AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸ್​ ಉಗ್ರರ ದಾಳಿ ಬೆದರಿಕೆ ಇರುವುದನ್ನು ಸ್ಪಷ್ಟಪಡಿಸಿದ ಜೋ ಬೈಡನ್​; ಸಾವು-ನೋವಿಲ್ಲದೆ ಸ್ಥಳಾಂತರ ಸಾಧ್ಯವಿಲ್ಲ ಎಂದರೇನು ಅರ್ಥ?

Kabul Airport: ಅಫ್ಘಾನಿಸ್ತಾನದ ಕಾಬೂಲ್​ ಏರ್​ಪೋರ್ಟ್​​ನಲ್ಲಿ ಪ್ರತಿನಿತ್ಯ ಅನೇಕ ಜನ ಸೇರುತ್ತಾರೆ. ಅದೆಷ್ಟೊ ಮಂದಿ ಪ್ರಾಣ ಹಾನಿಯಾಗಿದೆ. ಗಾಯಗೊಂಡವರಿದ್ದಾರೆ

ಐಸಿಸ್​ ಉಗ್ರರ ದಾಳಿ ಬೆದರಿಕೆ ಇರುವುದನ್ನು ಸ್ಪಷ್ಟಪಡಿಸಿದ ಜೋ ಬೈಡನ್​; ಸಾವು-ನೋವಿಲ್ಲದೆ ಸ್ಥಳಾಂತರ ಸಾಧ್ಯವಿಲ್ಲ ಎಂದರೇನು ಅರ್ಥ?
ಜೊ ಬೈಡನ್​
TV9 Web
| Edited By: |

Updated on:Aug 23, 2021 | 6:22 PM

Share

ವಾಷಿಂಗ್ಟನ್​: ಅಫ್ಘಾನಿಸ್ತಾನದಿಂದ ಅಮೆರಿಕನ್ನರನ್ನು ಸ್ಥಳಾಂತರ ಮಾಡುವ ಕಾರ್ಯ ಆಗಸ್ಟ್​ 31ರೊಳಗೆ ಮುಕ್ತಾಯಗೊಳ್ಳಲಿದೆ ಎಬ ಆಶಯವಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್​ ಹೇಳಿದ್ದಾರೆ. ನಿನ್ನೆ ವೈಟ್​ಹೌಸ್​​ನಲ್ಲಿ ಮಾತನಾಡಿದ ಅವರು, ಐಎಸ್​ (ಇಸ್ಲಾಮಿಕ್​ ಸ್ಟೇಟ್​)  ಉಗ್ರರ ಬೆದರಿಕೆಯ ಬಗ್ಗೆ ಉಲ್ಲೇಖಿಸಿದ್ದಾರೆ ಹಾಗೂ ಸದ್ಯ ಯುದ್ಧ ಸನ್ನಿವೇಶವಿರುವ ಅಫ್ಘಾನಿಸ್ತಾನದಲ್ಲಿ ಇನ್ನೂ ಹಲವು ರೀತಿಯ ಅಪಾಯಗಳು ಎದುರಾಗಬಹುದು ಎಂದು ಹೇಳಿದ್ದಾರೆ. ಭಯೋತ್ಪಾದಕರು ಈ ಪರಿಸ್ಥಿತಿಯನ್ನು ಬಳಸಿಕೊಂಡು, ಮುಗ್ಧ ಅಫ್ಘಾನರು ಹಾಗೂ ಯುಎಸ್​ ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಬಹುದು ಎಂಬುದು ನನಗೆ ಗೊತ್ತಿದೆ. ಐಸಿಸ್​ ಉಗ್ರರು ಅಥವಾ ಇನ್ಯಾವುದೇ ಭಯೋತ್ಪಾದಕರ ಬೆದರಿಕೆ ಬಗ್ಗೆ ನಾವು ಸದಾ ಮುನ್ನೆಚ್ಚರಿಕೆ ವಹಿಸಿ, ಜಾಗರೂಕರಾಗಿದ್ದೇವೆ.  ಇದೆಲ್ಲದರ ಮಧ್ಯೆ ಆಗಸ್ಟ್​ 31ರೊಳಗೆ ಅಫ್ಘಾನ್​​ನಲ್ಲಿರುವ ಅಮೆರಿಕನ್ನರ ಸ್ಥಳಾಂತರ ಕಾರ್ಯ ಮುಗಿಯುವ ಭರವಸೆ ಇದೆ ಎಂದು ತಿಳಿಸಿದ್ದಾರೆ.  

ಸಾವು-ನೋವಿನ ಹೊರತಾಗಿ ಸ್ಥಳಾಂತರ ಸಾಧ್ಯವಿಲ್ಲ ಅಫ್ಘಾನಿಸ್ತಾನದ ಕಾಬೂಲ್​ ಏರ್​ಪೋರ್ಟ್​​ನಲ್ಲಿ ಪ್ರತಿನಿತ್ಯ ಅನೇಕ ಜನ ಸೇರುತ್ತಾರೆ. ಅದೆಷ್ಟೊ ಮಂದಿ ಪ್ರಾಣ ಹಾನಿಯಾಗಿದೆ. ಗಾಯಗೊಂಡವರಿದ್ದಾರೆ..ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜೋ ಬೈಡನ್​ ,  ಪ್ರತಿನಿತ್ಯ ಕಾಬೂಲ್​ ಏರ್​ಪೋರ್ಟ್​ನ ದೃಶ್ಯವನ್ನು ನಾವೆಲ್ಲ ನೋಡುತ್ತಿದ್ದೇವೆ. ಅಲ್ಲಿನ ಸಾವು-ನೋವು, ನೂಕುನುಗ್ಗಲು ನೋಡಿ ಮನಸಿಗೆ ತುಂಬ ನೋವಾಗುತ್ತದೆ. ಆದರೆ ಬೇರೆ ದಾರಿಯಿಲ್ಲ. ಈ ಸಾವು-ನೋವಿಲ್ಲದೆ, ನಾಜೂಕಾಗಿ ಜನರ ಸ್ಥಳಾಂತರ ಪ್ರಕ್ರಿಯೆ ನಡೆಸಲು ಸಾಧ್ಯವಿಲ್ಲ. ಎಷ್ಟೇ ಕಷ್ಟವಾದರೂ ಅಲ್ಲಿಂದ ಹೊರಡಬೇಕು ಎಂದೇ ಜನರು ಭಾವಿಸುತ್ತಿದ್ದಾರೆ. ಇವತ್ತು ಹೋಗದಿದ್ದರೆ, ಇನ್ಯಾವತ್ತೂ ಸಾಧ್ಯವಿಲ್ಲ ಎಂಬ ಆತುರದಲ್ಲಿ ಜನರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಮುನ್ನುಗ್ಗುತ್ತಿದ್ದಾರೆ ಎಂದು ಹೇಳಿದರು.

ಅಮೆರಿಕವನ್ನು ಟೀಕಿಸಿದ್ದ ತಾಲಿಬಾನ್​ ಪ್ರತಿನಿತ್ಯ ಕಾಬೂಲ್​ ಏರ್​ಪೋರ್ಟ್​​ನಲ್ಲಿ ಪ್ರಯಾಣಿಕರ ನೂಕುನುಗ್ಗಲು, ಪ್ರಾಣಹಾನಿ ಆಗುತ್ತಿರುವ ಬಗ್ಗೆ ತಾಲಿಬಾನಿಗಳು ಅಮೆರಿಕವನ್ನು ಟೀಕಿಸಿದ್ದರು. ಅಮೆರಿಕಕ್ಕೆ ಸೂಪರ್​ ಪವರ್​ ಇದೆ..ಅತ್ಯಾಧುನಿಕವಾದ ವ್ಯವಸ್ಥೆಯೂ ಇದೆ. ಆದರೆ ಕಾಬೂಲ್​ ಏರ್​​ಪೋರ್ಟ್​ನಲ್ಲಿ ಕಾನೂನು ಸುವ್ಯವಸ್ಥೆ ಆದೇಶ ತರಲು ವಿಫಲವಾಗಿದೆ. ಇಡೀ ಅಫ್ಘಾನಿಸ್ತಾನದಲ್ಲಿ ಕಾಬೂಲ್​ ಏರ್​​ಪೋರ್ಟ್​ ಹೊರತುಪಡಿಸಿ, ಉಳಿದೆಲ್ಲ ಪ್ರದೇಶಗಳಲ್ಲೂ ಶಾಂತಿ ಇದೆ  ಎಂದು ತಾಲಿಬಾನ್​ನ ಅಮೀರ್ ಖಾನ್​ ಎಂಬಾತ ಹೇಳಿಕೆ ನೀಡಿದ್ದ.

ಇದನ್ನೂ ಓದಿ: ತ್ರಿಷಾ ನಂತರ ಮತ್ತೋರ್ವ ಹೀರೋಯಿನ್ ಖಾಸಗಿ ವಿಡಿಯೋ ಲೀಕ್​​; ನರಕದಲ್ಲಿ ನಿಮಗೆ ವಿಶೇಷ ವ್ಯವಸ್ಥೆ ಇದೆ ಎಂದ ​ನಟಿ

ಮಕ್ಕಳನ್ನು ಸ್ವಾಗತಿಸಲು ಸಜ್ಜಾದ ಶಾಲೆಗಳು; ಕೊರೊನಾ ಭೀತಿಯ ನಡುವೆಯೂ ಕಲಿಕೆಯ ಸಂಭ್ರಮ ಶುರು

(Afghanistan evacuation will conclude by August 31 says US President Joe Biden)

Published On - 9:44 am, Mon, 23 August 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ