AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನ್​ ಉಗ್ರರಿಂದ ರಾಕೆಟ್​ ದಾಳಿ ನಡೆದ ಬೆನ್ನಲ್ಲೇ ಅಫ್ಘಾನಿಸ್ತಾನ ಭದ್ರತಾ ಪಡೆಯಿಂದ ವಾಯುದಾಳಿ; 254 ಉಗ್ರರ ಹತ್ಯೆ

ಶನಿವಾರ ರಾತ್ರಿ ದಕ್ಷಿಣ ಅಫ್ಘಾನ್​ನ ಕಂದಹಾರ್ ಏರ್​ಪೋರ್ಟ್ ಗುರಿಯಾಗಿಸಿ ಮೂರು ರಾಕೆಟ್​ ದಾಳಿ ನಡೆದಿತ್ತು. ಅದರಲ್ಲಿ ಎರಡು ರನ್ ವೇ ಮೇಲೆ ಅಪ್ಪಳಿಸಿತ್ತು.

ತಾಲಿಬಾನ್​ ಉಗ್ರರಿಂದ ರಾಕೆಟ್​ ದಾಳಿ ನಡೆದ ಬೆನ್ನಲ್ಲೇ ಅಫ್ಘಾನಿಸ್ತಾನ ಭದ್ರತಾ ಪಡೆಯಿಂದ ವಾಯುದಾಳಿ; 254 ಉಗ್ರರ ಹತ್ಯೆ
ಕಂದಹಾರ್ ಏರ್​ಪೋರ್ಟ್​
TV9 Web
| Edited By: |

Updated on: Aug 01, 2021 | 12:18 PM

Share

ಕಂದಹಾರ್​: ನಿನ್ನೆ ರಾತ್ರಿ ಅಫ್ಘಾನಿಸ್ತಾನದ ಕಂದಹಾರ್​​ ಏರ್​ಪೋರ್ಟ್ (Kandahar Airport)​ ಮೇಲೆ ತಾಲಿಬಾನ್​ ಉಗ್ರರು (Taliban Fighters) ಮೂರು ರಾಕೆಟ್ ದಾಳಿ (Rocket Struck) ನಡೆಸಿದ ಬೆನ್ನಲ್ಲೇ ಇಂದು ಅಫ್ಘಾನಿಸ್ತಾನ ರಕ್ಷಣಾ ಪಡೆಗಳು ತಾಲಿಬಾನ್​ ಉಗ್ರರ ನೆಲೆಗಳ ಮೇಲೆ ವಾಯುದಾಳಿ ನಡೆಸಿದ್ದಾಗಿ ವರದಿಯಾಗಿದೆ. ತಾಲಿಬಾನ್​ ಉಗ್ರರ ಒಟ್ಟು 13 ವಿವಿಧ ನೆಲೆಗಳ ಮೇಲೆ ಏರ್​ಸ್ಟ್ರೈಕ್​ ನಡೆದಿದ್ದು, 254 ತಾಲಿಬಾನ್​ ಉಗ್ರರು ಹತರಾಗಿದ್ದಾರೆ ಮತ್ತು 97 ಉಗ್ರರು ಗಾಯಗೊಂಡಿದ್ದಾರೆ ಎಂದೂ ಹೇಳಲಾಗಿದೆ.

ಶನಿವಾರ ರಾತ್ರಿ ದಕ್ಷಿಣ ಅಫ್ಘಾನ್​ನ ಕಂದಹಾರ್ ಏರ್​ಪೋರ್ಟ್ ಗುರಿಯಾಗಿಸಿ ಮೂರು ರಾಕೆಟ್​ ದಾಳಿ ನಡೆದಿತ್ತು. ಅದರಲ್ಲಿ ಎರಡು ರನ್ ವೇ ಮೇಲೆ ಅಪ್ಪಳಿಸಿತ್ತು. ಹೀಗಾಗಿ ಈ ಏರ್​ಪೋರ್ಟ್​ಗೆ ಹೋಗುವ ಮತ್ತು ಬರುವ ಎಲ್ಲ ವಿಮಾನಗಳನ್ನೂ ರದ್ದು ಮಾಡಿದ್ದಾಗಿ ಕಂದಹಾರ್ ಏರ್​ಪೋರ್ಟ್ ಮುಖ್ಯಸ್ಥ ಮಸೂದ್​ ಪಶ್ತೂನ್​ ತಿಳಿಸಿದ್ದಾರೆ. ಇನ್ನು ಕಂದಹಾರ್​ ಮೇಲೆ ನಡೆದ ರಾಕೆಟ್​ ದಾಳಿಯಿಂದ ಯಾವುದೇ ಸಾವು ನೋವು ಆಗಿರಲಿಲ್ಲ.

ಅಫ್ಘಾನಿಸ್ತಾನದಿಂದ ಯುಎಸ್​ ಸೇನೆಯ ಬಹುತೇಕ ಸೈನಿಕರು ಹಿಂದೆ ಸರಿದಿದ್ದಾರೆ. ಈ ಮಧ್ಯೆ ತಾಲಿಬಾನ್​ ಉಗ್ರರು ಮತ್ತು ಅಫ್ಘಾನಿಸ್ತಾನ ಭದ್ರತಾ ಪಡೆಗಳ ನಡುವಿನ ಹಿಂಸಾಚಾರವೂ ಜಾಸ್ತಿಯಾಗಿದೆ. ಕಳೆದ ತಿಂಗಳು ಅಧ್ಯಕ್ಷರ ಭವನದ ಎದುರು ಈದ್​ ಪ್ರಾರ್ಥನೆ ನಡೆಯುತ್ತಿರುವಾ ಆ ಪ್ರದೇಶದ ಮೇಲೆಯೂ ಮೂರು ರಾಕೆಟ್​ಗಳು ಬಂದು ಲ್ಯಾಂಡ್ ಆಗಿದ್ದವು.

ಇದನ್ನೂ ಓದಿ: ಇನ್ನೂ ಮುಗಿಯದ ಸಂಪುಟ ರಚನೆ ಕಸರತ್ತು, ಬಿ.ಎಸ್. ಯಡಿಯೂರಪ್ಪ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ