AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಕಂದಹಾರ್ ಷಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ: 16 ಸಾವು

ಶಿಯಾ ಮಸೀದಿಯ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ.

Afghanistan: ಕಂದಹಾರ್ ಷಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ: 16 ಸಾವು
ಕಂದಹಾರ್ ಮಸೀದಿಯಲ್ಲಿ ಬಾಂಬ್ ಸ್ಫೋಟ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 15, 2021 | 4:45 PM

Share

ಕಾಬೂಲ್: ಅಫ್ಘಾನಿಸ್ತಾನದ ಕುಂದುಜ್ ನಗರದಲ್ಲಿರುವ ಶಿಯಾ ಮಸೀದಿಯಲ್ಲಿ ಮಾರಣಾಂತಿಕ ಆತ್ಮಾಹುತಿ ದಾಳಿ ನಡೆದ ಒಂದು ವಾರದ ನಂತರ ಕಂದಹಾರ್ ನಗರದಲ್ಲಿಯೂ ಶುಕ್ರವಾರದ ಪ್ರಾರ್ಥನೆಗಳ ಸಂದರ್ಭ ಅಂಥದ್ದೇ ದಾಳಿ ನಡೆದಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಶಿಯಾ ಮಸೀದಿಯ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ ಎಂದು ಎಎಫ್​ಪಿ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯೊಂದರ ವಕ್ತಾರರು ಹೇಳಿದ್ದಾರೆ. ಕಂದಹಾರ್​ನ ಇಮಾಂ ಬಾರ್ಘಾ ಮಸೀದಿಯಲ್ಲಿ ಅತಿಹೆಚ್ಚು ಜನಸಂದಣಿಯಿದ್ದಾಗ ಬಾಂಬ್ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂಬ ಆತಂಕಗಳು ಕೇಳಿಬಂದಿವೆ. ಘಟನೆಯ ಬಗ್ಗೆ ಸ್ಥಳೀಯ ಪತ್ರಕರ್ತರು ಹಂಚಿಕೊಂಡಿರುವ ವಿಡಿಯೊ ತುಣುಕುಗಳಲ್ಲಿ ಮೃತ ದೇಹಗಳು ಮತ್ತು ನೆಲದ ಮೇಲೆ ಮಲಗಿರುವ ತೀವ್ರವಾಗಿ ಗಾಯಗೊಂಡ ವ್ಯಕ್ತಿಗಳು ಇರುವುದು ಕಂಡು ಬರುತ್ತದೆ.

ಸ್ಫೋಟದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಾಲಿಬಾನ್ ಆಡಳಿತದ ಗೃಹ ಇಲಾಖೆಯ ವಕ್ತಾರರು ಹೇಳಿದ್ದಾರೆ. ಸ್ಫೋಟದ ಹೊಣೆಯನ್ನು ಈವರೆಗೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿಗಳ ಹಸ್ತಕ್ಷೇಪ ಇರುವುದನ್ನು ತಳ್ಳಿಹಾಕಲು ಆಗದು ಎಂದು ಹಲವು ಸುದ್ದಿಸಂಸ್ಥೆಗಳು ಶಂಕಿಸಿವೆ. ಸುನ್ನಿ ಪ್ರಾಬಲ್ಯದ ದೇಶದಲ್ಲಿ ಅಲ್ಪಸಂಖ್ಯಾತರಾದ ಷಿಯಾ ಮುಸ್ಲಿಮರನ್ನು ಗುರಿಯಾಗಿಸಿ ಹಲವು ದಾಳಿಗಳು ನಡೆಯುತ್ತಿವೆ.

ಎಲ್ಲ ಅಲ್ಪಸಂಖ್ಯಾತರಿಗೆ ಭದ್ರತೆ ಮತ್ತು ಸುರಕ್ಷಿತ ವಾತಾವರಣದ ಭರವಸೆಯನ್ನು ಅಫ್ಘಾನಿಸ್ತಾನದಿಂದ ಅಮೆರಿಕ ಮತ್ತು ನ್ಯಾಟೊ ಪಡೆಗಳು ಹಿಂದೆ ಸರಿಯುವ ಮೊದಲು ತಾಲಿಬಾನ್ ನೀಡಿತ್ತು. ಆದರೆ ದೇಶದ ಮೇಲೆ ತಾಲಿಬಾನ್ ಹಿಡಿತ ಬಿಗಿಯಾದ ನಂತರ ಇಸ್ಲಾಮಿಕ್ ಸ್ಟೇಟ್-ಖೊರಸನ್ (ಐಸಿಸ್-ಕೆ) ಉಗ್ರಗಾಮಿ ಸಂಘಟನೆಯು ದಾಳಿಗಳನ್ನು ಹೆಚ್ಚಿಸಿತ್ತು. ತಾಲಿಬಾನ್​ ವಿರುದ್ಧ ಹೋರಾಡುವ ಶಪಥ ಮಾಡಿರುವ ಐಸಿಸ್-ಕೆ ಕಾಬೂಲ್ ವಿಮಾನ ನಿಲ್ದಾಣದ ಮೇಲೆ ಆಗಸ್ಟ್ ತಿಂಗಳಲ್ಲಿ ದಾಳಿ ಮಾಡಿ 13 ಅಮೆರಿಕ ಸೈನಿಕರನ್ನು ಕೊಂದಿತ್ತು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ