AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಹೆಣ್ಣುಮಕ್ಕಳು ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆಯಬಹುದು

ತಾಲಿಬಾನ್ ತನ್ನ ಕ್ರೂರ ನಿರ್ಧಾರಗಳಿಗಾಗಿ ಪ್ರಪಂಚದಾದ್ಯಂತ ಕುಖ್ಯಾತವಾಗಿದೆ. ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಹೆಣ್ಣುಮಕ್ಕಳು ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆಯಬಹುದು ಎಂದು ತಾಲಿಬಾನ್ ಸರ್ಕಾರ ಹೊಸ ಆದೇಶ ಹೊರಡಿಸಿದೆ

ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಹೆಣ್ಣುಮಕ್ಕಳು ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆಯಬಹುದು
ವಿದ್ಯಾರ್ಥಿನಿಯರುImage Credit source: The Guardian
ನಯನಾ ರಾಜೀವ್
|

Updated on: Aug 06, 2023 | 3:01 PM

Share

ತಾಲಿಬಾನ್(Taliban) ತನ್ನ ಕ್ರೂರ ನಿರ್ಧಾರಗಳಿಗಾಗಿ ಪ್ರಪಂಚದಾದ್ಯಂತ ಕುಖ್ಯಾತವಾಗಿದೆ. ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಹೆಣ್ಣುಮಕ್ಕಳು ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆಯಬಹುದು ಎಂದು ತಾಲಿಬಾನ್ ಸರ್ಕಾರ ಹೊಸ ಆದೇಶ ಹೊರಡಿಸಿದೆ. 10 ವರ್ಷದ ನಂತರ ಹೆಣ್ಣುಮಕ್ಕಳು ಓದುವ ಹಕ್ಕನ್ನು ತಾಲಿಬಾನ್ ಸರ್ಕಾರ ಕಸಿದುಕೊಂಡಿದೆ. ಹೊಸ ಆದೇಶಕ್ಕೆ ಸುಮಾರು 223 ದಿನಗಳ ಮೊದಲು, ಹೆಣ್ಣುಮಕ್ಕಳು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುವುದನ್ನು ನಿಷೇಧಿಸಲಾಯಿತು. ಈ ಹಿಂದೆ 6ನೇ ತರಗತಿವರೆಗೆ ಹೆಣ್ಣು ಮಕ್ಕಳಿಗೆ ಶಾಲೆಗಳಲ್ಲಿ ಓದಲು ಅವಕಾಶವಿತ್ತು.

ತಾಲಿಬಾನ್ ಈ ಹಿಂದೆ ಬ್ಯೂಟಿ ಪಾರ್ಲರ್‌ಗಳಲ್ಲಿ ಮಹಿಳೆಯರು ಕೆಲಸ ಮಾಡುವಂತಿಲ್ಲ ಎಂದು ಹೇಳಿತ್ತು. ತಾಲಿಬಾನ್ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ನೀಡುವುದನ್ನು ನಿಲ್ಲಿಸಿತ್ತು. ತಾಲಿಬಾನ್ ಈಗ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ 10 ವರ್ಷಕ್ಕಿಂತ ಮೇಲ್ಪಟ್ಟ ಬಾಲಕಿಯರನ್ನು ಪ್ರಾಥಮಿಕ ಶಾಲೆಗೆ ಸೇರಿಸದಂತೆ ಸೂಚನೆ ನೀಡಿದೆ ಎಂದು ಬಿಬಿಸಿ ಪರ್ಷಿಯನ್ ವರದಿ ಮಾಡಿದೆ.

ಮತ್ತಷ್ಟು ಓದಿ: Girls Education: ಅಫ್ಘಾನಿಸ್ತಾನದಲ್ಲಿ ಬಾಲಕಿಯರ ಶಿಕ್ಷಣ ಕೇಂದ್ರಗಳನ್ನು ಮುಚ್ಚಿದ ತಾಲಿಬಾನ್

ಎರಡು ವರ್ಷಗಳ ಹಿಂದೆ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿತ್ತು. ಇದರ ನಂತರ, ಆರನೇ ತರಗತಿಗಿಂತ ಹೆಚ್ಚಿನ ಶಾಲೆಗಳಿಗೆ ಹಾಜರಾಗಲು ಹುಡುಗಿಯರನ್ನು ನಿರ್ಬಂಧಿಸಲಾಯಿತು. 683 ದಿನಗಳ ಹಿಂದೆ ತಾಲಿಬಾನ್‌ಗಳು 11 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರಿಗೆ ಶಾಲೆಗೆ ಹೋಗದಂತೆ ಸೂಚನೆ ನೀಡಿದ್ದರು. 223 ದಿನಗಳ ಹಿಂದೆ ಹುಡುಗಿಯರು ವಿಶ್ವವಿದ್ಯಾಲಯಕ್ಕೆ ಹೋಗುವುದನ್ನು ನಿಷೇಧಿಸಲಾಗಿತ್ತು. ಪುರುಷರಿಲ್ಲದೆ ಹೋಟೆಲ್​ಗೆ ಹೋಗುವಂತಿರಲಿಲ್ಲ, ಉದ್ಯಾನಗಳಿಗೆ ತೆರಳುವಂತಿಲ್ಲ ಎಂದೂ ಹೇಳಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?