AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Airport: ಕಾಬೂಲ್ ವಿಮಾನ ನಿಲ್ದಾಣದ ರನ್​ವೇ ರಿಪೇರಿ; ವಿಮಾನ ಹಾರಾಟ ಆರಂಭ

ತಾಂತ್ರಿಕ ತಂಡದ ಪರಿಶ್ರಮದಿಂದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಪುನರಾರಂಭವಾಗಿದೆ ಎಂದು ಕತಾರ್​​ನ ಅಫ್ಘಾನಿಸ್ತಾನದ ರಾಯಭಾರಿ ತಿಳಿಸಿದ್ದಾರೆ.

Kabul Airport: ಕಾಬೂಲ್ ವಿಮಾನ ನಿಲ್ದಾಣದ ರನ್​ವೇ ರಿಪೇರಿ; ವಿಮಾನ ಹಾರಾಟ ಆರಂಭ
ಕಾಬೂಲ್ ವಿಮಾನ ನಿಲ್ದಾಣ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 04, 2021 | 8:08 PM

Share

ದುಬೈ: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ಬಳಿಕ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬೇರೆ ದೇಶಕ್ಕೆ ತೆರಳಲು ಜನರು ಮುಗಿಬಿದ್ದಿದ್ದರು. ಇದರಿಂದ ನೂಕುನುಗ್ಗಲು ಉಂಟಾಗಿ, ಗುಂಡಿನ ದಾಳಿಯೂ ನಡೆದಿತ್ತು. ಈ ಘಟನೆಯಲ್ಲಿ ಹಲವರು ಪ್ರಾಣವನ್ನೂ ಕಳೆದುಕೊಂಡಿದ್ದರು. ಬಳಿಕ ಕಾಬೂಲ್ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯೂ ನಡೆದು ಸಾಕಷ್ಟು ಜನರು ಮೃತಪಟ್ಟಿದ್ದರು. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಉಂಟಾದ ಗಲಾಟೆಯ ಬಳಿಕ ಅಲ್ಲಿ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಕಾಬೂಲ್ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಪುನರಾರಂಭಿಸುವ ಕುರಿತು ಚರ್ಚಿಸಲು ತಾಂತ್ರಿಕ ತಂಡವನ್ನು ಹೊತ್ತ ಕತಾರ್ ವಿಮಾನ ಕಾಬೂಲ್​ನಲ್ಲಿ ಕಾರ್ಯಾಚರಣೆ ನಡೆಸಿತ್ತು. ಆ ತಾಂತ್ರಿಕ ತಂಡದ ಪರಿಶ್ರಮದಿಂದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಪುನರಾರಂಭವಾಗಿದೆ ಎಂದು ಕತಾರ್​​ನ ಅಫ್ಘಾನಿಸ್ತಾನದ ರಾಯಭಾರಿ ತಿಳಿಸಿದ್ದಾರೆ.

ಹೀಗಾಗಿ, ಶೀಘ್ರದಲ್ಲೇ ನಾಗರಿಕರಿಗೂ ಕಾಬೂಲ್ ವಿಮಾನ ನಿಲ್ದಾಣ ಸಂಚಾರಕ್ಕೆ ಮುಕ್ತವಾಗಲಿದೆ. ಅಫ್ಘಾನಿಸ್ತಾನದ ಅಧಿಕಾರಗಳ ಸಹಕಾರದಿಂದ ಕಾಬೂಲ್​ ವಿಮಾನ ನಿಲ್ದಾಣದ ರನ್​ವೇಯನ್ನು ರಿಪೇರಿ ಮಾಡಲಾಗಿದೆ. ಈಗಾಗಲೇ ಕಾಬೂಲ್ ವಿಮಾನ ನಿಲ್ದಾಣದಿಂದ ಡೊಮೆಸ್ಟಿಕ್ ಅಥವಾ ದೇಶೀಯ ವಿಮಾನಗಳ ಸಂಚಾರ ಶುರು ಮಾಡಿದ್ದು, ಸದ್ಯದಲ್ಲೇ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೂ ಅವಕಾಶ ನೀಡಲಾಗುತ್ತದೆ.

ಬುಧವಾರ ಕತಾರ್​ ವಿಮಾನದಲ್ಲಿ ತಾಂತ್ರಿಕ ತಂಡ ಕಾಬೂಲ್​ಗೆ ಬಂದಿಳಿದಿತ್ತು. ಮಾನವೀಯ ನೆರವು ಒದಗಿಸಲು ವಿಮಾನಯಾನವನ್ನು ಪುನರಾರಂಭಿಸುವುದು ಮತ್ತು ಸ್ಥಳಾಂತರಿಸುವ ಪ್ರಯತ್ನಗಳನ್ನು ಪುನರಾರಂಭಿಸುವುದು ಈ ತಾಂತ್ರಿಕ ತಂಡದ ಗುರಿಯಾಗಿದೆ ಎಂದು ಕತಾರ್​ನ ಅಫ್ಘಾನಿಸ್ತಾನದ ರಾಯಭಾರಿ ತಿಳಿಸಿದ್ದರು.

ಕೆಲವು ದಿನಗಳ ಹಿಂದೆ ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದ ಬಳಿ ಮೂರು ಬಾಂಬ್ ಸ್ಫೋಟವಾಗಿತ್ತು. ಈ ಬಾಂಬ್ ಸ್ಫೋಟಗಳಲ್ಲಿ ಅಮೆರಿಕನ್ ಸೈನಿಕರು ಸೇರಿದಂತೆ ಸಾಕಷ್ಟು ಜನರು ಸಾವನ್ನಪ್ಪಿದ್ದರು. ಈ ಸರಣಿ ಬಾಂಬ್ ದಾಳಿಯಿಂದ ಕಾಬೂಲ್ ವಿಮಾನ ನಿಲ್ದಾಣಕ್ಕೂ ಹಾನಿಯಾಗಿತ್ತು. ಇದೀಗ ಅದನ್ನು ಸರಿಪಡಿಸಲಾಗಿದ್ದು, ವಿಮಾನ ಹಾರಾಟಕ್ಕೆ ಯೋಗ್ಯವಾಗಿದೆ.

ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣ ಈಗ ತಾಲಿಬಾನ್ ಸುಪರ್ದಿಯಲ್ಲಿದೆ: ಏರ್​ಪೋರ್ಟ್​ ನಿರ್ವಹಣೆಯ ಕೌಶಲ ತಾಲಿಬಾನ್​ಗೆ ಇದೆಯೇ?

ತಾಲಿಬಾನಿಗಳ ಸಂಭ್ರಮಕ್ಕೆ ಮಕ್ಕಳೂ ಸೇರಿ ಹಲವರು ಬಲಿ; ಕಾಬೂಲ್​ನಲ್ಲಿ ದುರ್ಘಟನೆ

(Afghanistan Kabul Airport Reopens To Receive Aid Civilian Flights Starts Soon Qatar says)

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ