AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಫ್ಘಾನ್​ ಹಿಂದು-ಸಿಖ್ಖ​​ರು ಭಾರತಕ್ಕೆ ಹೋಗಿ-ಬರಲು ನಾವು ಅಡಚಣೆ ಮಾಡೋದಿಲ್ಲ’ -ತಾಲಿಬಾನ್​ ವಕ್ತಾರ

ಅಫ್ಘಾನ್​ನಲ್ಲಿರುವ ಹಿಂದು, ಸಿಖ್​​ರಿಗೂ ನಮ್ಮಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ತಾಲಿಬಾನ್ ಸಂಘಟನೆ ವಕ್ತಾರ ಜಬೀಹುಲ್ಲಾ ಮುಜಾಹಿದ್ದೀನ್​ ಹೇಳಿದ್ದಾನೆ.

‘ಅಫ್ಘಾನ್​ ಹಿಂದು-ಸಿಖ್ಖ​​ರು ಭಾರತಕ್ಕೆ ಹೋಗಿ-ಬರಲು ನಾವು ಅಡಚಣೆ ಮಾಡೋದಿಲ್ಲ’ -ತಾಲಿಬಾನ್​ ವಕ್ತಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 31, 2021 | 3:09 PM

Share

ಮಾನ್ಯ ಪ್ರಯಾಣ ದಾಖಲೆಗಳನ್ನು ಹೊಂದಿರುವ ಅಫ್ಘಾನ್​ ಸಿಖ್​ ಮತ್ತು ಹಿಂದುಗಳಿಗೆ ಭಾರತಕ್ಕೆ ತೆರಳಲು ಅನುಮತಿ ನೀಡಲಾಗುತ್ತದೆ ಎಂದು ತಾಲಿಬಾನಿಗಳು (Taliban Terrorists) ಹೇಳಿದ್ದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಅಫ್ಘಾನ್​ನ ಹಿಂದು ಮತ್ತು ಸಿಖ್ ನಾಗರಿಕರು ಕಾಬೂಲ್​ ಏರ್​ಪೋರ್ಟ್ (Kabul Airport)​​ಗೆ ಬರಲು, ಅಲ್ಲಿಂದ ಭಾರತಕ್ಕೆ ಪ್ರಯಾಣ ಮಾಡಲು ಏನೋ ತೊಡಕು ಇಲ್ಲ. ಆದರೆ ಅವರು ಮಾನ್ಯವಾದ ಪ್ರಯಾಣ ದಾಖಲೆಗಳನ್ನು ಹೊಂದಿರಬೇಕು. ಹಿಂದು ಮತ್ತು ಸಿಖ್​ರು ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗಾಗಿಯೂ ಭಾರತಕ್ಕೆ ಹೋಗಿ-ಬರಬಹುದು ಎಂದು ತಾಲಿಬಾನ್​ ವಕ್ತಾರ ಜಬೀಹುಲ್ಲಾಹ್​ ಮುಜಾಹಿದ್​ ಹೇಳಿದ್ದಾರೆ ಅಫ್ಘಾನ್​ ಮಾಧ್ಯಮಗಳು ವರದಿ ಮಾಡಿವೆ.

ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದು, ಸಿಖ್​ ಸೇರಿ ಬೇರೆ ಕೆಲವು ಸಮುದಾಯಗಳ ಭದ್ರತೆ ಬಗ್ಗೆ ಮಾತನಾಡಿದ ಜಬೀಹುಲ್ಲಾ ಮುಜಾಹಿದ್​, ಇತರ ಅಲ್ಪಸಂಖ್ಯಾತರಂತೆ ಅಫ್ಘಾನ್​ನಲ್ಲಿರುವ ಹಿಂದು, ಸಿಖ್​​ರಿಗೂ ನಮ್ಮಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ, ಅಫ್ಘಾನಿಸ್ತಾನದ ಹಿಂದು ಮತ್ತು ಸಿಖ್​ ಸಮುದಾಯದವರು ಕಾಬೂಲ್​ ಏರ್​ಪೋರ್ಟ್​ಗೆ ಬಂದು ಭಾರತದ ವಿಮಾನಗಳನ್ನು ಹತ್ತಲು ಮುಂದಾದರೆ ತಾಲಿಬಾನಿಗಳು ಅವರನ್ನು ತಡೆಯುತ್ತಿದ್ದಾರೆ ಎಂದು ವರದಿಯಾಗಿತ್ತು. ಸುಮಾರು 150 ಸಿಖ್​ ಮತ್ತು ಹಿಂದೂಗಳು ಭಾರತಕ್ಕೆ ಹೋಗಲು ಮುಂದಾಗಿದ್ದರು. ಆದರೆ ಅವರಿಗೆ ತಾಲಿಬಾನಿಗಳು ಅವಕಾಶ ನೀಡಲಿಲ್ಲ ಎಂದು ಕಾಬೂಲ್​ ಮೂಲಕ ಪರ್ವಾನ್​ ಸಮಿತಿ ಅಧ್ಯಕ್ಷೆ ಗುರ್ನಮ್​ ಸಿಂಗ್ ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದರು. ಇದೀಗ ಗುರು ತೇಗ್​ ಬಹದ್ದೂರ್​ ಅವರ 400ನೇ ಜನ್ಮಜಯಂತಿ ನಿಮಿತ್ತ ಸಿಖ್​ ಸಮುದಾಯದವರು ಭಾರತಕ್ಕೆ ಪ್ರಯಾಣ ಬೆಳೆಸುವ ಅನಿವಾರ್ಯತೆ ಇದೆ. ಈ ಪ್ರಯಾಣಕ್ಕೆ ನಾವು ತೊಡಕು ಮಾಡುವುದಿಲ್ಲವೆಂದು ತಾಲಿಬಾನ್​ ಭರವಸೆ ನೀಡಿದೆ.

ಇದನ್ನೂ ಓದಿ: Pradeep Narwal: ಪ್ರೊ ಕಬಡ್ಡಿ ಲೀಗ್​ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಪ್ರದೀಪ್ ನರ್ವಾಲ್

ತಾಲಿಬಾನ್ ಬಗ್ಗೆ ಭಯವಿಲ್ಲ, ಯಾಕೆ ಹೆದರಬೇಕು? ಎಂದ ಕಾಬೂಲ್ ಶಾಲಾ ವಿದ್ಯಾರ್ಥಿನಿ

Published On - 2:51 pm, Tue, 31 August 21

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್