AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದಲ್ಲಿ ಸರ್ಕಾರಿ ಉದ್ಯೋಗಿಗಳು ಗಡ್ಡ ಬಿಡುವುದು ಕಡ್ಡಾಯ; ಸೂಟ್ ಧರಿಸಿದವರಿಗೆ ನೋ ಎಂಟ್ರಿ!

ಇಸ್ಲಾಮಿಕ್ ಧರ್ಮದ ನಿಯಮದ ಪ್ರಕಾರ ಮುಂಜಾನೆ ಮತ್ತು ಮುಸ್ಸಂಜೆಯ ನಡುವೆ 6 ಬಾರಿ ಸರಿಯಾದ ಸಮಯದಲ್ಲಿ ನಮಾಜ್ ಮಾಡಲು ಅಫ್ಘಾನಿಸ್ತಾನದ ಸರ್ಕಾರಿ ಉದ್ಯೋಗಿಗಳಿಗೆ ಹೇಳಲಾಗಿದೆ.

Afghanistan: ಅಫ್ಘಾನಿಸ್ತಾನದಲ್ಲಿ ಸರ್ಕಾರಿ ಉದ್ಯೋಗಿಗಳು ಗಡ್ಡ ಬಿಡುವುದು ಕಡ್ಡಾಯ; ಸೂಟ್ ಧರಿಸಿದವರಿಗೆ ನೋ ಎಂಟ್ರಿ!
ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗರು
TV9 Web
| Updated By: ಸುಷ್ಮಾ ಚಕ್ರೆ|

Updated on:Apr 01, 2022 | 6:15 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಜಾರಿಯಲ್ಲಿರುವ ತಾಲಿಬಾನ್ ಸರ್ಕಾರ (Taliban Government) ಸರ್ಕಾರಿ ನೌಕರರಿಗೆ ಹೊಸ ಡ್ರೆಸ್ ಕೋಡ್ (Dress Code) ಜಾರಿಗೊಳಿಸಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಪುರುಷ ಸರ್ಕಾರಿ ನೌಕರರು ಗಡ್ಡವಿಲ್ಲದೆ ಕಚೇರಿಗೆ ಬರುವಂತಿಲ್ಲ. ಇದಿಷ್ಟೇ ಅಲ್ಲದೆ, ಸರ್ಕಾರಿ ನೌಕರರು ಸೂಟ್‌ಗಳನ್ನು ಧರಿಸಬಾರದು ಎಂಬ ನಿಯಮವನ್ನೂ ಜಾರಿಗೆ ತರಲಾಗಿದೆ. ಸರ್ಕಾರಿ ನೌಕರರು ಸೂಟ್ ಧರಿಸುವುದರ ಬದಲು ಉದ್ದನೆಯ ಜುಬ್ಬಾ ಧರಿಸಿ, ಪ್ಯಾಂಟ್ ಹಾಕಿಕೊಳ್ಳಬೇಕು. ಹಾಗೇ ತಮ್ಮ ತಲೆಯನ್ನು ಮುಚ್ಚಲು ಟೋಪಿ ಅಥವಾ ಪೇಟ ಧರಿಸಬೇಕು ಎಂದು ಆದೇಶಿಸಲಾಗಿದೆ.

ಇಸ್ಲಾಮಿಕ್ ಧರ್ಮದ ನಿಯಮದ ಪ್ರಕಾರ ಮುಂಜಾನೆ ಮತ್ತು ಮುಸ್ಸಂಜೆಯ ನಡುವೆ 6 ಬಾರಿ ಸರಿಯಾದ ಸಮಯದಲ್ಲಿ ನಮಾಜ್ ಮಾಡಲು ಅಫ್ಘಾನಿಸ್ತಾನದ ಸರ್ಕಾರಿ ಉದ್ಯೋಗಿಗಳಿಗೆ ಹೇಳಲಾಗಿದೆ. ನೀತಿ ಸಂಹಿತೆಯ ಉಲ್ಲಂಘನೆ ಮಾಡಿದ ಕಾರ್ಮಿಕರನ್ನು ಕಚೇರಿಗಳಿಗೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ. ಅವರು ಪದೇಪದೆ ಡ್ರೆಸ್ ಕೋಡ್ ನಿಯಮ ಉಲ್ಲಂಘಿಸಿದರೆ ಅವರನ್ನು ಕೆಲಸದಿಂದ ವಜಾ ಮಾಡಬಹುದು ಎಂದು ತಾಲಿಬಾನ್ ಸರ್ಕಾರ ಹೇಳಿದೆ.

ಅಫ್ಘಾನಿಸ್ತಾನದಲ್ಲಿ 9 ತಿಂಗಳ ನಂತರ ತರಗತಿಗಳು ಪುನರಾರಂಭಗೊಳ್ಳಲಿದ್ದು, ಕಳೆದ ವಾರವಷ್ಟೇ ತಾಲಿಬಾನ್‌ಗಳು ಪ್ರೌಢಶಾಲೆಗೆ ಹಾಜರಾಗಲು ಹುಡುಗಿಯರ ಪ್ರವೇಶಕ್ಕೆ ಅನುಮತಿ ನಿರಾಕರಿಸಿತ್ತು. ಅಲ್ಲದೆ, ಬಾಲಕಿಯರು ಮತ್ತು ಯುವತಿಯರು ಪುರುಷರಿಲ್ಲದೆ ಅಥವಾ ಕುಟುಂಬದ ಸದಸ್ಯರಿಲ್ಲದೆ ಏಕಾಂಗಿಯಾಗಿ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ಪಾರ್ಕ್ಗಳಲ್ಲಿ ಕೂಡ ಮಹಿಳೆಯರಿಗೆ ಮತ್ತು ಪುರುಷರಿಗೆ ಬೇರೆ ಬೇರೆ ವಲಯಗಳನ್ನು ವಿಭಜಿಸಲಾಗಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನ: ಬಾಲಕಿಯರ ಶಾಲೆಗಳನ್ನು ತೆರೆದ ಕೆಲವೇ ಗಂಟೆಗಳ ನಂತರ ಮುಚ್ಚಿಸಿದ ತಾಲಿಬಾನ್

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ 6 ತಿಂಗಳು; ಅಫ್ಘಾನ್ ಜನತೆ ಸುರಕ್ಷಿತ, ಬಡತನದೊಂದಿಗೆ ಭರವಸೆ ಇಲ್ಲದ ಬದುಕು

Published On - 6:14 pm, Fri, 1 April 22

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ