AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ದಾಳಿಗೆ ಕುಸಿದು ಬಿದ್ದು ಹೇಗ್ಹೇಗೋ ಎದ್ದು ನಿಂತಿದ್ದ ಪಾಕ್​ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ದಾಳಿ

ಅಫ್ಘಾನಿಸ್ತಾದಲ್ಲಿಅಧಿಕಾದಲ್ಲಿರುವ ತಾಲಿಬಾನ್ ರಕ್ಷಣಾ ಸಚಿವಾಲಯವು ಪಾಕಿಸ್ತಾನದಲ್ಲಿನ ಹಲವಾರು ಪ್ರಮುಖ ಮಿಲಿಟರಿ ಸ್ಥಾಪನೆಗಳ ಮೇಲೆ ವೈಮಾನಿಕ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ. ಸಚಿವಾಲಯದ ಪ್ರಕಾರ, ಇತ್ತೀಚೆಗೆ ಪಾಕಿಸ್ತಾನವು ಅಫ್ಘಾನ್ ಪ್ರದೇಶದಲ್ಲಿ ನಡೆಸಿದ ವೈಮಾನಿಕ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ.ಪಾಕಿಸ್ತಾನವು ಈ ಹಿಂದೆ ಕಾಬೂಲ್ ಮತ್ತು ಬಾಗ್ರಾಮ್ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು ಎಂದು ತಾಲಿಬಾನ್ ಹೇಳಿದೆ.

ಭಾರತದ ದಾಳಿಗೆ ಕುಸಿದು ಬಿದ್ದು ಹೇಗ್ಹೇಗೋ ಎದ್ದು ನಿಂತಿದ್ದ ಪಾಕ್​ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ದಾಳಿ
ನೂರ್ ಖಾನ್ ಏರ್​ಬೇಸ್ Image Credit source: Dinkar Singh Rawat-X Account
ನಯನಾ ರಾಜೀವ್
|

Updated on: Mar 02, 2026 | 10:03 AM

Share

ಇಸ್ಲಾಮಾಬಾದ್, ಮಾರ್ಚ್​ 02: ಆಪರೇಷನ್ ಸಿಂಧೂರ್(Operation Sindoor) ಸಮಯದಲ್ಲಿ ಭಾರತ ನಡೆಸಿದ ದಾಳಿಯಿಂದ ಕುಸಿದುಬಿದ್ದು, ಹೇಗ್ಹೇಗೋ ಎದ್ದು ನಿಂತಿದ್ದ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ಕೂಡ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದ ನೂರ್ ಖಾನ್ ವಾಯುನೆಲೆಯ ಮೇಲೆ ಅಫ್ಘಾನಿಸ್ತಾನ ವಾಯುದಾಳಿ ನಡೆದಿದೆ. ಕಳೆದ ಮೇ ತಿಂಗಳಿನಲ್ಲಿ ಭಾರತವು ಇದೇ ವಾಯುನೆಲೆ ಮೇಲೆ ದಾಳಿ ನಡೆಸಿತ್ತು. ಹಲವು ತಿಂಗಳುಗಳ ಬಳಿಕ ಹೇಗೋ ಸುಧಾರಿಸಿಕೊಂಡು ನಿರ್ಮಾಣಕಾರ್ಯ ಪೂರ್ಣಗೊಳಿಸಿತ್ತು.

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರವು ಪಾಕಿಸ್ತಾನದಲ್ಲಿರುವ ಹಲವಾರು ಪ್ರಮುಖ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಪಾಕಿಸ್ತಾನದೊಳಗಿನ ಪ್ರಮುಖ ವಾಯುನೆಲೆಗಳು ಮತ್ತು ಮಿಲಿಟರಿ ಸೌಲಭ್ಯಗಳ ಮೇಲೆ ತನ್ನ ಪಡೆಗಳು ಡ್ರೋನ್ ದಾಳಿ ನಡೆಸಿವೆ ಎಂದು ತಾಲಿಬಾನ್ ಹೇಳಿಕೊಂಡಿದೆ.

ರಾವಲ್ಪಿಂಡಿಯಲ್ಲಿರುವ ಪ್ರಮುಖ ಮಿಲಿಟರಿ ವಾಯುನೆಲೆಯಾದ ನೂರ್ ಖಾನ್ ವಾಯುನೆಲೆಯು ದಾಳಿಗೊಳಗಾದ ಪ್ರಮುಖ ಪ್ರದೇಶಗಳಲ್ಲಿ ಒಂದಾಗಿದೆ. ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ 12 ನೇ ಡಿವಿಷನ್ ಪ್ರಧಾನ ಕಚೇರಿ ಮತ್ತು ಖೈಬರ್ ಪಖ್ತುನ್ಖ್ವಾದ ಮೊಹಮ್ಮದ್ ಏಜೆನ್ಸಿಯಲ್ಲಿರುವ ಖ್ವಾಜೈ ಮಿಲಿಟರಿ ಶಿಬಿರದ ವಿರುದ್ಧವೂ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಭಾರತದ ಆಪರೇಷನ್ ಸಿಂಧೂರ್ ವೇಳೆ ನೂರ್ ಖಾನ್ ವಾಯುನೆಲೆಗೆ ಹಾನಿ; ಒಪ್ಪಿಕೊಂಡ ಪಾಕಿಸ್ತಾನ

ಕಾಬೂಲ್, ಬಾಗ್ರಾಮ್ ಮತ್ತು ಇತರ ಸ್ಥಳಗಳ ಮೇಲೆ ಪಾಕಿಸ್ತಾನದ ಮಿಲಿಟರಿ ದಾಳಿಗಳಿಗೆ ಪ್ರತೀಕಾರವಾಗಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಅಫ್ಘಾನಿಸ್ತಾನ ಹೇಳಿದೆ. ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯಲ್ಲಿ 415 ಅಫ್ಘಾನ್ ತಾಲಿಬಾನ್ ಸಿಬ್ಬಂದಿಯನ್ನು ಕೊಂದಿದ್ದು 580 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.

2,600 ಕಿ.ಮೀ.ಗೂ ಹೆಚ್ಚು ಉದ್ದದ ಗಡಿಯಲ್ಲಿ 53 ಸ್ಥಳಗಳ ಮೇಲೆ ಅಫ್ಘಾನ್ ತಾಲಿಬಾನ್ ದಾಳಿಕೋರರು ದಾಳಿ ನಡೆಸಿದ್ದಾರೆ.ಘಟನೆಗೆ ಪ್ರತಿಯಾಗಿ ಪಾಕಿಸ್ತಾನ ಗುರುವಾರ ರಾತ್ರಿ ‘ಗಜಬ್ ಲಿಲ್ ಹಕ್’ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಕಾರ್ಯಾಚರಣೆಯ ಸಮಯದಲ್ಲಿ 185 ಟ್ಯಾಂಕ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಫಿರಂಗಿ ಬಂದೂಕುಗಳು ನಾಶವಾಗಿವೆ ಎಂದುಹೇಳಲಾಗಿದೆ.

ಇದಕ್ಕೂ ಮೊದಲು, ಪಾಕಿಸ್ತಾನದ ಸಂಸದೀಯ ವ್ಯವಹಾರಗಳ ಸಚಿವ ಡಾ. ತಾರಿಕ್ ಫಜಲ್ ಚೌಧರಿ, ಅಫ್ಘಾನ್ ತಾಲಿಬಾನ್ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದರು. ಮಿಲಿಟರಿ ಕಾರ್ಯಾಚರಣೆ ಮುಕ್ತಾಯಗೊಂಡಿದೆ ಎಂದು ಸೂಚಿಸುವ ಸಾಮಾಜಿಕ ಮಾಧ್ಯಮ ವರದಿಗಳನ್ನು ಅವರು ನಿರಾಕರಿಸಿದರು.

ಮತ್ತೊಂದೆಡೆ, ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಅಫ್ಘಾನ್ ಕಡೆಯವರು ಹೇಳಿಕೊಂಡರೂ, ಪಾಕಿಸ್ತಾನಿ ಅಧಿಕಾರಿಗಳು ಈ ಹೇಳಿಕೆಯನ್ನು ತಿರಸ್ಕರಿಸಿದರು. ತಾಲಿಬಾನ್ ಪ್ರಕಾರ, ಪಾಕಿಸ್ತಾನ ಮತ್ತೆ ಅಫ್ಘಾನ್ ವಾಯುಪ್ರದೇಶವನ್ನು ಉಲ್ಲಂಘಿಸಿದರೆ ಅಥವಾ ಆಕ್ರಮಣಕಾರಿ ಕ್ರಮ ಕೈಗೊಂಡರೆ, ಅದು ಹೆಚ್ಚು ಕಠಿಣ ಮತ್ತು ನಿರ್ಣಾಯಕ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ