Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ಥಾನದಲ್ಲಿ 12 ವರ್ಷದ ಬಾಲಕಿಯರು ಸಾರ್ವಜನಿಕವಾಗಿ ಹಾಡುವಂತಿಲ್ಲ; ಶಿಕ್ಷಣ ಇಲಾಖೆಯಿಂದ ಸುತ್ತೋಲೆ

Afghanistan: ಲಿಂಗ ತಾರತಮ್ಯತೆಯ ಪ್ರಮಾಣ ಅಫ್ಘಾನಿಸ್ಥಾನದಲ್ಲಿ ಇನ್ನೂ ಅತ್ಯಂತ ಆಳವಾಗಿದ್ದು, ಹೆಣ್ಣು ಮಕ್ಕಳಿಗೆ ಸಾರ್ವಜನಿಕ ಜೀವನದಲ್ಲಿ ತೊಡಗಿಕೊಳ್ಳುವ ಅವಕಾಶಗಳು ಕಡಿಮೆ ಪ್ರಮಾಣದಲ್ಲಿವೆ.

ಅಫ್ಘಾನಿಸ್ಥಾನದಲ್ಲಿ 12 ವರ್ಷದ ಬಾಲಕಿಯರು ಸಾರ್ವಜನಿಕವಾಗಿ ಹಾಡುವಂತಿಲ್ಲ; ಶಿಕ್ಷಣ ಇಲಾಖೆಯಿಂದ ಸುತ್ತೋಲೆ
ಅಫ್ಘಾನಿಸ್ಥಾನದಲ್ಲಿ ಹೊಸ ನೀತಿ ಜಾರಿಗೊಳಿಸಿದ ಶಿಕ್ಷಣ ಇಲಾಖೆ..
Follow us
guruganesh bhat
| Updated By: Skanda

Updated on: Mar 13, 2021 | 12:10 PM

ಕಾಬೂಲ್: ಮೊನ್ನೆ ಮೊನ್ನೆಯಷ್ಟೇ ವಿಜೃಂಭಣೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗಿದೆ. ಈ ಸಂಭ್ರಮ ಮನಸ್ಸಿನಿಂದ ಮರೆಯಾಗುವ ಮುನ್ನವೇ ಅಫ್ಘಾನಿಸ್ಥಾನದ ಶಿಕ್ಷಣ ಇಲಾಖೆ 12 ವರ್ಷ ಮತ್ತು ಅದಕ್ಕೂ ಹೆಚ್ಚಿನ ವರ್ಷದ ಬಾಲಕಿಯರು ಸಾರ್ವಜನಿಕ ಸ್ಥಳಗಳಲ್ಲಿ ಹಾಡುವುದನ್ನು ನಿಷೇಧಿಸಿ ನೋಟಿಸ್ ಜಾರಿಗೊಳಿಸಿದೆ. ಇದು ಜಾಗತಿಕ ಮಾನವ ಹಕ್ಕುಗಳ ಸಂಘಟನೆಗಳ ಕಣ್ಣನ್ನು ಕೆಂಪಗಾಗಿಸಿದೆ. ಈ ನೋಟಿಸ್​ಗೆ ವಿರುದ್ಧವಾಗಿ #IAmMySong ಎಂಬ ಹ್ಯಾಷ್​ಟ್ಯಾಗ್ ಟ್ವಿಟರ್​ನಲ್ಲಿ ಭಾರಿ ಸದ್ದು ಮಾಡುತ್ತಿದೆ.

ಸಾರ್ವಜನಿಕವಾಗಿ ಹಾಡು ಹೇಳುವುದನ್ನೂ ಕಸಿದುಕೊಳ್ಳುವಂತಹ ನಿಯಮ ಜಾರಿಗೊಳಿಸಿರುವ ಅಫ್ಘಾನಿಸ್ಥಾನದ ಶಿಕ್ಷಣ ಇಲಾಖೆಯ ನೋಟಿಸ್​ಗೆ ವಿಶ್ವದಾದ್ಯಂತ ಪ್ರತಿರೋಧವಾಗಿ ಈ ಹ್ಯಾಷ್​ಟ್ಯಾಗ್ ಟ್ರೆಂಡ್ ಆಗುತ್ತಿದೆ. #IAmMySong ಎಂಬ ಹ್ಯಾಷ್​ಟ್ಯಾಗ್ ಮೂಲಕ ನೀವು ನಿಮ್ಮ ಹಾಡನ್ನು ಹಂಚಿಕೊಳ್ಳಿ ಎಂದು ಸಂದೇಶ ನೀಡುವ ಮೆಸೇಜ್​ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಲಿಂಗ ತಾರತಮ್ಯತೆಯ ಪ್ರಮಾಣ ಅಫ್ಘಾನಿಸ್ಥಾನದಲ್ಲಿ ಇನ್ನೂ ಅತ್ಯಂತ ಆಳವಾಗಿದ್ದು, ಹೆಣ್ಣು ಮಕ್ಕಳಿಗೆ ಸಾರ್ವಜನಿಕ ಜೀವನದಲ್ಲಿ ತೊಡಗಿಕೊಳ್ಳುವ ಅವಕಾಶಗಳು ಕಡಿಮೆ ಪ್ರಮಾಣದಲ್ಲಿವೆ. ಅಲ್ಲದೇ, ಅಂತರಾಷ್ಟ್ರಿಯ ಮಹಿಳಾ ದಿನ ಆಚರಿಸಿದ ಕೆಲ ದಿನಗಳಲ್ಲೇ ಅಫ್ಘಾನಿಸ್ಥಾನದ ಶಿಕ್ಷಣ ಇಲಾಖೆ 12 ವರ್ಷ ಮತ್ತು ಅದಕ್ಕೂ ಹೆಚ್ಚಿನ ವರ್ಷದ ಬಾಲಕಿಯರು ಸಾರ್ವಜನಿಕ ಸ್ಥಳಗಳಲ್ಲಿ ಹಾಡುವುದನ್ನು ಮೊಟಕುಗೊಳಿಸುವಂತಹ ನೋಟಿಸ್ ನೀಡಿರುವುದು ಮಾನವ ಹಕ್ಕುಗಳ ದಮನವಾಗಿದೆ ಎಂದು ಹಲವು ದೇಶಗಳ ಸಾಮಾಜಿಕ ಕಾರ್ಯಕರ್ತರು ದೂರಿದ್ದಾರೆ. ಅಲ್ಲದೆ, ಈ ಸುತ್ತೋಲೆಯ ವಿರುದ್ಧ ನಿಮ್ಮದೇ ಹಾಡಿನ ಮೂಲಕ ಪ್ರತಿಭಟಿಸುವಂತೆ ಕರೆ ನೀಡಿರುವುದು ಟ್ರೆಂಡ್ ಆಗುತ್ತಿದೆ.

ಇತ್ತೀಚಿಗಷ್ಟೇ ಉತ್ತರ ಪ್ರದೇಶದ ಪಂಚಾಯತ್  ಒಂದರ ಮುಖಂಡರು ಹುಡುಗಿಯರು ಜೀನ್ಸ್ ಮತ್ತು ಸ್ಕರ್ಟ್ ಧರಿಸಿದರೆ ಬಷಿಷ್ಕಾರ ಹಾಕುವುದಾಗಿ ಘೋಷಿಸಿದ್ದರು ಎಂಬುವುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Explainer | ಸ್ವಾಭಿಮಾನದ ಬಾಳ್ವೆಯ ತಳಹದಿ ಮಾನವ ಹಕ್ಕುಗಳು

Sukanya Samriddhi Yojana: ಸುಕನ್ಯಾ ಸಮೃದ್ಧಿ ಯೋಜನೆ.. ಹೆಣ್ಣು ಮಕ್ಕಳ ಭವಿಷ್ಯಕ್ಕೆ ವರದಾನ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ