AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, 4.6 ತೀವ್ರತೆ ದಾಖಲು

ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಎರಡು ದಿನದ ಹಿಂದಷ್ಟೇ 6.3 ತೀವ್ರತೆಯ ಭೂಕಂಪ ಸಂಭವಿಸಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅದಕ್ಕೂ ಮುನ್ನ ಕಳೆದ ವಾರ ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಅಫ್ಘಾನಿಸ್ತಾನದಲ್ಲಿ ಒಂದು ವಾರದೊಳಗೆ ಇದು ಮೂರನೇ ಭೂಕಂಪವಾಗಿದೆ

Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, 4.6 ತೀವ್ರತೆ ದಾಖಲು
ಭೂಕಂಪImage Credit source: Aljazeera
Follow us
ನಯನಾ ರಾಜೀವ್
|

Updated on: Oct 13, 2023 | 10:02 AM

ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಎರಡು ದಿನದ ಹಿಂದಷ್ಟೇ 6.3 ತೀವ್ರತೆಯ ಭೂಕಂಪ ಸಂಭವಿಸಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅದಕ್ಕೂ ಮುನ್ನ ಕಳೆದ ವಾರ ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಅಫ್ಘಾನಿಸ್ತಾನದಲ್ಲಿ ಒಂದು ವಾರದೊಳಗೆ ಇದು ಮೂರನೇ ಭೂಕಂಪವಾಗಿದೆ.

ಬುಧವಾರ ಬೆಳಿಗ್ಗೆ 5.10 ರ ಸುಮಾರಿಗೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಹೆರಾತ್ ನಗರದ ಉತ್ತರಕ್ಕೆ 28 ಕಿ.ಮೀ. ದೂರದಲ್ಲಿ ಭೂಕಂಪ ಸಂಭವಿಸಿತ್ತು. ಅಕ್ಟೋಬರ್ 7 ರಂದು ಹೆರಾತ್ ನಗರದಿಂದ ಸುಮಾರು 40 ಕಿಮೀ (25 ಮೈಲುಗಳು) ಗ್ರಾಮಾಂತರ ಜಿಲ್ಲೆಯ ಜಿಂದಜಾನ್‌ಗೆ ಅಪ್ಪಳಿಸಿದ ಭೂಕಂಪದಲ್ಲಿ ಬದುಕುಳಿದವರಿಗಾಗಿ ಇನ್ನೂ ರಕ್ಷಣಾ ಕಾರ್ಯ ನಡೆಯುತ್ತಲೇ ಇದೆ.

ಅಫ್ಘಾನಿಸ್ತಾನದಲ್ಲಿ ಆಗಾಗ ಭೂಕಂಪಗಳು ಸಂಭವಿಸುತ್ತಲೇ ಇರುತ್ತದೆ. ಭೂಕಂಪವು ಹೆರಾತ್ ಪ್ರಾಂತ್ಯದ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

ಮತ್ತಷ್ಟು ಓದಿ: Afghanistan Earthquake: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

ಇನ್ನು ಘಟನೆಯಲ್ಲಿ 465 ಮನೆಗಳು ನಾಶವಾಗಿದ್ದು 135ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ನಗರದಲ್ಲಿ ದೂರವಾಣಿ ಸಂಪರ್ಕವೂ ಕಡಿತಗೊಂಡಿದ್ದರಿಂದ ರಕ್ಷಣಾ ಕಾರ್ಯಚರಣೆಯಲ್ಲಿ ತೊಂದರೆಯುಂಟಾಗಿದೆ. 2022ರ ಜೂನ್‌ನಲ್ಲಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ 1,000 ಜನ ಸಾವನ್ನಪ್ಪಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್
VIDEO: ನಾನೇನು ಮಾಡ್ದೆ... ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್