AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು

ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ಭಾನುವಾರ ಬೆಳಗ್ಗೆ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪನದ ಅನುಭವವಾಯಿತು. ಕಳೆದ ಕೆಲವು ವಾರಗಳಿಂದ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಡೀ ಗ್ರಾಮಗಳು ನಾಶವಾಗಿವೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು
ಭೂಕಂಪ-ಸಾಂದರ್ಭಿಕ ಚಿತ್ರImage Credit source: Aljazeera
ನಯನಾ ರಾಜೀವ್
|

Updated on: Oct 15, 2023 | 11:03 AM

Share

ಅಫ್ಘಾನಿಸ್ತಾನ(Afghanistan)ದಲ್ಲಿ ಮತ್ತೆ ಪ್ರಬಲ ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ಭಾನುವಾರ ಬೆಳಗ್ಗೆ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪನದ ಅನುಭವವಾಯಿತು. ಕಳೆದ ಕೆಲವು ವಾರಗಳಿಂದ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಡೀ ಗ್ರಾಮಗಳು ನಾಶವಾಗಿವೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

ಪ್ರಬಲ ಭೂಕಂಪನದ ಅನುಭವವಾದ ತಕ್ಷಣ, ಜನರು ತಮ್ಮ ಮನೆ ಮತ್ತು ಕಚೇರಿಗಳಿಂದ ಹೊರಬಂದರು. ವಾಸ್ತವವಾಗಿ, ಕಳೆದ ಒಂದು ವಾರದಲ್ಲಿ ಭೂಕಂಪದಿಂದ ಉಂಟಾದ ವಿನಾಶದ ನಂತರ, ಜನರು ಇನ್ನೂ ಭಯದಲ್ಲಿದ್ದಾರೆ. ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಅಫ್ಘಾನಿಸ್ತಾನದ ಜನರು ಒಂದರ ನಂತರ ಒಂದರಂತೆ ಭೂಕಂಪನದ ಪ್ರಬಲ ಕಂಪನವನ್ನು ಅನುಭವಿಸುತ್ತಿದ್ದಾರೆ. ಇದುವರೆಗೆ 4 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸಿರಿಯಾ ಮತ್ತು ಟರ್ಕಿಯಲ್ಲಿ ಸಂಭವಿಸಿದ ಭೂಕಂಪಕ್ಕಿಂತ ಅಫ್ಘಾನಿಸ್ತಾನದ ಭೂಕಂಪವು ಹೆಚ್ಚು ಭಯಾನಕವಾಗಿದೆ ಎಂದು ನಂಬಲಾಗಿದೆ.

ಮತ್ತಷ್ಟು ಓದಿ:Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, 4.6 ತೀವ್ರತೆ ದಾಖಲು

ವಿಶ್ವಸಂಸ್ಥೆಯ ಮಾನವೀಯ ಕಚೇರಿಯು ಭೂಕಂಪಕ್ಕೆ ಸ್ಪಂದಿಸಲು 5 ಮಿಲಿಯನ್ ಡಾಲರ್​ ನೆರವು ಘೋಷಿಸಿದೆ. ಈ ದುರಂತದಲ್ಲಿ ಬದುಕುಳಿದವರಿಗೆ ಆಶ್ರಯ, ಆಹಾರ ಮತ್ತು ವೈದ್ಯಕೀಯ ಸೌಲಭ್ಯಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!