AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಕಂದಹಾರ್ ಷಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ: 16 ಸಾವು

ಶಿಯಾ ಮಸೀದಿಯ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ.

Afghanistan: ಕಂದಹಾರ್ ಷಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ: 16 ಸಾವು
ಕಂದಹಾರ್ ಮಸೀದಿಯಲ್ಲಿ ಬಾಂಬ್ ಸ್ಫೋಟ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 15, 2021 | 4:45 PM

Share

ಕಾಬೂಲ್: ಅಫ್ಘಾನಿಸ್ತಾನದ ಕುಂದುಜ್ ನಗರದಲ್ಲಿರುವ ಶಿಯಾ ಮಸೀದಿಯಲ್ಲಿ ಮಾರಣಾಂತಿಕ ಆತ್ಮಾಹುತಿ ದಾಳಿ ನಡೆದ ಒಂದು ವಾರದ ನಂತರ ಕಂದಹಾರ್ ನಗರದಲ್ಲಿಯೂ ಶುಕ್ರವಾರದ ಪ್ರಾರ್ಥನೆಗಳ ಸಂದರ್ಭ ಅಂಥದ್ದೇ ದಾಳಿ ನಡೆದಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಶಿಯಾ ಮಸೀದಿಯ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ ಎಂದು ಎಎಫ್​ಪಿ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯೊಂದರ ವಕ್ತಾರರು ಹೇಳಿದ್ದಾರೆ. ಕಂದಹಾರ್​ನ ಇಮಾಂ ಬಾರ್ಘಾ ಮಸೀದಿಯಲ್ಲಿ ಅತಿಹೆಚ್ಚು ಜನಸಂದಣಿಯಿದ್ದಾಗ ಬಾಂಬ್ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂಬ ಆತಂಕಗಳು ಕೇಳಿಬಂದಿವೆ. ಘಟನೆಯ ಬಗ್ಗೆ ಸ್ಥಳೀಯ ಪತ್ರಕರ್ತರು ಹಂಚಿಕೊಂಡಿರುವ ವಿಡಿಯೊ ತುಣುಕುಗಳಲ್ಲಿ ಮೃತ ದೇಹಗಳು ಮತ್ತು ನೆಲದ ಮೇಲೆ ಮಲಗಿರುವ ತೀವ್ರವಾಗಿ ಗಾಯಗೊಂಡ ವ್ಯಕ್ತಿಗಳು ಇರುವುದು ಕಂಡು ಬರುತ್ತದೆ.

ಸ್ಫೋಟದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಾಲಿಬಾನ್ ಆಡಳಿತದ ಗೃಹ ಇಲಾಖೆಯ ವಕ್ತಾರರು ಹೇಳಿದ್ದಾರೆ. ಸ್ಫೋಟದ ಹೊಣೆಯನ್ನು ಈವರೆಗೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿಗಳ ಹಸ್ತಕ್ಷೇಪ ಇರುವುದನ್ನು ತಳ್ಳಿಹಾಕಲು ಆಗದು ಎಂದು ಹಲವು ಸುದ್ದಿಸಂಸ್ಥೆಗಳು ಶಂಕಿಸಿವೆ. ಸುನ್ನಿ ಪ್ರಾಬಲ್ಯದ ದೇಶದಲ್ಲಿ ಅಲ್ಪಸಂಖ್ಯಾತರಾದ ಷಿಯಾ ಮುಸ್ಲಿಮರನ್ನು ಗುರಿಯಾಗಿಸಿ ಹಲವು ದಾಳಿಗಳು ನಡೆಯುತ್ತಿವೆ.

ಎಲ್ಲ ಅಲ್ಪಸಂಖ್ಯಾತರಿಗೆ ಭದ್ರತೆ ಮತ್ತು ಸುರಕ್ಷಿತ ವಾತಾವರಣದ ಭರವಸೆಯನ್ನು ಅಫ್ಘಾನಿಸ್ತಾನದಿಂದ ಅಮೆರಿಕ ಮತ್ತು ನ್ಯಾಟೊ ಪಡೆಗಳು ಹಿಂದೆ ಸರಿಯುವ ಮೊದಲು ತಾಲಿಬಾನ್ ನೀಡಿತ್ತು. ಆದರೆ ದೇಶದ ಮೇಲೆ ತಾಲಿಬಾನ್ ಹಿಡಿತ ಬಿಗಿಯಾದ ನಂತರ ಇಸ್ಲಾಮಿಕ್ ಸ್ಟೇಟ್-ಖೊರಸನ್ (ಐಸಿಸ್-ಕೆ) ಉಗ್ರಗಾಮಿ ಸಂಘಟನೆಯು ದಾಳಿಗಳನ್ನು ಹೆಚ್ಚಿಸಿತ್ತು. ತಾಲಿಬಾನ್​ ವಿರುದ್ಧ ಹೋರಾಡುವ ಶಪಥ ಮಾಡಿರುವ ಐಸಿಸ್-ಕೆ ಕಾಬೂಲ್ ವಿಮಾನ ನಿಲ್ದಾಣದ ಮೇಲೆ ಆಗಸ್ಟ್ ತಿಂಗಳಲ್ಲಿ ದಾಳಿ ಮಾಡಿ 13 ಅಮೆರಿಕ ಸೈನಿಕರನ್ನು ಕೊಂದಿತ್ತು.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್