AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಪಾಕಿಸ್ತಾನದ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ; ತಾಲಿಬಾನ್ ಸೂಚನೆ

Afghanistan Crisis: ಭಾರತ ಮತ್ತು ಪಾಕಿಸ್ತಾನದ ಆಂತರಿಕ ಜಗಳವನ್ನು ಆ ಎರಡು ದೇಶಗಳೇ ಬಗೆಹರಿಸಿಕೊಳ್ಳಲಿ. ಈ ವಿಷಯಕ್ಕೆ ಅಫ್ಘಾನಿಸ್ತಾವನ್ನು ಎಳೆದು ತರಬೇಡಿ. ನಾವು ಅಫ್ಘಾನಿಸ್ತಾನದ ನೆರೆಯ ದೇಶಗಳೊಂದಿಗೆ ಉತ್ತಮ ಸಂಬಂಧ ಹೊಂದಲು ಇಚ್ಛಿಸುತ್ತೇವೆ ಎಂದು ತಾಲಿಬಾನ್ ಹೇಳಿದೆ.

ಭಾರತ- ಪಾಕಿಸ್ತಾನದ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ; ತಾಲಿಬಾನ್ ಸೂಚನೆ
ತಾಲಿಬಾನ್ ನಾಯಕ ಶೇರ್ ಮೊಹಮ್ಮದ್ ಅಬ್ಬಾಸ್ ಸ್ತಾನಿಕ್​ಜಾಯ್​
TV9 Web
| Updated By: ಸುಷ್ಮಾ ಚಕ್ರೆ|

Updated on:Aug 30, 2021 | 4:22 PM

Share

ಕಾಬೂಲ್: ಭಾರತ ಮತ್ತು ಪಾಕಿಸ್ತಾನದ ಗಡಿ ವಿವಾದ ಇಂದು- ನಿನ್ನೆಯದಲ್ಲ. ಆ ಎರಡೂ ರಾಷ್ಟ್ರಗಳು ತಮ್ಮ ಗಡಿಯಲ್ಲೇ ಕಿತ್ತಾಡಿಕೊಳ್ಳಲಿ. ಆದರೆ, ಆ ಎರಡು ದೇಶಗಳ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರುವುದು ಸರಿಯಲ್ಲ. ಭಾರತ ಮತ್ತು ಪಾಕಿಸ್ತಾನದ ಆಂತರಿಕ ಜಗಳವನ್ನು ಆ ಎರಡು ದೇಶಗಳೇ ಬಗೆಹರಿಸಿಕೊಳ್ಳಲಿ. ಈ ವಿಷಯಕ್ಕೆ ಅಫ್ಘಾನಿಸ್ತಾವನ್ನು ಎಳೆದು ತರುವುದನ್ನು ನಾವು ಒಪ್ಪುವುದಿಲ್ಲ, ಹಾಗೇ ಯಾವ ದೇಶಕ್ಕೂ ನಮ್ಮ ಅಫ್ಘಾನಿಸ್ತಾನದ ಭೂಮಿಯನ್ನು ಬಳಸಲು ನಾವು ಅವಕಾಶ ನೀಡುವುದಿಲ್ಲ ಎಂದು ಅಫ್ಘಾನಿಸ್ತಾನದ ಮುಂದಿನ ವಿದೇಶಾಂಗ ಸಚಿವ ಹಾಗೂ ತಾಲಿಬಾನ್ ನಾಯಕ ಶೇರ್ ಮೊಹಮ್ಮದ್ ಅಬ್ಬಾಸ್ ಸ್ತಾನಿಕ್​ಜಾಯ್​ ಎಚ್ಚರಿಕೆ ನೀಡಿದ್ದಾರೆ.

ಅಫ್ಘಾನಿಸ್ತಾನದ ನೆರೆಹೊರೆಯ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಲು ತಾಲಿಬಾನ್ ಇಷ್ಟಪಡುತ್ತದೆ. ವಿನಾಕಾರಣ ಬೇರೆ ದೇಶಗಳ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ. ಭಾರತದ ಮೇಲೆ ತಾಲಿಬಾನ್ ದಾಳಿ ನಡೆಸುವ ಬಗ್ಗೆ ಮಾಧ್ಯಮಗಳು ಸುಳ್ಳು ಸುದ್ದಿ ಹರಡಿವೆ. ನಮಗೆ ಆ ರೀತಿಯ ಯಾವ ಉದ್ದೇಶವೂ ಇಲ್ಲ ಎಂದು ತಾಲಿಬಾನ್ ನಾಯಕ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಉದ್ದವಾದ ಗಡಿ ಇದೆ. ಆ ಎರಡೂ ದೇಶಗಳು ತಮ್ಮ ಗಡಿಯಲ್ಲಿ ಹೋರಾಡಲಿ. ಆದರೆ, ಅವರು ಇದಕ್ಕಾಗಿ ಅಫ್ಘಾನಿಸ್ತಾನವನ್ನು ಬಳಸಬಾರದು. ಇದರಲ್ಲಿ ಅಫ್ಘಾನಿಸ್ತಾನ ಅಥವಾ ತಾಲಿಬಾನ್ ಪಾತ್ರ ಇರುವುದಿದಲ್ಲ ಎಂದು ತಾಲಿಬಾನ್ ನಯಕ ಘೋಷಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರ ಜಬಿವುಲ್ಲಾ ಮುಜಾಹಿದ್ ಕೂಡ, ಕಾಶ್ಮೀರ ಗಡಿ ವಿಚಾರವಾಗಿ ಭಾರತ ಮತ್ತು ಪಾಕಿಸ್ತಾನವೇ ಪರಿಹಾರ ಕಂಡುಕೊಳ್ಳಬೇಕು. ಪಾಕಿಸ್ತಾನ ನಮಗೆ ಎರಡನೇ ಮನೆ ಇದ್ದಂತೆ. ಪಾಕಿಸ್ತಾನದ ಜೊತೆಗೆ ನಮಗೆ ಆಪ್ತ ಸಂಬಂಧವಿದ್ದರೂ ಭಾರತ ಮತ್ತು ಪಾಕಿಸ್ತಾನದ ಗಡಿ ವಿಚಾರಕ್ಕೆ ಅಫ್ಘಾನಿಸ್ತಾನದಲ್ಲಿ ರಚನೆಯಾಗಲಿರುವ ನಮ್ಮ ಸರ್ಕಾರ ತಲೆ ಹಾಕುವುದಿಲ್ಲ. ಕಾಶ್ಮೀರದಲ್ಲಿರುವ ವಿವಾದಿತ ಪ್ರದೇಶದ ಬಗ್ಗೆ ಭಾರತ ಉತ್ತಮ ನಿರ್ಧಾರಕ್ಕೆ ಬರುವುದು ಒಳ್ಳೆಯದು ಎಂದು ಹೇಳಿದ್ದರು.

ಕೆಲವು ದಿನಗಳ ಹಿಂದೆ, ಭಾರತಕ್ಕೆ ಎದಿರೇಟು ನೀಡಲೆಂದೇ ಪಾಕಿಸ್ತಾನ ತಾಲಿಬಾನ್‌ ಸಂಘಟನೆಗೆ ಬೆಂಬಲ ನೀಡುತ್ತಿದೆ ಎಂದು ಪರ್ವೇಜ್ ಮುಷರಫ್ ಹೇಳಿದ್ದರು ಎಂದು ಅಫ್ಘಾನಿಸ್ತಾನದ ಮಾಜಿ ಉಪ ವಿದೇಶಾಂಗ ಸಚಿವ ಮೊಹಮ್ಮದ್ ಸಾಯ್ಕಲ್ ಟ್ವೀಟ್ ಮಾಡಿದ್ದರು.

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶವಾದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಲ್ಲಿದ್ದ 170 ನಾಯಿ, ಬೆಕ್ಕುಗಳ ಏರ್‌ಲಿಫ್ಟ್‌ ಮಾಡಲಾಗಿದೆ. ಚಾರಿಟಿ ಮೂಲಕ ಹಣ ಸಂಗ್ರಹಿಸಿ ಬ್ರಿಟನ್‌ಗೆ ಏರ್‌ಲಿಫ್ಟ್‌ ಮಾಡಲಾಗಿದೆ. ಜೊತೆಗೆ, ಸುಮಾರು 200 ವಿಮಾನ, ಹೆಲಿಕಾಪ್ಟರ್​ಗಳನ್ನು ತಾಲಿಬಾನ್ ವಶಕ್ಕೆ ಪಡೆದಿದೆ. ಅಮೆರಿಕ ಬಿಟ್ಟುಹೋದ ಕಾಬೂಲ್ ಏರ್​ಪೋರ್ಟ್​ನಲ್ಲಿರುವ ವಿಮಾನ, ಹೆಲಿಕಾಪ್ಟರ್‌ಗಳನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದಿದೆ.

ಇದನ್ನೂ ಓದಿ: Afghanistan Crisis: 6 ವರ್ಷ ಅಮೆರಿಕ ಸೇನೆಯ ಬಂಧಿಯಾಗಿದ್ದಾತ ಅಫ್ಘಾನಿಸ್ತಾನದ ಮುಂದಿನ ರಕ್ಷಣಾ ಸಚಿವ!

ಅಫ್ಘಾನಿಸ್ತಾನದಲ್ಲಿ ಅಮೆರಿಕ ಬಿಟ್ಟುಹೋದ 200ಕ್ಕೂ ಹೆಚ್ಚು ವಿಮಾನ, ಹೆಲಿಕಾಪ್ಟರ್​ಗಳು ತಾಲಿಬಾನ್ ವಶಕ್ಕೆ

(Dont drag Afghanistan in your Border fight Taliban Foreign Affairs Chief to India and Pakistan)

Published On - 4:12 pm, Mon, 30 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ