AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ 11ರಂದೇ ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ಕಾರ್ಯಾರಂಭ: ಈ ದಿನಾಂಕದ ಮೂಲಕ ಅಮೆರಿಕವನ್ನು ಲೇವಡಿ ಮಾಡಿದ ತಾಲಿಬಾನ್

ಸರ್ಕಾರದ ಕಾರ್ಯಾರಂಭಕ್ಕೆ ಈ ದಿನಾಂಕವನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ತಾಲಿಬಾನ್ ಅಮೆರಿಕಕ್ಕೆ ಮಹತ್ವದ ಸಂದೇಶವೊಂದನ್ನು ರವಾನಿಸಿದೆ.

ಸೆ 11ರಂದೇ ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ಕಾರ್ಯಾರಂಭ: ಈ ದಿನಾಂಕದ ಮೂಲಕ ಅಮೆರಿಕವನ್ನು ಲೇವಡಿ ಮಾಡಿದ ತಾಲಿಬಾನ್
ಅಮೆರಿಕದ ವಿಶ್ವ ವಾಣಿಜ್ಯ ಸಂಸ್ಥೆ ಕಟ್ಟಡವನ್ನು ಧ್ವಂಸಗೊಳಿಸಿದ ಮೇಲೆ ತಾಲಿಬಾನ್ ಉಗ್ರರ ದಾಳಿ (ಎಡಚಿತ್ರ). ತಾಲಿಬಾನ್ ಸರ್ಕಾರದ ಮುಖ್ಯಸ್ಥ ಮುಲ್ಲಾ ಮೊಹಮದ್ ಅಕುಂದ್
TV9 Web
| Edited By: |

Updated on: Sep 09, 2021 | 8:43 PM

Share

ಕಾಬೂಲ್: ಅಮೆರಿಕದ ವಿಶ್ವ ವಾಣಿಜ್ಯ ಸಂಸ್ಥೆಯ ಕಟ್ಟಡಗಳನ್ನು ತಾಲಿಬಾನ್ ಉಗ್ರರು ವಿಮಾನ ನುಗ್ಗಿಸಿ, ಉರುಳಿಸಿದ ದಿನಾಂಕ ನೆನಪಿದೆಯೇ? ಅದು ಸೆಪ್ಟೆಂಬರ್ 11, 2001. ಅಮೆರಿಕ ಸೇರಿದಂತೆ ವಿಶ್ವ ಈ ದುರಂತವನ್ನು 9/11 ಎಂದೇ ಗುರುತಿಸುತ್ತದೆ. ಜಾಗತಿಕ ವಿದ್ಯಮಾನದಲ್ಲಿ ಹಲವು ತಲ್ಲಣಗಳಿಗೆ ಮುನ್ನುಡಿ ಬರೆದ 9/11ರಂದೇ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ ಆರಂಭವಾಗಲಿದೆ. ಸರ್ಕಾರದ ಕಾರ್ಯಾರಂಭಕ್ಕೆ ಈ ದಿನಾಂಕವನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ತಾಲಿಬಾನ್ ಅಮೆರಿಕಕ್ಕೆ ಮಹತ್ವದ ಸಂದೇಶವೊಂದನ್ನು ರವಾನಿಸಿದೆ.

‘ಈ ದಿನದ ಮಹತ್ವ ನಮಗೆ ಗೊತ್ತಿದೆ. ಸರ್ಕಾರದ ಕಾರ್ಯಾರಂಭಕ್ಕೆ ನಿರ್ದಿಷ್ಟವಾಗಿ ಇದೇ ದಿನ ಆರಿಸಿಕೊಳ್ಳುವ ಮೂಲಕ ಅಮೆರಿಕಕ್ಕೆ ಇರಿಸುಮುರಿಸು ಉಂಟು ಮಾಡುವುದು ನಮ್ಮ ಉದ್ದೇಶ ಆಗಿರಲಿಲ್ಲ’ ಎಂದು ತಾಲಿಬಾನ್​ನ ಹಿರಿಯ ನಾಯಕನೊಬ್ಬನ ವ್ಯಂಗ್ಯವಾಡಿರುವುದನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ನಮ್ಮನ್ನು ಅಮೆರಿಕದ ವಿದೇಶಾಂಗ ವ್ಯವಹಾರಗಳ ಇಲಾಖೆ ಕೆಟ್ಟದಾಗಿ ನಡೆಸಿಕೊಂಡಿರುವ ಅವಮಾನ ಇಂದಿಗೂ ಹಸಿರಾಗಿದೆ. ನಮ್ಮ ಸರ್ಕಾರದ ಗೃಹ ಸಚಿವರ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ. ಅಮೆರಿಕದ ಈ ಕ್ರಮಗಳಿಂದ ನಮಗೂ ಇರಿಸುಮುರಿಸು ಉಂಟಾಗಿದೆ ಎಂದು ಆತ ಸ್ಪಷ್ಟಪಡಿಸಿದ್ದಾನೆ.

ಕಾಬೂಲ್ ವಶಪಡಿಸಿಕೊಂಡ ಅಮೆರಿಕ ದೂತಾವಾಸ ಕಚೇರಿಗೆ ನುಗ್ಗಿದ್ದ ತಾಲಿಬಾನಿಗಳು ಕಟ್ಟಡವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲ, ಅಲ್ಲಿದ್ದ ಶಿಲ್ಪವೊಂದರ ಮೇಲೆ ತಾಲಿಬಾನ್​ ಧ್ವಜದ ಚಿತ್ರ ಬಿಡಿಸಿದ್ದರು.

ತಾಲಿಬಾನಿಗಳ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಪಾಕಿಸ್ತಾನ, ಚೀನಾ, ರಷ್ಯಾ, ಇರಾನ್, ಟರ್ಕಿ ಮತ್ತು ಕತಾರ್ ದೇಶಗಳಿಗೆ ತಾಲಿಬಾನ್ ಆಹ್ವಾನ ನೀಡಿತ್ತು. ಈ ದೇಶಗಳಿಗೆ ನಾವು ಮಹತ್ವ ನೀಡುತ್ತೇವೆ ಎಂಬ ಸಂದೇಶವನ್ನು ಈ ಮೂಲಕ ರವಾನಿಸಿತ್ತು.

(Afghanistan New Government will be functional on September 11 this has significant message)

ಇದನ್ನೂ ಓದಿ: Opinion: ತಾಲಿಬಾನ್​ ರಾಷ್ಟ್ರಕ್ಕೆ ಜಗತ್ತಿನ ಮನ್ನಣೆ; ಮಕ್ಕಳಿಗೆ ತೋರಿಸಲು ಒಳ್ಳೆಯದು-ಕೆಟ್ಟದು ಪರಿಕಲ್ಪನೆಗಳೇ ಇನ್ನಿಲ್ಲ!

ಇದನ್ನೂ ಓದಿ: Afghan Government ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ:  ನೂತನ ಅಫ್ಘಾನ್ ಸರ್ಕಾರದ ಬಗ್ಗೆ ಏಳು ಪ್ರಮುಖ ಸಂಗತಿಗಳು

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು