AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 3000 ಲೀಟರ್​ ಮದ್ಯವನ್ನು ಕಾಬೂಲ್​ ಕಾಲುವೆಗೆ ಸುರಿದ ತಾಲಿಬಾನಿಗಳು; ಮದ್ಯ ಮಾರಾಟ, ಸೇವನೆಯಿಂದ ದೂರವಿರಬೇಕಂತೆ

ಅಫ್ಘಾನಿಸ್ತಾನದಲ್ಲಿ ಈ ಹಿಂದೆ ಇದ್ದ ಯುಎಸ್ ಬೆಂಬಲಿತ ಸರ್ಕಾರವೂ ಕೂಡ ಮದ್ಯ ಮಾರಾಟ, ಸೇವನೆಯನ್ನು ನಿಷೇಧಿಸಿತ್ತು. ಆದರೆ ಇದೀಗ ಬಂದಿರುವ ತಾಲಿಬಾನ್​ ಕಟ್ಟಾ ಇಸ್ಲಾಂ ಸಂಪ್ರದಾಯ ಪಾಲಕವಾಗಿದೆ.

Video: 3000 ಲೀಟರ್​ ಮದ್ಯವನ್ನು ಕಾಬೂಲ್​ ಕಾಲುವೆಗೆ ಸುರಿದ ತಾಲಿಬಾನಿಗಳು; ಮದ್ಯ ಮಾರಾಟ, ಸೇವನೆಯಿಂದ ದೂರವಿರಬೇಕಂತೆ
ಮದ್ಯವನ್ನು ಕಾಲುವೆಗೆ ಸುರಿದ ತಾಲಿಬಾನಿಗಳು
TV9 Web
| Edited By: |

Updated on: Jan 03, 2022 | 9:11 PM

Share

ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಗುಪ್ತಚರ ದಳದ ಏಜೆಂಟ್​​ಗಳು ಬರೋಬ್ಬರಿ 3000 ಲೀಟರ್​ ಮದ್ಯವನ್ನು ಕಾಬೂಲ್​ನ ಕಾಲುವೆಗೆ ಸುರಿದಿದ್ದಾರೆ. ಅದರ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಅಂದಹಾಗೆ, ಅಫ್ಘಾನ್​ ಗುಪ್ತಚರ ದಳ, ಮದ್ಯವನ್ನು ಕಾಲುವೆಗೆ ಸುರಿದಿದ್ದನ್ನು ಅಲ್ಲಿನ ಬೇಹುಗಾರಿಕೆ ವಿಭಾಗ ದೃಢಪಡಿಸಿದೆ. ಅಲ್ಲದೆ, ಮದ್ಯ ಮಾರಾಟ, ಪೂರೈಕೆಯಲ್ಲಿ ಸಕ್ರಿಯರಾಗಿದ್ದ ಮೂವರು ಡೀಲರ್​ಗಳನ್ನು ಬಂಧಿಸಲಾಗಿದೆ ಎಂದೂ ವರದಿಯಾಗಿದೆ. ಆದರೆ ಈ ಮದ್ಯವನ್ನು ಎಲ್ಲಿಂದ ವಶಪಡಿಸಿಕೊಳ್ಳಲಾಯಿತು? ಯಾರಿಂದ ವಶಪಡಿಸಿಕೊಳ್ಳಲಾಯಿತು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. 

ಅಫ್ಘಾನಿಸ್ತಾನದಲ್ಲಿ ಈ ಹಿಂದೆ ಇದ್ದ ಯುಎಸ್ ಬೆಂಬಲಿತ ಸರ್ಕಾರವೂ ಕೂಡ ಮದ್ಯ ಮಾರಾಟ, ಸೇವನೆಯನ್ನು ನಿಷೇಧಿಸಿತ್ತು. ಆದರೆ ಇದೀಗ ಬಂದಿರುವ ತಾಲಿಬಾನ್​ ಕಟ್ಟಾ ಇಸ್ಲಾಂ ಸಂಪ್ರದಾಯ ಪಾಲಕವಾಗಿದ್ದು, ಅದರ ಅನ್ವಯ ಮದ್ಯ ಸೇವನೆ, ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಕದ್ದುಮುಚ್ಚಿ ಮಾರಾಟ ಮಾಡುತ್ತಿರುವವರನ್ನೂ ಬೇಧಿಸುತ್ತಿದೆ. ಮದ್ಯವನ್ನು ಕಾಲುವೆಗೆ ಸುರಿಯುತ್ತಿರುವ ವಿಡಿಯೋವನ್ನು ಅಫ್ಘಾನಿಸ್ತಾನದ ಜನರಲ್ ಡೈರೆಕ್ಟರೇಟ್​ ಆಫ್​ ಇಂಟಲಿಜೆನ್ಸ್​ (DGI) ಬಿಡುಗಡೆ ಮಾಡಿದೆ.  ಮುಸ್ಲಿಮರು ಮದ್ಯ ತಯಾರಿಕೆ ಮತ್ತು ಪೂರೈಕೆ, ಸೇವನೆಯಿಂದ ಸಂಪೂರ್ಣವಾಗಿ ದೂರ ಇರಬೇಕು ಎಂದು ಇಸ್ಲಾಂ ಧಾರ್ಮಿಕ ಮುಖಂಡರು ಹೇಳಿದ್ದಾಗಿ ಡಿಜಿಐ ಹೇಳಿದೆ.

ಇದನ್ನೂ ಓದಿ: ಮೋದಿ ಅಹಂಕಾರಿ ಎಂದ ಮೇಘಾಲಯ ಗವರ್ನರ್ ; ಮಲಿಕ್ ಆರೋಪ ಸತ್ಯವಾಗಿದ್ದರೆ ಮೋದಿ ಕ್ಷಮೆಯಾಚನೆಗೆ ಕಾಂಗ್ರೆಸ್ ಪಟ್ಟು

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?