AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಫ್ಘಾನ್​ ಹಿಂದು-ಸಿಖ್ಖ​​ರು ಭಾರತಕ್ಕೆ ಹೋಗಿ-ಬರಲು ನಾವು ಅಡಚಣೆ ಮಾಡೋದಿಲ್ಲ’ -ತಾಲಿಬಾನ್​ ವಕ್ತಾರ

ಅಫ್ಘಾನ್​ನಲ್ಲಿರುವ ಹಿಂದು, ಸಿಖ್​​ರಿಗೂ ನಮ್ಮಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ತಾಲಿಬಾನ್ ಸಂಘಟನೆ ವಕ್ತಾರ ಜಬೀಹುಲ್ಲಾ ಮುಜಾಹಿದ್ದೀನ್​ ಹೇಳಿದ್ದಾನೆ.

‘ಅಫ್ಘಾನ್​ ಹಿಂದು-ಸಿಖ್ಖ​​ರು ಭಾರತಕ್ಕೆ ಹೋಗಿ-ಬರಲು ನಾವು ಅಡಚಣೆ ಮಾಡೋದಿಲ್ಲ’ -ತಾಲಿಬಾನ್​ ವಕ್ತಾರ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Aug 31, 2021 | 3:09 PM

Share

ಮಾನ್ಯ ಪ್ರಯಾಣ ದಾಖಲೆಗಳನ್ನು ಹೊಂದಿರುವ ಅಫ್ಘಾನ್​ ಸಿಖ್​ ಮತ್ತು ಹಿಂದುಗಳಿಗೆ ಭಾರತಕ್ಕೆ ತೆರಳಲು ಅನುಮತಿ ನೀಡಲಾಗುತ್ತದೆ ಎಂದು ತಾಲಿಬಾನಿಗಳು (Taliban Terrorists) ಹೇಳಿದ್ದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಅಫ್ಘಾನ್​ನ ಹಿಂದು ಮತ್ತು ಸಿಖ್ ನಾಗರಿಕರು ಕಾಬೂಲ್​ ಏರ್​ಪೋರ್ಟ್ (Kabul Airport)​​ಗೆ ಬರಲು, ಅಲ್ಲಿಂದ ಭಾರತಕ್ಕೆ ಪ್ರಯಾಣ ಮಾಡಲು ಏನೋ ತೊಡಕು ಇಲ್ಲ. ಆದರೆ ಅವರು ಮಾನ್ಯವಾದ ಪ್ರಯಾಣ ದಾಖಲೆಗಳನ್ನು ಹೊಂದಿರಬೇಕು. ಹಿಂದು ಮತ್ತು ಸಿಖ್​ರು ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗಾಗಿಯೂ ಭಾರತಕ್ಕೆ ಹೋಗಿ-ಬರಬಹುದು ಎಂದು ತಾಲಿಬಾನ್​ ವಕ್ತಾರ ಜಬೀಹುಲ್ಲಾಹ್​ ಮುಜಾಹಿದ್​ ಹೇಳಿದ್ದಾರೆ ಅಫ್ಘಾನ್​ ಮಾಧ್ಯಮಗಳು ವರದಿ ಮಾಡಿವೆ.

ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದು, ಸಿಖ್​ ಸೇರಿ ಬೇರೆ ಕೆಲವು ಸಮುದಾಯಗಳ ಭದ್ರತೆ ಬಗ್ಗೆ ಮಾತನಾಡಿದ ಜಬೀಹುಲ್ಲಾ ಮುಜಾಹಿದ್​, ಇತರ ಅಲ್ಪಸಂಖ್ಯಾತರಂತೆ ಅಫ್ಘಾನ್​ನಲ್ಲಿರುವ ಹಿಂದು, ಸಿಖ್​​ರಿಗೂ ನಮ್ಮಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ, ಅಫ್ಘಾನಿಸ್ತಾನದ ಹಿಂದು ಮತ್ತು ಸಿಖ್​ ಸಮುದಾಯದವರು ಕಾಬೂಲ್​ ಏರ್​ಪೋರ್ಟ್​ಗೆ ಬಂದು ಭಾರತದ ವಿಮಾನಗಳನ್ನು ಹತ್ತಲು ಮುಂದಾದರೆ ತಾಲಿಬಾನಿಗಳು ಅವರನ್ನು ತಡೆಯುತ್ತಿದ್ದಾರೆ ಎಂದು ವರದಿಯಾಗಿತ್ತು. ಸುಮಾರು 150 ಸಿಖ್​ ಮತ್ತು ಹಿಂದೂಗಳು ಭಾರತಕ್ಕೆ ಹೋಗಲು ಮುಂದಾಗಿದ್ದರು. ಆದರೆ ಅವರಿಗೆ ತಾಲಿಬಾನಿಗಳು ಅವಕಾಶ ನೀಡಲಿಲ್ಲ ಎಂದು ಕಾಬೂಲ್​ ಮೂಲಕ ಪರ್ವಾನ್​ ಸಮಿತಿ ಅಧ್ಯಕ್ಷೆ ಗುರ್ನಮ್​ ಸಿಂಗ್ ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದರು. ಇದೀಗ ಗುರು ತೇಗ್​ ಬಹದ್ದೂರ್​ ಅವರ 400ನೇ ಜನ್ಮಜಯಂತಿ ನಿಮಿತ್ತ ಸಿಖ್​ ಸಮುದಾಯದವರು ಭಾರತಕ್ಕೆ ಪ್ರಯಾಣ ಬೆಳೆಸುವ ಅನಿವಾರ್ಯತೆ ಇದೆ. ಈ ಪ್ರಯಾಣಕ್ಕೆ ನಾವು ತೊಡಕು ಮಾಡುವುದಿಲ್ಲವೆಂದು ತಾಲಿಬಾನ್​ ಭರವಸೆ ನೀಡಿದೆ.

ಇದನ್ನೂ ಓದಿ: Pradeep Narwal: ಪ್ರೊ ಕಬಡ್ಡಿ ಲೀಗ್​ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಪ್ರದೀಪ್ ನರ್ವಾಲ್

ತಾಲಿಬಾನ್ ಬಗ್ಗೆ ಭಯವಿಲ್ಲ, ಯಾಕೆ ಹೆದರಬೇಕು? ಎಂದ ಕಾಬೂಲ್ ಶಾಲಾ ವಿದ್ಯಾರ್ಥಿನಿ

Published On - 2:51 pm, Tue, 31 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ