AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ. 31ರೊಳಗೆ ಅಫ್ಘಾನ್​ನಿಂದ ಸೇನೆ ಹಿಂಪಡೆಯದಿದ್ದರೆ ಅಪಾಯ ಎದುರಿಸಬೇಕಾದೀತು; ಅಮೆರಿಕಕ್ಕೆ ತಾಲಿಬಾನ್ ಎಚ್ಚರಿಕೆ

ಅಫ್ಘಾನಿಸ್ತಾನದಲ್ಲಿರುವ ಅಮೆರಿಕ ಸೇನೆಯನ್ನು ಆ. 31ರೊಳಗೆ ವಾಪಾಸ್ ಕರೆಸಿಕೊಳ್ಳದಿದ್ದರೆ ಅರದ ಪರಿಣಾಮವನ್ನು ಎದುರಿಸಬೇಕಾದೀತು ಎಂದು ತಾಲಿಬಾನ್ ಅಮೆರಿಕಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಆ. 31ರೊಳಗೆ ಅಫ್ಘಾನ್​ನಿಂದ ಸೇನೆ ಹಿಂಪಡೆಯದಿದ್ದರೆ ಅಪಾಯ ಎದುರಿಸಬೇಕಾದೀತು; ಅಮೆರಿಕಕ್ಕೆ ತಾಲಿಬಾನ್ ಎಚ್ಚರಿಕೆ
ಮಗುವನ್ನು ಉಳಿಸಲು ಅಮೆರಿಕ ಪಡೆಗೆ ನೀಡಿದ ಪೋಷಕರು
TV9 Web
| Edited By: |

Updated on: Aug 23, 2021 | 7:30 PM

Share

ಕಾಬೂಲ್: ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನದಲ್ಲಿ (Afghanistan) ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಅಮೆರಿಕ, ಭಾರತ, ರಷ್ಯಾ ಸೇರಿದಂತೆ ಹಲವು ದೇಶಗಳು ಮಿಲಿಟರಿ ವಿಮಾನಗಳ ಮೂಲಕ ಅಫ್ಘಾನ್​ನಲ್ಲಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಾಸ್ ಕರೆತಂದಿದ್ದಾರೆ. ಇನ್ನೂ ಅಫ್ಘಾನಿಸ್ತಾನದಲ್ಲಿರುವ ಅಮೆರಿಕ ಸೇನೆಯನ್ನು ಆ. 31ರೊಳಗೆ ವಾಪಾಸ್ ಕರೆಸಿಕೊಳ್ಳದಿದ್ದರೆ ಅರದ ಪರಿಣಾಮವನ್ನು ಎದುರಿಸಬೇಕಾದೀತು ಎಂದು ತಾಲಿಬಾನ್ (Taliban) ಅಮೆರಿಕಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಅಮೆರಿಕದ ಅಧ್ಯಕ್ಷ ಜೋ ಬಿಡೆನ್, ತಾಲಿಬಾನ್ ಮೇಲಿನ ನಿರ್ಬಂಧ ಸಡಿಲಿಕೆ ಸಾಧ್ಯವಿಲ್ಲ. ನಮ್ಮ ಮುಂದಿನ ನಿರ್ಧಾರ ತಾಲಿಬಾನ್​ ಸಂಘಟನೆಯ ನಡೆಯನ್ನು ಆಧರಿಸಿದೆ ಎಂದು ಹೇಳಿದ್ದರು. ಅಲ್ಲದೆ, ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಂಡ ಮಾತ್ರಕ್ಕೆ ಈಗಾಗಲೇ ಅಫ್ಘಾನ್ ವಿರುದ್ಧ ಅಮೆರಿಕ ವಿಧಿಸಿರುವ ಕಠಿಣ ನಿರ್ಬಂಧಗಳನ್ನು ಕೈ ಬಿಡಲು ಸಾಧ್ಯವಿಲ್ಲ. ನಿರ್ಬಂಧ ಸಡಿಲಿಕೆ ತಾಲಿಬಾನ್‌ ನಡವಳಿಕೆಯನ್ನು ಅವಲಂಬಿಸಿರುತ್ತದೆ. ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲೂ ಭದ್ರತಾ ವಲಯವನ್ನು ಇನ್ನಷ್ಟು ವಿಸ್ತರಿಸಲಾಗುವುದು. ಆಗಸ್ಟ್‌ 31ರೊಳಗೆ ಪೂರ್ಣಗೊಳ್ಳಲಿರುವ, ಸೇನಾ ಪಡೆಗಳ ವಾಪಾಸಾತಿ ಅವಧಿ ವಿಸ್ತರಿಸುವ ಸಾಧ್ಯತೆಗಳ ಬಗ್ಗೆ ಅಮೆರಿಕಾ ಭದ್ರತಾ ಪಡೆಗಳೊಂದಿಗೆ ಚರ್ಚಿಸುತ್ತೇವೆ ಎಂದು ಕೂಡ ಜೋ ಬಿಡೆನ್ ಮಾಧ್ಯಮಗಳಿಗೆ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಎಚ್ಚರಿಕೆ ಸಂದೇಶವನ್ನು ರವಾನಿಸಿರುವ ತಾಲಿಬಾನ್ಆ . 31ರೊಳಗೆ ಅಫ್ಘಾನಿಸ್ತಾನದಿಂದ ಅಮೆರಿಕ ತನ್ನ ಸೇನೆಯನ್ನು ವಾಪಾಸ್ ಕರೆಸಿಕೊಳ್ಳದೆ ಅದರಿಂದಾಗುವ ಪರಿಣಾಮಗಳಿಗೆ ನಾವು ಹೊಣೆಯಲ್ಲ. ಇದು ರೆಡ್ ಲೈನ್ ಆಗಿದ್ದು, ಈ ಗಡುವನ್ನು ಮೀರಿ ಅಮೆರಿಕ ಸೇನೆಗೆ ಸಮಯಾವಕಾಶ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಬಗ್ಗೆ ತಾಲಿಬಾನ್ ವಕ್ತಾರ ಸುಹೇಲ್ ಶಹೀನ್ ಮಾಹಿತಿ ನೀಡಿದ್ದಾರೆ.

ಒಂದುವೇಳೆ ಅಫ್ಘಾನಿಸ್ತಾನದಿಂದ ತಮ್ಮ ಸೇನೆಯನ್ನು ಹಿಂಪಡೆಯಲು ಅಮೆರಿಕ ಹಾಗೂ ಇಂಗ್ಲೆಂಡ್ ಆ. 31ರ ನಂತರವೂ ಗಡುವು ವಿಸ್ತಾರ ಮಾಡಬೇಕೆಂಬ ಮನವಿಯನ್ನು ಇಟ್ಟರೆ ನಾವು ಅದಕ್ಕೆ ಒಪ್ಪುವ ಮಾತೇ ಇಲ್ಲ. ಒಂದುವೇಳೆ ರೆಡ್ ಲೈನ್ ಮೀರಿ ಅವರ ಸೈನ್ ಅಫ್ಘಾನ್​ನಲ್ಲೇ ಉಳಿದರೆ ಅದರ ಪರಿಣಾಮ ಕೆಟ್ಟದಾಗಿರುತ್ತದೆ ಎಂದು ಸುಹೇಲ್ ಹೇಳಿದ್ದಾರೆ.

ಅಫ್ಘಾನಿಸ್ತಾನದಿಂದ ಜಾಗ ಖಾಲಿ ಮಾಡಲು ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಹಲವು ವಿದೇಶೀಯ ಸೇನೆಗಳಿಗೆ ಆ. 31ರವರೆಗೆ ತಾಲಿಬಾನ್ ಸಮಯಾವಕಾಶ ನೀಡಿದೆ. ತಾಲಿಬಾನ್ ಅಟ್ಟಹಾಸದಿಂದ ಈಗಾಗಲೇ ಸಾವಿರಾರು ವಿದೇಶೀಯರು ಅಫ್ಘಾನಿಸ್ತಾದಿಂದ ಬೇರೆ ಬೇರೆ ದೇಶಗಳಿಗೆ ವಲಸೆ ಹೋಗಿದ್ದಾರೆ. ಈ ವೇಳೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಗಲಾಟೆಯಲ್ಲಿ 20 ಜನರು ಸಾವನ್ನಪ್ಪಿದ್ದಾರೆ.

ಅಫ್ಘಾನಿಸ್ತಾನಕ್ಕೆ ಅಮೆರಿಕ ಪೂರೈಸಿದ್ದ ಯುದ್ಧೋಪಕರಣಗಳು ತಾಲಿಬಾನ್ ಕೈ ಸೇರಿದೆ ಎಂದು ಅಮೆರಿಕದ ರಕ್ಷಣಾ ಅಧಿಕಾರಿ ಖಚಿತಪಡಿಸಿದ್ದಾರೆ. ಅಮೆರಿಕದ ಮಿಲಿಟರಿ ಪಡೆಗಳಿಂದ ಪೂರೈಸಲಾಗಿದ್ದ ವಾಹನಗಳು, ಯುದ್ದೋಪಕರಣಗಳನ್ನು ಅಫ್ಘಾನ್ ಸರ್ಕಾರ ತಾಲಿಬಾನ್ ವಶಕ್ಕೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Afghanistan Photos: ಅಫ್ಘಾನಿಸ್ತಾನದಲ್ಲಿ ಹೆತ್ತವರಿಗೂ ಭಾರವಾದ ಮಕ್ಕಳು; ಬಂದೂಕಿನ ಸದ್ದಿನಲ್ಲಿ ಮಕ್ಕಳ ಆಕ್ರಂದನ ಕೇಳುವವರಾರು?

ಅಫ್ಘಾನಿಸ್ತಾನ ತಾಲಿಬಾನ್ ವಶವಾಗಿದ್ದಕ್ಕೆ ಪಾಕಿಸ್ತಾನದಲ್ಲಿ ಜೈಕಾರ; ಮಹಿಳಾ ಮದರಸಾಗಳ ಮೇಲೆ ತಾಲಿಬಾನ್ ಬಾವುಟ!

(Afghanistan Crisis: Taliban warn of consequences if deadline for withdrawal of United States troops is extended)

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ