ಅಫ್ಘಾನ್ ತೊರೆಯೋ ಭರದಲ್ಲಿ ಮಗುವನ್ನೇ ಮರೆತ ಪೋಷಕರು; ಏರ್​ಪೋರ್ಟ್​ನಲ್ಲಿ ಅನಾಥವಾಯ್ತು 7 ತಿಂಗಳ ಕಂದಮ್ಮ

Afghanistan Crisis: ಕಾಬೂಲ್​ನಲ್ಲಿ ವಾಸವಾಗಿರುವ ಆ ಹೆಣ್ಣು ಮಗುವಿನ ಅಪ್ಪ-ಅಮ್ಮ ದೇಶ ಬಿಟ್ಟು ತೆರಳುವ ಗಡಿಬಿಡಿಯಲ್ಲಿ ತಮ್ಮ 7 ತಿಂಗಳ ಹೆಣ್ಣು ಮಗುವನ್ನು ಕಳೆದುಕೊಂಡಿದ್ದಾರೆ.

ಅಫ್ಘಾನ್ ತೊರೆಯೋ ಭರದಲ್ಲಿ ಮಗುವನ್ನೇ ಮರೆತ ಪೋಷಕರು; ಏರ್​ಪೋರ್ಟ್​ನಲ್ಲಿ ಅನಾಥವಾಯ್ತು 7 ತಿಂಗಳ ಕಂದಮ್ಮ
ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಾಪತ್ತೆಯಾದ ಮಗು
Follow us
| Updated By: ಸುಷ್ಮಾ ಚಕ್ರೆ

Updated on:Aug 18, 2021 | 4:54 PM

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸದಿಂದ ಅಫ್ಘಾನ್​ನಲ್ಲಿ ನೆಲೆಸಿರುವವರು ದೇಶ ಬಿಟ್ಟು ಹೋಗತೊಡಗಿದ್ದಾರೆ. ಸಾವಿರಾರು ಜನರು ಸಿಕ್ಕ ವಿಮಾನವನ್ನೆಲ್ಲ ಹತ್ತಿಕೊಂಡು ದೇಶ ಬಿಟ್ಟು ಹೋಗುತ್ತಿದ್ದಾರೆ. ಈ ನಡುವೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನೂರಾರು ಜನರು ಒಂದೇ ಬಾರಿಗೆ ವಿಮಾನ ಹತ್ತಲು ಹೋಗಿ ಕಾಲ್ತುಳಿತಕ್ಕೆ ಒಳಗಾಗಿ, ವಿಮಾನದ ಚಕ್ರದ ಹಿಡಿಕೆಗಳಲ್ಲಿ ಜೋತಾಡುತ್ತಾ ಟೇಕಾಫ್ ಆದ ವಿಮಾನದೊಂದಿಗೆ ಮೇಲಕ್ಕೇರಿ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿತ್ತು. ಅಕ್ಷರಶಃ ಸಂತೆಯಂತಾಗಿದ್ದ ಕಾಬೂಲ್ ವಿಮಾನ ನಿಲ್ದಾಣದಲ್ಲಿ 7 ತಿಂಗಳ ಮಗುವೊಂದು ನಾಪತ್ತೆಯಾಗಿದೆ.

ಕಾಬೂಲ್​ನಲ್ಲಿ ವಾಸವಾಗಿರುವ ಆ ಹೆಣ್ಣು ಮಗುವಿನ ಅಪ್ಪ-ಅಮ್ಮ ದೇಶ ಬಿಟ್ಟು ತೆರಳುವ ಗಡಿಬಿಡಿಯಲ್ಲಿ ತಮ್ಮ 7 ತಿಂಗಳ ಹೆಣ್ಣು ಮಗುವನ್ನು ಕಳೆದುಕೊಂಡಿದ್ದಾರೆ. ವಿಮಾನ ನಿಲ್ದಾಣದ ಸುತ್ತಲೂ ಬಂದೂಕು ಹಿಡಿದು ನಿಂತಿರುವ ಸೈನಿಕರ ನಡುವೆ ಆ ಮಗುವನ್ನು ಹುಡುಕುವುದೇ ಕಷ್ಟಕರವಾಗಿದೆ. ಬಾಕ್ಸ್​ನಲ್ಲಿ ಮಲಗಿದ್ದ 7 ತಿಂಗಳ ಮಗುವಿನ ಫೋಟೋವನ್ನು ಪೊಲೀಸರು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಯಾರಾದರೂ ಈ ಮಗುವನ್ನು ನೋಡಿದರೆ ಮಾಹಿತಿ ನೀಡಿ ಎಂದು ಪೋಸ್ಟ್ ಮಾಡಿರುವುದು ಅಲ್ಲಿನ ಭಯಾನಕ ಸ್ಥಿತಿಗೆ ಸಾಕ್ಷಿ ಹೇಳುವಂತಿದೆ.

7 ತಿಂಗಳ ಮಗುವೊಂದು ಅಪ್ಪ-ಅಮ್ಮನಿಂದ ಬೇರೆಯಾಗಿ ಅಳುತ್ತಾ ಕುಳಿತಿರುವ ಫೋಟೋಗಳು ಭಾರೀ ವೈರಲ್ ಆಗಿವೆ. ಆ ಮಗುವಿನ ತಂದೆ-ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆ ಮಗುವಿನ ಬಗ್ಗೆ ಇನ್ನೂ ಯಾವ ಮಾಹಿತಿಯೂ ವಿಮಾನ ನಿಲ್ದಾಣದ ಸಿಬ್ಬಂದಿಗೆ ಸಿಕ್ಕಿಲ್ಲ. ಕಾಬೂಲ್​ ವಿಮಾನ ನಿಲ್ದಾಣದಲ್ಲಿ ನಡೆದ ಗಲಾಟೆ, ಹಿಂಸಾಚಾರದಲ್ಲಿ 10ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆ ಮಗು ಜೀವಂತವಾಗಿದೆಯೋ ಅಥವಾ ಕಾಲ್ತುಳಿತದಲ್ಲಿ ಸಾವನ್ನಪ್ಪಿದೆಯೋ ಎಂಬುದು ಕೂಡ ಇನ್ನೂ ಗೊತ್ತಾಗಿಲ್ಲ.

ಕಾಬೂಲ್​ನಿಂದ ವಿಮಾನಗಳು ಹೊರಡುತ್ತಿದ್ದಂತೆ ಅಫ್ಘಾನ್ ಬಿಟ್ಟು ಪ್ರಾಣ ಉಳಿಸಿಕೊಳ್ಳಲು ಹಾತೊರೆಯುತ್ತಿದ್ದ ಜನರು ಸಿಕ್ಕ ಸಿಕ್ಕ ವಿಮಾನಗಳನ್ನು ಹತ್ತಿಕೊಂಡಿದ್ದಾರೆ. ಈ ವೇಳೆ ವಿಮಾನದ ಚಕ್ರಕ್ಕೂ ಸಿಲುಕಿ ಹಲವರು ಗಾಯಗೊಂಡಿದ್ದರು. ಇನ್ನು ಕೆಲವರು ಸಾವನ್ನಪ್ಪಿದ್ದರು. ಕಾಬೂಲ್​ನಿಂದ ಅಮೆರಿಕಕ್ಕೆ ಬಂದ ಸಿ-17 ಗ್ಲೋಬ್​ಮಾಸ್ಟರ್ ವಿಮಾನದ ಚಕ್ರದ ಸುತ್ತ ಮನುಷ್ಯರ ರಕ್ತ, ಮಾಂಸದ ತುಂಡುಗಳು ಅಂಟಿಕೊಂಡಿದ್ದವು.

ಕಾಬೂಲ್​ನಿಂದ ಟೇಕಾಫ್ ಆಗಿದ್ದ ವಿಮಾನದಿಂದ ಕೆಳಗೆ ಬಿದ್ದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಘಟನೆ ನಡೆದಿದೆ. ವಿಮಾನದ ಟೈರ್​ ಸಮೀಪದ ಹಿಡಿಕೆಗೆ ಕಟ್ಟಿಕೊಂಡಿದ್ದ ಈ ಪ್ರಯಾಣಿಕರು ವಿಮಾನ ಟೇಕಾಫ್ ಆದ ನಿಮಿಷಗಳ ಬಳಿಕ ಕೆಳಗೆ ಬಿದ್ದಿದ್ದರು. ಈ ವಿಮಾನವು ಕಾಬೂಲ್‌ನಿಂದ ಅಮೆರಿಕಕ್ಕೆ ತೆರಳುತ್ತಿತ್ತು. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ ತಾಲೀಬಾನ್ ಉಗ್ರರ ವಶಕ್ಕೆ ಬರುತ್ತಿದ್ದಂತೆ ಅಲ್ಲಿನ ಜನರಲ್ಲಿ ಆತಂಕ ಶುರುವಾಗಿದೆ. ಸಾವಿರಾರು ಜನರು ದೇಶಬಿಟ್ಟು ಹೊರಗೆ ಹೋಗುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ವಿಮಾನ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗಿದ್ದು, ನೂಕಾಟ-ತಳ್ಳಾಟ ಸಾಮಾನ್ಯವಾಗಿತ್ತು. ಜನರನ್ನು ನಿಯಂತ್ರಿಸಲು ಅಮೆರಿಕ ಸೇನಾಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿತ್ತು.

ಇದನ್ನೂ ಓದಿ: Afghanistan: ತಾಲಿಬಾನಿಗಳಿಗೆ ತಲೆಬಾಗಲ್ಲ; ಈಗ ನಾನೇ ನಿಮ್ಮ ಅಧ್ಯಕ್ಷ: ಆಫ್ಘನ್ ಮೊದಲ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್ ಘೋಷಣೆ

ಅಫ್ಘಾನಿಸ್ತಾನದಿಂದ ಬಂದ ಅಮೆರಿಕದ ಮಿಲಿಟರಿ ವಿಮಾನದ ಚಕ್ರದ ಸುತ್ತ ಅಂಟಿತ್ತು ಮನುಷ್ಯರ ಪಳೆಯುಳಿಕೆ!

(Afghanistan Crisis: 7 month old Baby Separated from parents during chaos at Kabul Airport photo goes viral)

Published On - 4:54 pm, Wed, 18 August 21

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್