AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: 4 ಕಾರ್ ಮತ್ತು ಹೆಲಿಕಾಪ್ಟರ್​ನಲ್ಲಿ ಭರ್ತಿ ಹಣ ತುಂಬಿಕೊಂಡು ಅಶ್ರಫ್ ಘನಿ ದೇಶ ತೊರೆದಿದ್ದಾರೆ!

Ashraf Ghani: ಅಫ್ಘಾನಿಸ್ತಾನ್ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಸದ್ಯ ಎಲ್ಲಿದ್ದಾರೆ ಎಂದು ನಿಖರ ಮಾಹಿತಿ ಲಭ್ಯವಾಗಿಲ್ಲ. ವರದಿಗಳ ಪ್ರಕಾರ ಘನಿ ಸದ್ಯ ಓಮನ್ ದೇಶದಲ್ಲಿ ಇದ್ದಾರೆ. ಅವರನ್ನು ತಮ್ಮ ದೇಶದಲ್ಲಿ ಇಳಿಸಿಕೊಳ್ಳಲು ತಜಕಿಸ್ತಾನ ಒಪ್ಪಿಗೆ ಸೂಚಿಸಿಲ್ಲ ಎಂದು ತಿಳಿದುಬಂದಿದೆ.

Afghanistan: 4 ಕಾರ್ ಮತ್ತು ಹೆಲಿಕಾಪ್ಟರ್​ನಲ್ಲಿ ಭರ್ತಿ ಹಣ ತುಂಬಿಕೊಂಡು ಅಶ್ರಫ್ ಘನಿ ದೇಶ ತೊರೆದಿದ್ದಾರೆ!
ಅಶ್ರಫ್​ ಘನಿ
TV9 Web
| Updated By: ganapathi bhat|

Updated on:Aug 16, 2021 | 5:43 PM

Share

ಕಾಬೂಲ್: ಅಫ್ಘಾನಿಸ್ತಾನ್ ಮಾಜಿ ಅಧ್ಯಕ್ಷ ಅಶ್ರಫ್ ಘನಿ (Ashraf Ghani), ನಾಲ್ಕು ಕಾರ್ ಹಾಗೂ ಹೆಲಿಕಾಪ್ಟರ್ ತುಂಬಾ ಹಣದೊಂದಿಗೆ ಭಾನುವಾರ ರಾಜಧಾನಿ ಕಾಬೂಲ್​ನ್ನು ತೊರೆದಿದ್ದಾರೆ ಎಂದು ಸುದ್ದಿಸಂಸ್ಥೆ ರಾಯ್ಟರ್ಸ್ ವರದಿ ಮಾಡಿದೆ. ರಷ್ಯಾದ ಸುದ್ದಿಸಂಸ್ಥೆ ಆರ್​ಐಎ ವರದಿಯನ್ನು ಉಲ್ಲೇಖಿಸಿ ರಾಯ್ಟರ್ಸ್ ಸುದ್ದಿ ಬಿತ್ತರಿಸಿದೆ. ಅಶ್ರಫ್ ಘನಿ, ನಾಲ್ಕು ಕಾರ್ ಮತ್ತು ಹೆಲಿಕಾಪ್ಟರ್ ತುಂಬಾ ಹಣ ಕೊಂಡೊಯ್ದ ನಂತರವೂ ಒಂದಷ್ಟು ಹಣ ಮಿಕ್ಕಿ ಅಲ್ಲೇ ಉಳಿಸಿ ಹೋಗಿದ್ದಾರೆ ಎಂದು ಹೇಳಲಾಗಿದೆ.

ನಾಲ್ಕು ಕಾರ್​ಗಳಲ್ಲಿ ಕೂಡ ಹಣ ತುಂಬಲಾಗಿತ್ತು. ಮತ್ತೊಂದಷ್ಟು ಹಣವನ್ನು ಅವರು ಹೆಲಿಕಾಪ್ಟರ್​ನಲ್ಲಿ ಕೂಡ ತುಂಬಿದ್ದರು. ಆದರೂ ಸಂಪೂರ್ಣ ತುಂಬಿಸಿಕೊಳ್ಳಲು ಆಗಲಿಲ್ಲ ಎಂದು ಕಾಬೂಲ್​ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ವಕ್ತಾರ ನಿಕಿತ ಇಚೆಂಕೊ ಹೇಳಿರುವ ಬಗ್ಗೆ ಆರ್​ಐಎ ವರದಿ ಮಾಡಿದೆ.

ಅಫ್ಘಾನಿಸ್ತಾನ್ ಮಾಜಿ ಅಧ್ಯಕ್ಷ ಅಶ್ರಫ್ ಘನಿ ಸದ್ಯ ಎಲ್ಲಿದ್ದಾರೆ ಎಂದು ನಿಖರ ಮಾಹಿತಿ ಲಭ್ಯವಾಗಿಲ್ಲ. ವರದಿಗಳ ಪ್ರಕಾರ ಘನಿ ಸದ್ಯ ಓಮನ್ ದೇಶದಲ್ಲಿ ಇದ್ದಾರೆ. ಅವರನ್ನು ತಮ್ಮ ದೇಶದಲ್ಲಿ ಇಳಿಸಿಕೊಳ್ಳಲು ತಜಕಿಸ್ತಾನ ಒಪ್ಪಿಗೆ ಸೂಚಿಸಿಲ್ಲ ಎಂದು ತಿಳಿದುಬಂದಿದೆ. ಅಶ್ರಫ್ ಘನಿ ಅಮೆರಿಕಾ ಕಡೆಗೆ ಹೋಗಿದ್ದಾರೆ ಎಂದು ಕೂಡ ಕೆಲ ವರದಿಗಳು ಹೇಳಿವೆ.

ಅಫ್ಘಾನಿಸ್ತಾನ ಬಿಟ್ಟು ತೆರಳುವ ಮುನ್ನ ಸುದೀರ್ಘ ಫೇಸ್​ಬುಕ್ ಪೋಸ್ಟ್ ಮಾಡಿದ್ದ ಅಶ್ರಫ್ ಘನಿ, ತಾನು ಆಗಬಹುದಾದ ರಕ್ತಪಾತವನ್ನು ತಡೆಯುವುದಕ್ಕಾಗಿ ದೇಶ ತೊರೆಯುತ್ತಿರುವುದಾಗಿ ಹೇಳಿಕೊಂಡಿದ್ದರು.

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ ತಾಲೀಬಾನ್ ಉಗ್ರರ ವಶಕ್ಕೆ ಬರುತ್ತಿದ್ದಂತೆ ಅಲ್ಲಿನ ಜನರಲ್ಲಿ ಆತಂಕ ಶುರುವಾಗಿದೆ. ಸಾವಿರಾರು ಜನರು ದೇಶಬಿಟ್ಟು ಹೊರಗೆ ಹೋಗುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ವಿಮಾನ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗಿದ್ದು, ನೂಕಾಟ-ತಳ್ಳಾಟ ಸಾಮಾನ್ಯ ಎನಿಸಿದೆ. ಜನರನ್ನು ನಿಯಂತ್ರಿಸಲು ಅಮೆರಿಕ ಸೇನಾಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿವೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಗುಂಡು ಹಾರಾಟದ ವೇಳೆ ಈವರೆಗೆ ಐವರು ಮೃತಪಟ್ಟಿದ್ದಾರೆ. ವಿಮಾನ ಹತ್ತಲು ಏಕಾಏಕಿ ನೂರಾರು ಜನರು ಮುನ್ನುಗ್ಗಿ ಬಂದಾಗ ಪರಿಸ್ಥಿತಿ ಹದಗೆಟ್ಟು, ಗುಂಡು ಹಾರಾಟ ನಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಗುಲಾಮಗಿರಿಯ ಸಂಕೊಲೆಯನ್ನು ತಾಲಿಬಾನ್ ತುಂಡರಿಸಿದೆ: ಪಾಕ್ ಪ್ರಧಾನಿ ಇಮ್ರಾನ್ ಖಾನ್

Afghanistan: ಕಾಬೂಲ್​ನಿಂದ ಅಮೆರಿಕಕ್ಕೆ ಹೋಗುತ್ತಿದ್ದ ವಿಮಾನದಿಂದ ಕೆಳಗೆ ಬಿದ್ದು ಇಬ್ಬರ ದುರ್ಮರಣ

(Afghanistan Ex President Ashraf Ghani fled Nation with 4 Cars and Helicopter full of Cash says reports)

Published On - 5:42 pm, Mon, 16 August 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು