AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Mosque Blast: ಅಫ್ಘಾನಿಸ್ತಾನ ಮಸೀದಿ ಸ್ಫೋಟ, ಹಲವು ಮಂದಿ ಸಾವು, ಅನೇಕರಿಗೆ ಗಾಯ

ಅಫ್ಘಾನಿಸ್ತಾನದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಪ್ರಾಣಬಿಟ್ಟಿದ್ದಾರೆ.

Afghanistan Mosque Blast: ಅಫ್ಘಾನಿಸ್ತಾನ ಮಸೀದಿ ಸ್ಫೋಟ, ಹಲವು ಮಂದಿ ಸಾವು, ಅನೇಕರಿಗೆ ಗಾಯ
ಅಫ್ಘಾನಿಸ್ತಾನದಲ್ಲಿ ಸ್ಫೋಟ
TV9 Web
| Edited By: |

Updated on:Sep 02, 2022 | 5:20 PM

Share

ಅಫ್ಘಾನಿಸ್ತಾನದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಪ್ರಾಣಬಿಟ್ಟಿದ್ದಾರೆ. ಅಫ್ಘಾನಿಸ್ತಾನ ಹೆರಾತ್‌ನ ಗುಜರಗಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಘಟನೆಯಲ್ಲಿ ಮಸೀದಿಯ ಇಮಾಮ್ ಸೇರಿದಂತೆ 21 ಜನರು ಸಾವನ್ನಪ್ಪಿದ್ದಾರೆ. ಇದು ಆತ್ಮಹತ್ಯಾ ದಾಳಿ ಎಂದು ಹೆರಾತ್‌ನ ರಾಜ್ಯಪಾಲರ ವಕ್ತಾರರು ತಿಳಿಸಿದ್ದಾರೆ.

ಆದರೆ, ಈವರೆಗೆ ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಟ್ವಿಟರ್‌ನಲ್ಲಿ ಅನ್ಸಾರಿ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ, “ದಾಳಿಯಲ್ಲಿ ಸಾವನ್ನಪ್ಪಿದ ಇಮಾಮ್ ತಾಲಿಬಾನ್ ಬೆಂಬಲಿಗ ಎಂದು ಹೇಳಲಾಗಿದೆ ಮತ್ತು ಅವರ ಹೇಳಿಕೆಯನ್ನು ಕೇಳಲು ಹೆಚ್ಚಿನ ಜನರು ಸೇರಿದ್ದರು.

ಎಂದಿನಂತೆ ಈ ಬಾರಿಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಜುಮಾದಲ್ಲಿ ಮಸೀದಿ ಮುಜೀಬ್ ರೆಹಮಾನ್ ಅನ್ಸಾರಿ ಅವರು ಜೂನ್ ಅಂತ್ಯದಲ್ಲಿ ಸಾವಿರಾರು ವಿದ್ವಾಂಸರು ಮತ್ತು ಹಿರಿಯರ ದೊಡ್ಡ ಸಭೆಯಲ್ಲಿ ತಾಲಿಬಾನ್ ರಕ್ಷಣೆಗಾಗಿ ಹಲವಾರು ಹೇಳಿಕೆಗಳನ್ನು ನೀಡಿದ್ದರು.

ಮುಜೀಬ್ ರೆಹಮಾನ್ ಪ್ರಮುಖ ಧರ್ಮಗುರುಗಳಲ್ಲಿ ಒಬ್ಬರು. ಕಳೆದ ಎರಡು ದಶಕಗಳಲ್ಲಿ ಅಫ್ಘಾನಿಸ್ತಾನದಲ್ಲಿ ಪಾಶ್ಚಿಮಾತ್ಯ ಬೆಂಬಲಿತ ಸರ್ಕಾರಗಳ ಟೀಕೆಗಾಗಿ ಇಮಾಮ್ ಮುಜ್ಬಿರ್ ರೆಹಮಾನ್ ಅಫ್ಘಾನಿಸ್ತಾನದಾದ್ಯಂತ ಹೆಸರುವಾಸಿಯಾಗಿದ್ದರು.

Published On - 4:31 pm, Fri, 2 September 22

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ