AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸ್​ ಉಗ್ರರ ದಾಳಿ ಬೆದರಿಕೆ ಇರುವುದನ್ನು ಸ್ಪಷ್ಟಪಡಿಸಿದ ಜೋ ಬೈಡನ್​; ಸಾವು-ನೋವಿಲ್ಲದೆ ಸ್ಥಳಾಂತರ ಸಾಧ್ಯವಿಲ್ಲ ಎಂದರೇನು ಅರ್ಥ?

Kabul Airport: ಅಫ್ಘಾನಿಸ್ತಾನದ ಕಾಬೂಲ್​ ಏರ್​ಪೋರ್ಟ್​​ನಲ್ಲಿ ಪ್ರತಿನಿತ್ಯ ಅನೇಕ ಜನ ಸೇರುತ್ತಾರೆ. ಅದೆಷ್ಟೊ ಮಂದಿ ಪ್ರಾಣ ಹಾನಿಯಾಗಿದೆ. ಗಾಯಗೊಂಡವರಿದ್ದಾರೆ

ಐಸಿಸ್​ ಉಗ್ರರ ದಾಳಿ ಬೆದರಿಕೆ ಇರುವುದನ್ನು ಸ್ಪಷ್ಟಪಡಿಸಿದ ಜೋ ಬೈಡನ್​; ಸಾವು-ನೋವಿಲ್ಲದೆ ಸ್ಥಳಾಂತರ ಸಾಧ್ಯವಿಲ್ಲ ಎಂದರೇನು ಅರ್ಥ?
ಜೊ ಬೈಡನ್​
TV9 Web
| Edited By: |

Updated on:Aug 23, 2021 | 6:22 PM

Share

ವಾಷಿಂಗ್ಟನ್​: ಅಫ್ಘಾನಿಸ್ತಾನದಿಂದ ಅಮೆರಿಕನ್ನರನ್ನು ಸ್ಥಳಾಂತರ ಮಾಡುವ ಕಾರ್ಯ ಆಗಸ್ಟ್​ 31ರೊಳಗೆ ಮುಕ್ತಾಯಗೊಳ್ಳಲಿದೆ ಎಬ ಆಶಯವಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್​ ಹೇಳಿದ್ದಾರೆ. ನಿನ್ನೆ ವೈಟ್​ಹೌಸ್​​ನಲ್ಲಿ ಮಾತನಾಡಿದ ಅವರು, ಐಎಸ್​ (ಇಸ್ಲಾಮಿಕ್​ ಸ್ಟೇಟ್​)  ಉಗ್ರರ ಬೆದರಿಕೆಯ ಬಗ್ಗೆ ಉಲ್ಲೇಖಿಸಿದ್ದಾರೆ ಹಾಗೂ ಸದ್ಯ ಯುದ್ಧ ಸನ್ನಿವೇಶವಿರುವ ಅಫ್ಘಾನಿಸ್ತಾನದಲ್ಲಿ ಇನ್ನೂ ಹಲವು ರೀತಿಯ ಅಪಾಯಗಳು ಎದುರಾಗಬಹುದು ಎಂದು ಹೇಳಿದ್ದಾರೆ. ಭಯೋತ್ಪಾದಕರು ಈ ಪರಿಸ್ಥಿತಿಯನ್ನು ಬಳಸಿಕೊಂಡು, ಮುಗ್ಧ ಅಫ್ಘಾನರು ಹಾಗೂ ಯುಎಸ್​ ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಬಹುದು ಎಂಬುದು ನನಗೆ ಗೊತ್ತಿದೆ. ಐಸಿಸ್​ ಉಗ್ರರು ಅಥವಾ ಇನ್ಯಾವುದೇ ಭಯೋತ್ಪಾದಕರ ಬೆದರಿಕೆ ಬಗ್ಗೆ ನಾವು ಸದಾ ಮುನ್ನೆಚ್ಚರಿಕೆ ವಹಿಸಿ, ಜಾಗರೂಕರಾಗಿದ್ದೇವೆ.  ಇದೆಲ್ಲದರ ಮಧ್ಯೆ ಆಗಸ್ಟ್​ 31ರೊಳಗೆ ಅಫ್ಘಾನ್​​ನಲ್ಲಿರುವ ಅಮೆರಿಕನ್ನರ ಸ್ಥಳಾಂತರ ಕಾರ್ಯ ಮುಗಿಯುವ ಭರವಸೆ ಇದೆ ಎಂದು ತಿಳಿಸಿದ್ದಾರೆ.  

ಸಾವು-ನೋವಿನ ಹೊರತಾಗಿ ಸ್ಥಳಾಂತರ ಸಾಧ್ಯವಿಲ್ಲ ಅಫ್ಘಾನಿಸ್ತಾನದ ಕಾಬೂಲ್​ ಏರ್​ಪೋರ್ಟ್​​ನಲ್ಲಿ ಪ್ರತಿನಿತ್ಯ ಅನೇಕ ಜನ ಸೇರುತ್ತಾರೆ. ಅದೆಷ್ಟೊ ಮಂದಿ ಪ್ರಾಣ ಹಾನಿಯಾಗಿದೆ. ಗಾಯಗೊಂಡವರಿದ್ದಾರೆ..ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜೋ ಬೈಡನ್​ ,  ಪ್ರತಿನಿತ್ಯ ಕಾಬೂಲ್​ ಏರ್​ಪೋರ್ಟ್​ನ ದೃಶ್ಯವನ್ನು ನಾವೆಲ್ಲ ನೋಡುತ್ತಿದ್ದೇವೆ. ಅಲ್ಲಿನ ಸಾವು-ನೋವು, ನೂಕುನುಗ್ಗಲು ನೋಡಿ ಮನಸಿಗೆ ತುಂಬ ನೋವಾಗುತ್ತದೆ. ಆದರೆ ಬೇರೆ ದಾರಿಯಿಲ್ಲ. ಈ ಸಾವು-ನೋವಿಲ್ಲದೆ, ನಾಜೂಕಾಗಿ ಜನರ ಸ್ಥಳಾಂತರ ಪ್ರಕ್ರಿಯೆ ನಡೆಸಲು ಸಾಧ್ಯವಿಲ್ಲ. ಎಷ್ಟೇ ಕಷ್ಟವಾದರೂ ಅಲ್ಲಿಂದ ಹೊರಡಬೇಕು ಎಂದೇ ಜನರು ಭಾವಿಸುತ್ತಿದ್ದಾರೆ. ಇವತ್ತು ಹೋಗದಿದ್ದರೆ, ಇನ್ಯಾವತ್ತೂ ಸಾಧ್ಯವಿಲ್ಲ ಎಂಬ ಆತುರದಲ್ಲಿ ಜನರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಮುನ್ನುಗ್ಗುತ್ತಿದ್ದಾರೆ ಎಂದು ಹೇಳಿದರು.

ಅಮೆರಿಕವನ್ನು ಟೀಕಿಸಿದ್ದ ತಾಲಿಬಾನ್​ ಪ್ರತಿನಿತ್ಯ ಕಾಬೂಲ್​ ಏರ್​ಪೋರ್ಟ್​​ನಲ್ಲಿ ಪ್ರಯಾಣಿಕರ ನೂಕುನುಗ್ಗಲು, ಪ್ರಾಣಹಾನಿ ಆಗುತ್ತಿರುವ ಬಗ್ಗೆ ತಾಲಿಬಾನಿಗಳು ಅಮೆರಿಕವನ್ನು ಟೀಕಿಸಿದ್ದರು. ಅಮೆರಿಕಕ್ಕೆ ಸೂಪರ್​ ಪವರ್​ ಇದೆ..ಅತ್ಯಾಧುನಿಕವಾದ ವ್ಯವಸ್ಥೆಯೂ ಇದೆ. ಆದರೆ ಕಾಬೂಲ್​ ಏರ್​​ಪೋರ್ಟ್​ನಲ್ಲಿ ಕಾನೂನು ಸುವ್ಯವಸ್ಥೆ ಆದೇಶ ತರಲು ವಿಫಲವಾಗಿದೆ. ಇಡೀ ಅಫ್ಘಾನಿಸ್ತಾನದಲ್ಲಿ ಕಾಬೂಲ್​ ಏರ್​​ಪೋರ್ಟ್​ ಹೊರತುಪಡಿಸಿ, ಉಳಿದೆಲ್ಲ ಪ್ರದೇಶಗಳಲ್ಲೂ ಶಾಂತಿ ಇದೆ  ಎಂದು ತಾಲಿಬಾನ್​ನ ಅಮೀರ್ ಖಾನ್​ ಎಂಬಾತ ಹೇಳಿಕೆ ನೀಡಿದ್ದ.

ಇದನ್ನೂ ಓದಿ: ತ್ರಿಷಾ ನಂತರ ಮತ್ತೋರ್ವ ಹೀರೋಯಿನ್ ಖಾಸಗಿ ವಿಡಿಯೋ ಲೀಕ್​​; ನರಕದಲ್ಲಿ ನಿಮಗೆ ವಿಶೇಷ ವ್ಯವಸ್ಥೆ ಇದೆ ಎಂದ ​ನಟಿ

ಮಕ್ಕಳನ್ನು ಸ್ವಾಗತಿಸಲು ಸಜ್ಜಾದ ಶಾಲೆಗಳು; ಕೊರೊನಾ ಭೀತಿಯ ನಡುವೆಯೂ ಕಲಿಕೆಯ ಸಂಭ್ರಮ ಶುರು

(Afghanistan evacuation will conclude by August 31 says US President Joe Biden)

Published On - 9:44 am, Mon, 23 August 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ