AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 3000 ಲೀಟರ್​ ಮದ್ಯವನ್ನು ಕಾಬೂಲ್​ ಕಾಲುವೆಗೆ ಸುರಿದ ತಾಲಿಬಾನಿಗಳು; ಮದ್ಯ ಮಾರಾಟ, ಸೇವನೆಯಿಂದ ದೂರವಿರಬೇಕಂತೆ

ಅಫ್ಘಾನಿಸ್ತಾನದಲ್ಲಿ ಈ ಹಿಂದೆ ಇದ್ದ ಯುಎಸ್ ಬೆಂಬಲಿತ ಸರ್ಕಾರವೂ ಕೂಡ ಮದ್ಯ ಮಾರಾಟ, ಸೇವನೆಯನ್ನು ನಿಷೇಧಿಸಿತ್ತು. ಆದರೆ ಇದೀಗ ಬಂದಿರುವ ತಾಲಿಬಾನ್​ ಕಟ್ಟಾ ಇಸ್ಲಾಂ ಸಂಪ್ರದಾಯ ಪಾಲಕವಾಗಿದೆ.

Video: 3000 ಲೀಟರ್​ ಮದ್ಯವನ್ನು ಕಾಬೂಲ್​ ಕಾಲುವೆಗೆ ಸುರಿದ ತಾಲಿಬಾನಿಗಳು; ಮದ್ಯ ಮಾರಾಟ, ಸೇವನೆಯಿಂದ ದೂರವಿರಬೇಕಂತೆ
ಮದ್ಯವನ್ನು ಕಾಲುವೆಗೆ ಸುರಿದ ತಾಲಿಬಾನಿಗಳು
TV9 Web
| Updated By: Lakshmi Hegde|

Updated on: Jan 03, 2022 | 9:11 PM

Share

ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಗುಪ್ತಚರ ದಳದ ಏಜೆಂಟ್​​ಗಳು ಬರೋಬ್ಬರಿ 3000 ಲೀಟರ್​ ಮದ್ಯವನ್ನು ಕಾಬೂಲ್​ನ ಕಾಲುವೆಗೆ ಸುರಿದಿದ್ದಾರೆ. ಅದರ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಅಂದಹಾಗೆ, ಅಫ್ಘಾನ್​ ಗುಪ್ತಚರ ದಳ, ಮದ್ಯವನ್ನು ಕಾಲುವೆಗೆ ಸುರಿದಿದ್ದನ್ನು ಅಲ್ಲಿನ ಬೇಹುಗಾರಿಕೆ ವಿಭಾಗ ದೃಢಪಡಿಸಿದೆ. ಅಲ್ಲದೆ, ಮದ್ಯ ಮಾರಾಟ, ಪೂರೈಕೆಯಲ್ಲಿ ಸಕ್ರಿಯರಾಗಿದ್ದ ಮೂವರು ಡೀಲರ್​ಗಳನ್ನು ಬಂಧಿಸಲಾಗಿದೆ ಎಂದೂ ವರದಿಯಾಗಿದೆ. ಆದರೆ ಈ ಮದ್ಯವನ್ನು ಎಲ್ಲಿಂದ ವಶಪಡಿಸಿಕೊಳ್ಳಲಾಯಿತು? ಯಾರಿಂದ ವಶಪಡಿಸಿಕೊಳ್ಳಲಾಯಿತು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. 

ಅಫ್ಘಾನಿಸ್ತಾನದಲ್ಲಿ ಈ ಹಿಂದೆ ಇದ್ದ ಯುಎಸ್ ಬೆಂಬಲಿತ ಸರ್ಕಾರವೂ ಕೂಡ ಮದ್ಯ ಮಾರಾಟ, ಸೇವನೆಯನ್ನು ನಿಷೇಧಿಸಿತ್ತು. ಆದರೆ ಇದೀಗ ಬಂದಿರುವ ತಾಲಿಬಾನ್​ ಕಟ್ಟಾ ಇಸ್ಲಾಂ ಸಂಪ್ರದಾಯ ಪಾಲಕವಾಗಿದ್ದು, ಅದರ ಅನ್ವಯ ಮದ್ಯ ಸೇವನೆ, ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಕದ್ದುಮುಚ್ಚಿ ಮಾರಾಟ ಮಾಡುತ್ತಿರುವವರನ್ನೂ ಬೇಧಿಸುತ್ತಿದೆ. ಮದ್ಯವನ್ನು ಕಾಲುವೆಗೆ ಸುರಿಯುತ್ತಿರುವ ವಿಡಿಯೋವನ್ನು ಅಫ್ಘಾನಿಸ್ತಾನದ ಜನರಲ್ ಡೈರೆಕ್ಟರೇಟ್​ ಆಫ್​ ಇಂಟಲಿಜೆನ್ಸ್​ (DGI) ಬಿಡುಗಡೆ ಮಾಡಿದೆ.  ಮುಸ್ಲಿಮರು ಮದ್ಯ ತಯಾರಿಕೆ ಮತ್ತು ಪೂರೈಕೆ, ಸೇವನೆಯಿಂದ ಸಂಪೂರ್ಣವಾಗಿ ದೂರ ಇರಬೇಕು ಎಂದು ಇಸ್ಲಾಂ ಧಾರ್ಮಿಕ ಮುಖಂಡರು ಹೇಳಿದ್ದಾಗಿ ಡಿಜಿಐ ಹೇಳಿದೆ.

ಇದನ್ನೂ ಓದಿ: ಮೋದಿ ಅಹಂಕಾರಿ ಎಂದ ಮೇಘಾಲಯ ಗವರ್ನರ್ ; ಮಲಿಕ್ ಆರೋಪ ಸತ್ಯವಾಗಿದ್ದರೆ ಮೋದಿ ಕ್ಷಮೆಯಾಚನೆಗೆ ಕಾಂಗ್ರೆಸ್ ಪಟ್ಟು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ