AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ನಲ್ಲಿ ಇನ್ನೊಂದು ದಿನದಲ್ಲಿ ಸರ್ಕಾರ ರಚನೆಯಾಗುತ್ತದೆ ಎಂದ ಪಾಕ್​ ಸಚಿವ

ಆಗಸ್ಟ್​ 15ರಂದು ತಾಲಿಬಾನ್​​ ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ. ಆದರೆ ನಾಗರಿಕರ ಸ್ಥಳಾಂತರ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕಾಬೂಲ್​ ಏರ್​ಪೋರ್ಟ್ ಅಮೆರಿಕ ಸೇನೆಯ ವಶದಲ್ಲೇ ಇತ್ತು. ನಿನ್ನೆ ಆ ಏರ್​ಪೋರ್ಟ್ ಕೂಡ ತಾಲಿಬಾನಿಗಳ ಕೈ ಸೇರಿದೆ.

ಅಫ್ಘಾನ್​​ನಲ್ಲಿ ಇನ್ನೊಂದು ದಿನದಲ್ಲಿ ಸರ್ಕಾರ ರಚನೆಯಾಗುತ್ತದೆ ಎಂದ ಪಾಕ್​ ಸಚಿವ
ಶಾ ಮೊಹಮ್ಮದ್​ ಖುರೇಷಿ
TV9 Web
| Edited By: |

Updated on: Aug 31, 2021 | 4:27 PM

Share

ಇಸ್ಲಮಾಬಾದ್​: ಅಫ್ಘಾನಿಸ್ತಾನದಿಂದ ಅಮೆರಿಕ ಸೈನ್ಯ ಸಂಪೂರ್ಣವಾಗಿ ಹೊರಹೋಗಿದ್ದೇ ಹೋಗಿದ್ದು, ತಾಲಿಬಾನಿಗಳಂತೂ ಸಿಕ್ಕಾಪಟೆ ಸಂಭ್ರಮಿಸುತ್ತಿದ್ದಾರೆ. ಈ ಮಧ್ಯೆ ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮೊಹಮ್ಮದ್​ ಖುರೇಷಿ ಮಾಧ್ಯಮಗಳೊಂದಿಗೆ ಮಾತನಾಡಿ, ಅಫ್ಘಾನಿಸ್ತಾನದಲ್ಲಿ ಇನ್ನೊಂದು ದಿನದಲ್ಲಿ ಸರ್ಕಾರ ರಚನೆಯಾಗುತ್ತದೆ. ಅಲ್ಲಿ ಅತಿ ಶೀಘ್ರದಲ್ಲೇ ಒಮ್ಮತದ ಸರ್ಕಾರ ರಚನೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಆಗಸ್ಟ್​ 15ರಂದು ತಾಲಿಬಾನ್​​ ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ. ಆದರೆ ನಾಗರಿಕರ ಸ್ಥಳಾಂತರ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕಾಬೂಲ್​ ಏರ್​ಪೋರ್ಟ್ ಅಮೆರಿಕ ಸೇನೆಯ ವಶದಲ್ಲೇ ಇತ್ತು. ಆದರೆ ನಿನ್ನೆಗೆ ಅದೂ ಮುಕ್ತಾಯಗೊಂಡು, ನಿನ್ನೆ ರಾತ್ರಿಯೇ ಅಮೆರಿಕ ಯೋಧರು ಸ್ವದೇಶಕ್ಕೆ ಮರಳಿದ್ದಾರೆ. ಕಾಬೂಲ್​ ಏರ್​ಪೋರ್ಟ್ ಕೂಡ ತಮ್ಮ ವಶವಾಗುತ್ತಿದ್ದಂತೆ ತಾಲಿಬಾನಿಗಳು ಗಾಳಿಯಲ್ಲಿ ಗುಂಡು ಹಾರಿಸಿ, ಸಿಕ್ಕಾಪಟೆ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ತಾಲಿಬಾನ್​ ಗೆಲುವನ್ನು ಸಂಭ್ರಮಿಸುತ್ತಿರುವುದು ಇದೇ ಮೊದಲಲ್ಲ. ಅವರು ಅಫ್ಘಾನಿಸ್ತಾನದಲ್ಲಿ ಅಧಿಕಾರ ಹಿಡಿದಾಗಿನಿಂದಲೂ ಪಾಕ್​ ಅವರ ಪರವಾಗಿಯೇ ಮಾತನಾಡುತ್ತಿದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್​ರಿಂದ ಹಿಡಿದು ಪ್ರತಿಯೊಬ್ಬರೂ ತಾಲಿಬಾನಿಗಳ ಆಡಳಿತದ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಇತ್ತ ತಾಲಿಬಾನ್​ ಕೂಡ ಪಾಕಿಸ್ತಾನ ತಮಗೆ ಎರಡನೇ ಮನೆಯಂತೆ ಎಂದು ಹೇಳಿಕೊಂಡಿತ್ತು. ಈಗ ಮತ್ತ ಖುರೇಷಿ ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚನೆಯಾಗುವ ಬಗ್ಗೆ ಮಾತನಾಡಿದ್ದಾರೆ ಮತ್ತು ಅಲ್ಲಿ ತಾಲಿಬಾನಿಗಳ ಸರ್ಕಾರ ರಚನೆಯಾಗುವದಕ್ಕೇ ತಾವು ಕಾಯುತ್ತಿರುವುದಾಗಿಯೂ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಹೃತಿಕ್ ರೋಶನ್, ಕತ್ರಿನಾ ಕೈಫ್ ಇದ್ದ ಜೊಮೆಟೊ ಜಾಹೀರಾತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ: ಸಮರ್ಥಿಸಿಕೊಂಡ ಕಂಪನಿ

West Bengal ಪಶ್ಚಿಮ ಬಂಗಾಳದಲ್ಲಿ ತನ್ಮಯ್ ಘೋಷ್ ನಂತರ ಟಿಎಂಸಿ ಸೇರಿದ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ