ಭಾರತ- ಪಾಕಿಸ್ತಾನದ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ; ತಾಲಿಬಾನ್ ಸೂಚನೆ

Afghanistan Crisis: ಭಾರತ ಮತ್ತು ಪಾಕಿಸ್ತಾನದ ಆಂತರಿಕ ಜಗಳವನ್ನು ಆ ಎರಡು ದೇಶಗಳೇ ಬಗೆಹರಿಸಿಕೊಳ್ಳಲಿ. ಈ ವಿಷಯಕ್ಕೆ ಅಫ್ಘಾನಿಸ್ತಾವನ್ನು ಎಳೆದು ತರಬೇಡಿ. ನಾವು ಅಫ್ಘಾನಿಸ್ತಾನದ ನೆರೆಯ ದೇಶಗಳೊಂದಿಗೆ ಉತ್ತಮ ಸಂಬಂಧ ಹೊಂದಲು ಇಚ್ಛಿಸುತ್ತೇವೆ ಎಂದು ತಾಲಿಬಾನ್ ಹೇಳಿದೆ.

ಭಾರತ- ಪಾಕಿಸ್ತಾನದ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ; ತಾಲಿಬಾನ್ ಸೂಚನೆ
ತಾಲಿಬಾನ್ ನಾಯಕ ಶೇರ್ ಮೊಹಮ್ಮದ್ ಅಬ್ಬಾಸ್ ಸ್ತಾನಿಕ್​ಜಾಯ್​
Follow us
| Updated By: ಸುಷ್ಮಾ ಚಕ್ರೆ

Updated on:Aug 30, 2021 | 4:22 PM

ಕಾಬೂಲ್: ಭಾರತ ಮತ್ತು ಪಾಕಿಸ್ತಾನದ ಗಡಿ ವಿವಾದ ಇಂದು- ನಿನ್ನೆಯದಲ್ಲ. ಆ ಎರಡೂ ರಾಷ್ಟ್ರಗಳು ತಮ್ಮ ಗಡಿಯಲ್ಲೇ ಕಿತ್ತಾಡಿಕೊಳ್ಳಲಿ. ಆದರೆ, ಆ ಎರಡು ದೇಶಗಳ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರುವುದು ಸರಿಯಲ್ಲ. ಭಾರತ ಮತ್ತು ಪಾಕಿಸ್ತಾನದ ಆಂತರಿಕ ಜಗಳವನ್ನು ಆ ಎರಡು ದೇಶಗಳೇ ಬಗೆಹರಿಸಿಕೊಳ್ಳಲಿ. ಈ ವಿಷಯಕ್ಕೆ ಅಫ್ಘಾನಿಸ್ತಾವನ್ನು ಎಳೆದು ತರುವುದನ್ನು ನಾವು ಒಪ್ಪುವುದಿಲ್ಲ, ಹಾಗೇ ಯಾವ ದೇಶಕ್ಕೂ ನಮ್ಮ ಅಫ್ಘಾನಿಸ್ತಾನದ ಭೂಮಿಯನ್ನು ಬಳಸಲು ನಾವು ಅವಕಾಶ ನೀಡುವುದಿಲ್ಲ ಎಂದು ಅಫ್ಘಾನಿಸ್ತಾನದ ಮುಂದಿನ ವಿದೇಶಾಂಗ ಸಚಿವ ಹಾಗೂ ತಾಲಿಬಾನ್ ನಾಯಕ ಶೇರ್ ಮೊಹಮ್ಮದ್ ಅಬ್ಬಾಸ್ ಸ್ತಾನಿಕ್​ಜಾಯ್​ ಎಚ್ಚರಿಕೆ ನೀಡಿದ್ದಾರೆ.

ಅಫ್ಘಾನಿಸ್ತಾನದ ನೆರೆಹೊರೆಯ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಲು ತಾಲಿಬಾನ್ ಇಷ್ಟಪಡುತ್ತದೆ. ವಿನಾಕಾರಣ ಬೇರೆ ದೇಶಗಳ ಜಗಳದಲ್ಲಿ ಅಫ್ಘಾನಿಸ್ತಾನವನ್ನು ಎಳೆದು ತರಬೇಡಿ. ಭಾರತದ ಮೇಲೆ ತಾಲಿಬಾನ್ ದಾಳಿ ನಡೆಸುವ ಬಗ್ಗೆ ಮಾಧ್ಯಮಗಳು ಸುಳ್ಳು ಸುದ್ದಿ ಹರಡಿವೆ. ನಮಗೆ ಆ ರೀತಿಯ ಯಾವ ಉದ್ದೇಶವೂ ಇಲ್ಲ ಎಂದು ತಾಲಿಬಾನ್ ನಾಯಕ ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಉದ್ದವಾದ ಗಡಿ ಇದೆ. ಆ ಎರಡೂ ದೇಶಗಳು ತಮ್ಮ ಗಡಿಯಲ್ಲಿ ಹೋರಾಡಲಿ. ಆದರೆ, ಅವರು ಇದಕ್ಕಾಗಿ ಅಫ್ಘಾನಿಸ್ತಾನವನ್ನು ಬಳಸಬಾರದು. ಇದರಲ್ಲಿ ಅಫ್ಘಾನಿಸ್ತಾನ ಅಥವಾ ತಾಲಿಬಾನ್ ಪಾತ್ರ ಇರುವುದಿದಲ್ಲ ಎಂದು ತಾಲಿಬಾನ್ ನಯಕ ಘೋಷಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರ ಜಬಿವುಲ್ಲಾ ಮುಜಾಹಿದ್ ಕೂಡ, ಕಾಶ್ಮೀರ ಗಡಿ ವಿಚಾರವಾಗಿ ಭಾರತ ಮತ್ತು ಪಾಕಿಸ್ತಾನವೇ ಪರಿಹಾರ ಕಂಡುಕೊಳ್ಳಬೇಕು. ಪಾಕಿಸ್ತಾನ ನಮಗೆ ಎರಡನೇ ಮನೆ ಇದ್ದಂತೆ. ಪಾಕಿಸ್ತಾನದ ಜೊತೆಗೆ ನಮಗೆ ಆಪ್ತ ಸಂಬಂಧವಿದ್ದರೂ ಭಾರತ ಮತ್ತು ಪಾಕಿಸ್ತಾನದ ಗಡಿ ವಿಚಾರಕ್ಕೆ ಅಫ್ಘಾನಿಸ್ತಾನದಲ್ಲಿ ರಚನೆಯಾಗಲಿರುವ ನಮ್ಮ ಸರ್ಕಾರ ತಲೆ ಹಾಕುವುದಿಲ್ಲ. ಕಾಶ್ಮೀರದಲ್ಲಿರುವ ವಿವಾದಿತ ಪ್ರದೇಶದ ಬಗ್ಗೆ ಭಾರತ ಉತ್ತಮ ನಿರ್ಧಾರಕ್ಕೆ ಬರುವುದು ಒಳ್ಳೆಯದು ಎಂದು ಹೇಳಿದ್ದರು.

ಕೆಲವು ದಿನಗಳ ಹಿಂದೆ, ಭಾರತಕ್ಕೆ ಎದಿರೇಟು ನೀಡಲೆಂದೇ ಪಾಕಿಸ್ತಾನ ತಾಲಿಬಾನ್‌ ಸಂಘಟನೆಗೆ ಬೆಂಬಲ ನೀಡುತ್ತಿದೆ ಎಂದು ಪರ್ವೇಜ್ ಮುಷರಫ್ ಹೇಳಿದ್ದರು ಎಂದು ಅಫ್ಘಾನಿಸ್ತಾನದ ಮಾಜಿ ಉಪ ವಿದೇಶಾಂಗ ಸಚಿವ ಮೊಹಮ್ಮದ್ ಸಾಯ್ಕಲ್ ಟ್ವೀಟ್ ಮಾಡಿದ್ದರು.

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶವಾದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಲ್ಲಿದ್ದ 170 ನಾಯಿ, ಬೆಕ್ಕುಗಳ ಏರ್‌ಲಿಫ್ಟ್‌ ಮಾಡಲಾಗಿದೆ. ಚಾರಿಟಿ ಮೂಲಕ ಹಣ ಸಂಗ್ರಹಿಸಿ ಬ್ರಿಟನ್‌ಗೆ ಏರ್‌ಲಿಫ್ಟ್‌ ಮಾಡಲಾಗಿದೆ. ಜೊತೆಗೆ, ಸುಮಾರು 200 ವಿಮಾನ, ಹೆಲಿಕಾಪ್ಟರ್​ಗಳನ್ನು ತಾಲಿಬಾನ್ ವಶಕ್ಕೆ ಪಡೆದಿದೆ. ಅಮೆರಿಕ ಬಿಟ್ಟುಹೋದ ಕಾಬೂಲ್ ಏರ್​ಪೋರ್ಟ್​ನಲ್ಲಿರುವ ವಿಮಾನ, ಹೆಲಿಕಾಪ್ಟರ್‌ಗಳನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದಿದೆ.

ಇದನ್ನೂ ಓದಿ: Afghanistan Crisis: 6 ವರ್ಷ ಅಮೆರಿಕ ಸೇನೆಯ ಬಂಧಿಯಾಗಿದ್ದಾತ ಅಫ್ಘಾನಿಸ್ತಾನದ ಮುಂದಿನ ರಕ್ಷಣಾ ಸಚಿವ!

ಅಫ್ಘಾನಿಸ್ತಾನದಲ್ಲಿ ಅಮೆರಿಕ ಬಿಟ್ಟುಹೋದ 200ಕ್ಕೂ ಹೆಚ್ಚು ವಿಮಾನ, ಹೆಲಿಕಾಪ್ಟರ್​ಗಳು ತಾಲಿಬಾನ್ ವಶಕ್ಕೆ

(Dont drag Afghanistan in your Border fight Taliban Foreign Affairs Chief to India and Pakistan)

Published On - 4:12 pm, Mon, 30 August 21

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​