AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್ ಆರ್ಥಿಕತೆಗೆ ತೀವ್ರ ಹೊಡೆತ; ಅಮರುಲ್ಲಾ ಸಲೇಹ್ ನಿವಾಸದಿಂದ ಹಣ, ಚಿನ್ನ ವಶಪಡಿಸಿಲ್ಲ ಎಂದ ತಾಲಿಬಾನ್

Afghanistan Updates: ಅಫ್ಘಾನಿಸ್ತಾನದ ಮಾಜಿ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಅವರ ನಿವಾಸದಲ್ಲಿ 6.5 ಮಿಲಿಯನ್ ಡಾಲರ್ ಹಣ ಹಾಗೂ 18 ಚಿನ್ನದ ಇಟ್ಟಿಗೆಗಳು ಸಿಕ್ಕಿದೆ ಎಂಬ ಸುದ್ದಿಯನ್ನು ತಾಲಿಬಾನ್ ಅಲ್ಲಗಳೆದಿದೆ.

ಅಫ್ಘಾನ್ ಆರ್ಥಿಕತೆಗೆ ತೀವ್ರ ಹೊಡೆತ; ಅಮರುಲ್ಲಾ ಸಲೇಹ್ ನಿವಾಸದಿಂದ ಹಣ, ಚಿನ್ನ ವಶಪಡಿಸಿಲ್ಲ ಎಂದ ತಾಲಿಬಾನ್
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on: Sep 15, 2021 | 4:44 PM

Share

ಕಾಬೂಲ್: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಆರ್ಥಿಕ ಸಂಕಷ್ಟವನ್ನು ತಾಲಿಬಾನ್ ಎದುರಿಸುತ್ತಿದೆ. ವಿಶ್ವದ ಹಲವು ದೇಶಗಳು ಅಫ್ಘಾನ್​ಗೆ ಸಹಾಯ ಮಾಡುವುದನ್ನು ಸಂಪೂರ್ಣ ಸ್ಥಗಿತಗೊಳಿಸಿದೆ. ಹಾಗಾಗಿ ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಳ್ಳಲು ಮಿತಿಯನ್ನು ಕೂಡ ಹೇರಲಾಗಿದೆ. ಈಗ ನ್ಯೂಯಾರ್ಕ್ ಪೋಸ್ಟ್​ನ ವರದಿಯೊಂದರ ಪ್ರಕಾರ ಬಹುತೇಕ ತಾಲಿಬಾನ್ ಹೋರಾಟಗಾರರು ತಿಂಗಳಿನ ವೇತನ ಪಡೆದಿಲ್ಲ. ತಾಲಿಬಾನ್ ಆಳ್ವಿಕೆಯನ್ನು ಅಫ್ಘಾನ್ ಒಪ್ಪಿಕೊಳ್ಳುತ್ತಿಲ್ಲ ಅಥವಾ ಆಕ್ಷೇಪಿಸುತ್ತಿವೆ. ಹೀಗಾಗಿ, ಅಫ್ಘಾನ್ ಆರ್ಥಿಕ ಹೊಡೆತ ಪಡೆದುಕೊಂಡಿದೆ.

ವಿಶ್ವಬ್ಯಾಂಕ್ (World Bank) ಕೂಡಾ ಹಣ ನೀಡುವುದಿಲ್ಲ ಎಂದು ಈ ಮೊದಲು ಸ್ಪಷ್ಟಪಡಿಸಿದೆ. ಐಎಂಎಫ್​ ಹಣಕಾಸು ನೆರವು ನಿಲ್ಲಿಸಿದೆ. ಇನ್ನೊಂದೆಡೆ ಅಮೆರಿಕಾದ ಬ್ಯಾಂಕ್​ಗಳಲ್ಲಿರುವ ಅಫ್ಘಾನಿಸ್ತಾನದ (Afghanistan) ಹಣವೂ ಜಪ್ತಿಯಾಗಿದೆ. ಹೀಗಾಗಿ ಸದ್ಯ ಅಫ್ಘಾನಿಸ್ತಾನದಲ್ಲಿ ಹಣಕ್ಕೆ ಹಾಹಾಕಾರ ಆರಂಭವಾದಂತಾಗಿದೆ. ಆರ್ಥಿಕತೆ ಸೊರಗಿದೆ.

ಮತ್ತೊಂದೆಡೆ, ಅಫ್ಘಾನಿಸ್ತಾನದ ಮಾಜಿ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಅವರ ನಿವಾಸದಲ್ಲಿ 6.5 ಮಿಲಿಯನ್ ಡಾಲರ್ ಹಣ ಹಾಗೂ 18 ಚಿನ್ನದ ಇಟ್ಟಿಗೆಗಳು ಸಿಕ್ಕಿದೆ ಎಂಬ ಸುದ್ದಿಯನ್ನು ತಾಲಿಬಾನ್ ಅಲ್ಲಗಳೆದಿದೆ. ಈ ಮೊದಲು ಇಬ್ಬರು ಅಪರಿಚಿತರು ಎರಡು ಸೂಟ್​ಕೇಸ್​ನಲ್ಲಿ ಹಣ ಮತ್ತು ಚಿನ್ನದ ಗಟ್ಟಿಗಳನ್ನು ಸಾಗಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಆ ಬಳಿಕ, ಅದು ಅಮರುಲ್ಲಾ ಸಲೇಹ್ ನಿವಾಸದಿಂದ ತೆಗೆದುಕೊಂಡು ಹೋಗುತ್ತಿರುವ ಸಂಪತ್ತು ಎನ್ನಲಾಗಿತ್ತು.

ವಿರೋಧಿಗಳ ಜೊತೆಗಿನ ಶೂಟೌಟ್​ನಲ್ಲಿ ತಾಲಿಬಾನ್ ಪ್ರಮುಖ ನಾಯಕನೊಬ್ಬ ಸಾವನ್ನಪ್ಪಿದ್ದಾನೆ ಎಂಬ ಸುದ್ದಿಯನ್ನು ನಿನ್ನೆಯಷ್ಟೇ ತಾಲಿಬಾನ್ ಅಲ್ಲಗಳೆದಿತ್ತು. ಅಫ್ಘಾನಿಸ್ತಾನದ ಕಾಬೂಲ್​ನಿಂದ ಅಮೆರಿಕಾ ಹಿಂತೆರಳಿದ ಬಳಿಕ, ಒಂದು ತಿಂಗಳ ಅವಧಿಯಲ್ಲಿ ತಾಲಿಬಾನ್​ನಲ್ಲಿ ಆಂತರಿಕ ಬಿರುಕು ಮೂಡಿದೆ ಎಂಬ ವದಂತಿಗಳು ಕೇಳಿಬಂದಿತ್ತು. ಈ ಬಗ್ಗೆ ತಾಲಿಬಾನ್ ವಕ್ತಾರ ಸುಲೈಲ್ ಶಹೀನ್ ಸ್ಪಷ್ಟೀಕರಣ ನೀಡಿದ್ದ. ತಾಲಿಬಾನ್​ನ ಮಾಜಿ ರಾಜಕೀಯ ಮುಖ್ಯಸ್ಥ ಹಾಗೂ ಕಳೆದ ವಾರ ತಾಲಿಬಾನ್ ಸರ್ಕಾರದ ಉಪ ಪ್ರಧಾನಿ ಎಂದು ನೇಮಕ ಆಗಿರುವ ಮುಲ್ಲಾ ಅಬ್ದುಲ್ ಘನಿ ಬರಾದಾರ್ ಸಾವನ್ನಪ್ಪಿದ್ದಾನೆ ಎಂಬ ಸುದ್ದಿಯನ್ನು ಸುಲೈಲ್ ಶಹೀನ್ ತಳ್ಳಿ ಹಾಕಿದ್ದ. ಘನಿ ಬರಾದಾರ್ ವಾಯ್ಸ್ ಮೆಸೇಜ್ ಒಂದನ್ನು ಇದಕ್ಕೆ ಪುರಾವೆ ಎಂಬಂತೆ ನೀಡಿದ್ದ.

ಇದನ್ನೂ ಓದಿ: Afghanistan: ಅಫ್ಘಾನಿಸ್ತಾನದಲ್ಲಿ ಹೆಚ್ಚಿದ ತಾಲಿಬಾನ್ ಕ್ರೌರ್ಯ; ಪಾಕ್ ವಿರುದ್ಧ ತಿರುಗಿಬಿದ್ದ ಅಮೆರಿಕಾ: ಸಂಪೂರ್ಣ ವಿವರ ಇಲ್ಲಿದೆ

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಕಳ್ಳರ ಕೈ ಕಟ್, ಕಾನೂನು ಬಾಹಿರ ಸಂಭೋಗ ಮಾಡಿದವರ ಮೇಲೆ ಕಲ್ಲೆಸೆತ: ಶಿಕ್ಷೆ ರೂಪಿಸಲೆಂದೇ ಸಚಿವಾಲಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ