನಲ್ಲಿ ಸರಕು ಸಾಗಣಿಕೆ ಎಂದಿನಂತೆ ಸುಗಮವಾಗಿ ನಡೆಯುತ್ತಿದೆ. ಕೆಲವು ವರದಿಗಳ ಪ್ರಕಾರ ಬಂದರಿನ ಸಮೀಪದ ತೈಲ ಸಂಸ್ಕರಣಾ ಘಟಕಕ್ಕೆ ಹಾನಿಯಾಗಿರಬಹುದು. ಆದರೆ, ಅಧಿಕೃತವಾಗಿ ದೃಢೀಕರಣಗೊಂಡಿಲ್ಲ.

ಇರಾನ್​ ಕ್ಷಿಪಣಿ ದಾಳಿಯಿಂದ ಅದಾನಿಯ ಹೈಫಾ ಬಂದರ್​ಗೆ ಯಾವುದೇ ಹಾನಿ ಇಲ್ಲ
ಹೈಫಾ ಬಂದರು
ವಿವೇಕ ಬಿರಾದಾರ
|

Updated on: Jun 15, 2025 | 11:02 PM

Share

ಜೆರುಸಲೆಮ್, ಜೂನ್ 15: ಇರಾನಿನ (Iran) ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯಿಂದ ಇಸ್ರೇಲ್‌ನಲ್ಲಿರುವ (Israel) ಗೌತಮ್ ಅದಾನಿ ಗ್ರೂಪ್​ನ ಹೈಫಾ ಬಂದರಿಗೆ (Haifa port) ಯಾವುದೇ ಹಾನಿಯಾಗಿಲ್ಲ. ಮತ್ತು ಸರಕು ಸಾಗಣಿಕೆ ಎಂದಿನಂತೆ ಯಾವುದೇ ಅಡಚಣೆ ಇಲ್ಲದೆ ನಡೆಯುತ್ತಿದೆ ಎಂದು ಪಿಟಿಐ ತಿಳಿಸಿದೆ.

ಈ ವಾರದ ಆರಂಭದಲ್ಲಿ ಇರಾನ್​ ದೇಶದ ಪರಮಾಣು ಘಟಕಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್​ ನಡೆಸಿರುವ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕಾರವಾಗಿ ಶನಿವಾರ ತಡರಾತ್ರಿ ಇರಾನ್, ಇಸ್ರೇಲ್​ನಲ್ಲಿನ ಹೈಫಾ ಬಂದರು ಮತ್ತು ಹತ್ತಿರದ ತೈಲ ಸಂಸ್ಕರಣಾ ಘಟಕವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿತ್ತು. ಬಂದರಿನಲ್ಲಿರುವ ರಾಸಾಯನಿಕ ಟರ್ಮಿನಲ್‌ನಲ್ಲಿ ಶಾರ್ಪ್‌ನೆಲ್‌ ಶೆಲ್​ಗಳು ಬಿದ್ದಿವೆ. ಮತ್ತು ತೈಲ ಸಂಸ್ಕರಣಾ ಘಟಕದ ಮೇಲೆ ಇತರ ಕೆಲವು ಸ್ಪೋಟಕಗಳು ಬಿದ್ದಿವೆ ಎಂದು ವರದಿಯಾಗಿತ್ತು. ಆದರೆ, ಹೈಫಾ ಬಂದರಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಕಿಶನ್ ವೆಸ್ಟ್ (ಹೈಫಾ ಬಂದರು) ನಲ್ಲಿ ಇಂಟರ್‌ ಸೆಪ್ಟರ್ ಶಾರ್ಪ್​ ನೆಲ್​ನ ಚೂರುಗಳು ಕಂಡುಬಂದಿವೆ. ಆದರೆ ಯಾವುದೇ ರೀತಿಯ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಇದನ್ನೂ ಓದಿ
Image
ಇಸ್ರೇಲ್ ದಾಳಿಗೆ ಪ್ರತೀಕಾರ; 2 ಇಸ್ರೇಲಿ F-35 ಜೆಟ್‌ಗಳ ಧ್ವಂಸ
Image
ಇರಾನ್ - ಇಸ್ರೇಲ್ ಯುದ್ಧದಿಂದ ಪಾಕಿಸ್ತಾನಕ್ಕೆ ಹೆಚ್ಚಾದ ಟೆನ್ಶನ್!
Image
ಇಸ್ರೇಲ್​ ದಾಳಿ; ಇರಾನ್​ನ 78 ಜನ ಸಾವು, 329 ಮಂದಿಗೆ ಗಾಯ
Image
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್

ಅದಾನಿ ಗ್ರೂಪ್​ನ ಬಂದರಿನಲ್ಲಿ ಸರಕು ಸಾಗಾಣಿಕೆಗೆ ಯಾವುದೇ ಅಡೆತಡೆ ಉಂಟಾಗಿಲ್ಲ. “ಬಂದರಿನಲ್ಲಿ ಈಗ ಎಂಟು ಹಡಗುಗಳಿವೆ. ಸರಕು ಸಾಗಣಿಕೆ ನಡೆಯುತ್ತಿದೆ” ಎಂದು ಮೂಲಗಳು ತಿಳಿಸಿವೆ. ಇರಾನಿನ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯು ಅದಾನಿ ಗ್ರೂಪ್​ನ ಬಂದರಿಗೆ ಅಥವಾ ಅದರ ಕಾರ್ಯಗಳಿಗಳಿಗೆ ಯಾವುದೇ ಹಾನಿಯನ್ನುಂಟುಮಾಡಿಲ್ಲ ಎಂದು ಮೂಲಗಳು ಹೇಳಿವೆ.

ಈ ಬಗ್ಗೆ ಅದಾನಿ ಗ್ರೂಪ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇಸ್ರೇಲ್​ನ ಸರ್ಕಾರಿ ಅಧಿಕಾರಿಗಳು ಕೂಡ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ.

ಹೈಫಾ ಬಂದರು ನಿರ್ಣಾಯಕ ಕಡಲ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಇಸ್ರೇಲ್‌ನ ಆಮದುಗಳಲ್ಲಿ ಶೇಕಡಾ 30 ಕ್ಕಿಂತ ಹೆಚ್ಚು ಕಾರ್ಯನಿರ್ವಹಿಸುತ್ತದೆ. ಇದು ಅದಾನಿ ಪೋರ್ಟ್ಸ್​ ಒಡೆತನಲ್ಲಿದ್ದು, ಶೇಕಡಾ 70 ಕ್ಕಿಂತ ಹೆಚ್ಚು ಪಾಲನ್ನು ಹೊಂದಿದೆ. ಕ್ಷಿಪಣಿಗಳು ಬಂದರಿಗೆ ಸಮೀಪವಿರುವ ಪ್ರಮುಖ ತೈಲ ಸಂಸ್ಕರಣಾ ಘಟಕಕ್ಕೆ ಹಾನಿ ಮಾಡಿರಬಹುದು, ಆದರೆ ಬಂದರು ಮೇಲಿನ ಹಾನಿ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.

ಇದನ್ನೂ ಓದಿ: ನಮ್ಮ ಮೇಲೆ ಕ್ಷಿಪಣಿ ದಾಳಿ ಮುಂದುವರಿದರೆ ಟೆಹ್ರಾನ್ ಹೊತ್ತಿ ಉರಿಯುತ್ತದೆ; ಇರಾನ್‌ಗೆ ಇಸ್ರೇಲ್ ಎಚ್ಚರಿಕೆ

ಇಸ್ರೇಲ್ ಶುಕ್ರವಾರ ಮುಂಜಾನೆ ಇರಾನ್​ನ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿತ್ತು. ನಂತರ ಇರಾನ್ ಪ್ರತಿಕಾರವಾಗಿ ಇಸ್ರೇಲ್ ಮೇಲೆ ದಾಳಿ ಮಾಡಿದೆ. ನಮ್ಮ ಎರಡು ತೈಲ ಸಂಸ್ಕರಣಾ ಘಟಕಗಳನ್ನು ಇಸ್ರೇಲ್​ ಹೊಡೆದುರುಳಿಸಿದೆ ಎಂದು ಇರಾನ್ ಹೇಳಿದೆ. ಇದರಿಂದ ಜಾಗತಿಕ ತೈಲ ಮಾರುಕಟ್ಟೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕೆಲವು ಇರಾನಿನ ಕ್ಷಿಪಣಿಗಳು ಇಸ್ರೇಲ್​ ದೇಶದ ಹೃದಯಭಾಗದಲ್ಲಿರುವ ಕಟ್ಟಡಗಳನ್ನು ಹೊಡೆದುರುಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ