AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವು ಬದುಕಿನೊಂದಿಗೆ ಹೋರಾಡುತ್ತಿರುವ ಅಫ್ಘಾನಿಸ್ತಾನದ ಕ್ರಿಕೆಟರ್ ನಜೀಬುಲ್ಲಾ

ರಸ್ತೆ ದಾಟುವಾಗ ವೇಗದಿಂದ ಬರುತ್ತಿದ್ದ ಕಾರೊದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಸ್ವರೂಪದ ಗಾಯಗಳೊಂದಿಗೆ ಆಸ್ಪತ್ರೆ ಸೇರಿರುವ ಅಫ್ಘಾನಿಸ್ತಾನದ ಆರಂಭ ಆಟಗಾರ ನಜೀಬುಲ್ಲಾ ತರಕಾಯಿ ಅವರ ಸ್ಥಿತಿ ಚಿಂತಾಜನಕವಾಗಿದೆಯೆಂದು ಅಫ್ಘಾನಿಸ್ತಾನದ ಕ್ರಿಕೆಟ್ ಸಂಸ್ಥೆಯ ಹಂಗಾಮಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಜೀಮ್ ಜರ್ ಅಬ್ದುಲ್​ರಹಿಮಾಜಿ ಹೇಳಿದ್ದಾರೆ. ನಜೀಬ್ ಶನಿವಾರದಂದು ಪೂರ್ವ ನನ್ಗರ್ಹರ್​ನ ಮಾರ್ಕೆಟ್ ಬಳಿ ರಸ್ತೆ ದಾಟುವಾಗ ಅಪಘಾತ ಸಂಭವಿಸಿದ್ದು ಅವರನ್ನು ಕೂಡಲೇ ಆಸ್ಪತ್ರೆಯೊಂದಕ್ಕೆ ಶಿಫ್ಟ್ ಮಾಡಲಾಗಿದೆಯೆಂದು ಅಬ್ದುಲ್​ರಹಿಮಾಜಿ ಹೇಳಿದ್ದಾರೆ. ‘‘ನಜೀಬ್ ಶುಕ್ರವಾರದಂದು ರಸ್ತೆ ಅಪಘಾತಕ್ಕೀಡಾಗಿದ್ದು ಅವರಿಗೆ ಐಸಿಯುನಲ್ಲಿ […]

ಸಾವು ಬದುಕಿನೊಂದಿಗೆ ಹೋರಾಡುತ್ತಿರುವ ಅಫ್ಘಾನಿಸ್ತಾನದ ಕ್ರಿಕೆಟರ್ ನಜೀಬುಲ್ಲಾ
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 03, 2020 | 11:25 PM

Share

ರಸ್ತೆ ದಾಟುವಾಗ ವೇಗದಿಂದ ಬರುತ್ತಿದ್ದ ಕಾರೊದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಸ್ವರೂಪದ ಗಾಯಗಳೊಂದಿಗೆ ಆಸ್ಪತ್ರೆ ಸೇರಿರುವ ಅಫ್ಘಾನಿಸ್ತಾನದ ಆರಂಭ ಆಟಗಾರ ನಜೀಬುಲ್ಲಾ ತರಕಾಯಿ ಅವರ ಸ್ಥಿತಿ ಚಿಂತಾಜನಕವಾಗಿದೆಯೆಂದು ಅಫ್ಘಾನಿಸ್ತಾನದ ಕ್ರಿಕೆಟ್ ಸಂಸ್ಥೆಯ ಹಂಗಾಮಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಜೀಮ್ ಜರ್ ಅಬ್ದುಲ್​ರಹಿಮಾಜಿ ಹೇಳಿದ್ದಾರೆ.

ನಜೀಬ್ ಶನಿವಾರದಂದು ಪೂರ್ವ ನನ್ಗರ್ಹರ್​ನ ಮಾರ್ಕೆಟ್ ಬಳಿ ರಸ್ತೆ ದಾಟುವಾಗ ಅಪಘಾತ ಸಂಭವಿಸಿದ್ದು ಅವರನ್ನು ಕೂಡಲೇ ಆಸ್ಪತ್ರೆಯೊಂದಕ್ಕೆ ಶಿಫ್ಟ್ ಮಾಡಲಾಗಿದೆಯೆಂದು ಅಬ್ದುಲ್​ರಹಿಮಾಜಿ ಹೇಳಿದ್ದಾರೆ.

‘‘ನಜೀಬ್ ಶುಕ್ರವಾರದಂದು ರಸ್ತೆ ಅಪಘಾತಕ್ಕೀಡಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಬಹಳ ಗಂಭೀರವಾಗಿದೆ. ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಮುಂದೇನು ಕಾದಿದೆಯೋ ಹೇಳಲಾರೆವು ಅನ್ನುತ್ತಿದ್ದಾರೆ,’’ ಅಬ್ದುಲ್​ರಹಿಮಾಜಿ ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ನಡೆದಿರುವ ಮತ್ತೊಂದು ಅಪಘಾತದಲ್ಲಿ, ಕಾರಿನಲ್ಲಿಟ್ಟಿದ್ದ ಬಾಂಬ್ ಸ್ಫೋಟಗೊಂಡು, ಅಂಪೈರ್ ಬಿಸ್ಮಿಲ್ಲಾ ಜನ್ ಶಿನ್ವರಿ ಅವರು ಬದುಕುಳಿದಿದ್ದು, ಅವರ ಕುಟುಂಬದ 7 ಸದಸ್ಯರು ಸಾವಿಗೀಡಾಗಿದ್ದಾರೆ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ