AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Blast: ಅಫ್ಘಾನಿಸ್ತಾನದ ಮಸೀದಿಯಲ್ಲಿ ಭಾರೀ ಸ್ಫೋಟ; ಮೂವರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಸ್ಪಿನ್ ಘರ್ ಜಿಲ್ಲೆಯ ಮಸೀದಿಯಲ್ಲಿ ನಮಾಜ್ ವೇಳೆ ನಡೆದ ಸ್ಫೋಟದಿಂದ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಇದುವರೆಗೂ ಮೂವರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

Afghanistan Blast: ಅಫ್ಘಾನಿಸ್ತಾನದ ಮಸೀದಿಯಲ್ಲಿ ಭಾರೀ ಸ್ಫೋಟ; ಮೂವರು ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ
ಅಫ್ಘಾನಿಸ್ತಾನದ ಮಸೀದಿಯಲ್ಲಿ ಸ್ಫೋಟ
TV9 Web
| Edited By: |

Updated on:Nov 12, 2021 | 4:38 PM

Share

ಜಲಾಲಾಬಾದ್: ಅಫ್ಘಾನಿಸ್ತಾನದ ನಂಗರ್​ಹಾರ್​ ಪ್ರಾಂತ್ಯದಲ್ಲಿರುವ ಸ್ಪಿನ್​ ಘರ್ ಪ್ರದೇಶದಲ್ಲಿರುವ ಮಸೀದಿಯಲ್ಲಿ ಇಂದು ಶುಕ್ರವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಭಾರೀ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಸ್ಥಳೀಯ ಮುಲ್ಲಾ ಸೇರಿದಂತೆ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ ಎಂದು ಆ ಪ್ರದೇಶದ ನಿವಾಸಿ ಅಟಲ್ ಶಿನ್ವಾರಿ ಹೇಳಿದ್ದಾರೆ. ಮಸೀದಿಯ ಒಳಭಾಗದಲ್ಲಿ ಸ್ಫೋಟಕಗಳು ಸ್ಫೋಟಿಸಿದ್ದರಿಂದ ಈ ಘಟನೆ ನಡೆದಿದೆ.

ನವೆಂಬರ್ 2ರಂದು ಅಫ್ಘಾನಿಸ್ತಾನದ ಕಾಬೂಲ್​ನ ಅತಿದೊಡ್ಡ ಮಿಲಿಟರಿ ಆಸ್ಪತ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅದರ ಬೆನ್ನಲ್ಲೇ ಅಫ್ಘಾನ್​ನಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ಆಗಸ್ಟ್​ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ರೀತಿಯ ದಾಳಿಗಳು ಹೆಚ್ಚಾಗುತ್ತಿವೆ. ಇಂದು ನಡೆದ ಮಸೀದಿಯ ಸ್ಫೋಟದ ಬಗ್ಗೆ ತಾಲಿಬಾನ್​ ನಾಯಕರು ಕೂಡ ಖಚಿತಪಡಿಸಿದ್ದು, ಸ್ಪಿನ್ ಘರ್ ಜಿಲ್ಲೆಯ ಮಸೀದಿಯಲ್ಲಿ ನಮಾಜ್ ವೇಳೆ ನಡೆದ ಸ್ಫೋಟದಿಂದ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಇದುವರೆಗೂ ಮೂವರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಫ್​ಪಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ವಿದೇಶೀ ಕರೆನ್ಸಿ ಸಂಪೂರ್ಣ ನಿಷೇಧ; ಅಫ್ಘಾನ್​ ​ಕರೆನ್ಸಿಯನ್ನೇ ಬಳಸಲು ತಾಲಿಬಾನ್ ಸೂಚನೆ

ಅಫ್ಘಾನಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗದಿರಲಿ; ತಾಲಿಬಾನ್​ಗೆ ಭಾರತ, ಅಮೆರಿಕ ಒತ್ತಾಯ

Published On - 4:35 pm, Fri, 12 November 21

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ