ಸೆ 11ರಂದೇ ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ಕಾರ್ಯಾರಂಭ: ಈ ದಿನಾಂಕದ ಮೂಲಕ ಅಮೆರಿಕವನ್ನು ಲೇವಡಿ ಮಾಡಿದ ತಾಲಿಬಾನ್

ಸರ್ಕಾರದ ಕಾರ್ಯಾರಂಭಕ್ಕೆ ಈ ದಿನಾಂಕವನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ತಾಲಿಬಾನ್ ಅಮೆರಿಕಕ್ಕೆ ಮಹತ್ವದ ಸಂದೇಶವೊಂದನ್ನು ರವಾನಿಸಿದೆ.

ಸೆ 11ರಂದೇ ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ಕಾರ್ಯಾರಂಭ: ಈ ದಿನಾಂಕದ ಮೂಲಕ ಅಮೆರಿಕವನ್ನು ಲೇವಡಿ ಮಾಡಿದ ತಾಲಿಬಾನ್
ಅಮೆರಿಕದ ವಿಶ್ವ ವಾಣಿಜ್ಯ ಸಂಸ್ಥೆ ಕಟ್ಟಡವನ್ನು ಧ್ವಂಸಗೊಳಿಸಿದ ಮೇಲೆ ತಾಲಿಬಾನ್ ಉಗ್ರರ ದಾಳಿ (ಎಡಚಿತ್ರ). ತಾಲಿಬಾನ್ ಸರ್ಕಾರದ ಮುಖ್ಯಸ್ಥ ಮುಲ್ಲಾ ಮೊಹಮದ್ ಅಕುಂದ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 09, 2021 | 8:43 PM

ಕಾಬೂಲ್: ಅಮೆರಿಕದ ವಿಶ್ವ ವಾಣಿಜ್ಯ ಸಂಸ್ಥೆಯ ಕಟ್ಟಡಗಳನ್ನು ತಾಲಿಬಾನ್ ಉಗ್ರರು ವಿಮಾನ ನುಗ್ಗಿಸಿ, ಉರುಳಿಸಿದ ದಿನಾಂಕ ನೆನಪಿದೆಯೇ? ಅದು ಸೆಪ್ಟೆಂಬರ್ 11, 2001. ಅಮೆರಿಕ ಸೇರಿದಂತೆ ವಿಶ್ವ ಈ ದುರಂತವನ್ನು 9/11 ಎಂದೇ ಗುರುತಿಸುತ್ತದೆ. ಜಾಗತಿಕ ವಿದ್ಯಮಾನದಲ್ಲಿ ಹಲವು ತಲ್ಲಣಗಳಿಗೆ ಮುನ್ನುಡಿ ಬರೆದ 9/11ರಂದೇ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ ಆರಂಭವಾಗಲಿದೆ. ಸರ್ಕಾರದ ಕಾರ್ಯಾರಂಭಕ್ಕೆ ಈ ದಿನಾಂಕವನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ತಾಲಿಬಾನ್ ಅಮೆರಿಕಕ್ಕೆ ಮಹತ್ವದ ಸಂದೇಶವೊಂದನ್ನು ರವಾನಿಸಿದೆ.

‘ಈ ದಿನದ ಮಹತ್ವ ನಮಗೆ ಗೊತ್ತಿದೆ. ಸರ್ಕಾರದ ಕಾರ್ಯಾರಂಭಕ್ಕೆ ನಿರ್ದಿಷ್ಟವಾಗಿ ಇದೇ ದಿನ ಆರಿಸಿಕೊಳ್ಳುವ ಮೂಲಕ ಅಮೆರಿಕಕ್ಕೆ ಇರಿಸುಮುರಿಸು ಉಂಟು ಮಾಡುವುದು ನಮ್ಮ ಉದ್ದೇಶ ಆಗಿರಲಿಲ್ಲ’ ಎಂದು ತಾಲಿಬಾನ್​ನ ಹಿರಿಯ ನಾಯಕನೊಬ್ಬನ ವ್ಯಂಗ್ಯವಾಡಿರುವುದನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ನಮ್ಮನ್ನು ಅಮೆರಿಕದ ವಿದೇಶಾಂಗ ವ್ಯವಹಾರಗಳ ಇಲಾಖೆ ಕೆಟ್ಟದಾಗಿ ನಡೆಸಿಕೊಂಡಿರುವ ಅವಮಾನ ಇಂದಿಗೂ ಹಸಿರಾಗಿದೆ. ನಮ್ಮ ಸರ್ಕಾರದ ಗೃಹ ಸಚಿವರ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದೆ. ಅಮೆರಿಕದ ಈ ಕ್ರಮಗಳಿಂದ ನಮಗೂ ಇರಿಸುಮುರಿಸು ಉಂಟಾಗಿದೆ ಎಂದು ಆತ ಸ್ಪಷ್ಟಪಡಿಸಿದ್ದಾನೆ.

ಕಾಬೂಲ್ ವಶಪಡಿಸಿಕೊಂಡ ಅಮೆರಿಕ ದೂತಾವಾಸ ಕಚೇರಿಗೆ ನುಗ್ಗಿದ್ದ ತಾಲಿಬಾನಿಗಳು ಕಟ್ಟಡವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲ, ಅಲ್ಲಿದ್ದ ಶಿಲ್ಪವೊಂದರ ಮೇಲೆ ತಾಲಿಬಾನ್​ ಧ್ವಜದ ಚಿತ್ರ ಬಿಡಿಸಿದ್ದರು.

ತಾಲಿಬಾನಿಗಳ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಪಾಕಿಸ್ತಾನ, ಚೀನಾ, ರಷ್ಯಾ, ಇರಾನ್, ಟರ್ಕಿ ಮತ್ತು ಕತಾರ್ ದೇಶಗಳಿಗೆ ತಾಲಿಬಾನ್ ಆಹ್ವಾನ ನೀಡಿತ್ತು. ಈ ದೇಶಗಳಿಗೆ ನಾವು ಮಹತ್ವ ನೀಡುತ್ತೇವೆ ಎಂಬ ಸಂದೇಶವನ್ನು ಈ ಮೂಲಕ ರವಾನಿಸಿತ್ತು.

(Afghanistan New Government will be functional on September 11 this has significant message)

ಇದನ್ನೂ ಓದಿ: Opinion: ತಾಲಿಬಾನ್​ ರಾಷ್ಟ್ರಕ್ಕೆ ಜಗತ್ತಿನ ಮನ್ನಣೆ; ಮಕ್ಕಳಿಗೆ ತೋರಿಸಲು ಒಳ್ಳೆಯದು-ಕೆಟ್ಟದು ಪರಿಕಲ್ಪನೆಗಳೇ ಇನ್ನಿಲ್ಲ!

ಇದನ್ನೂ ಓದಿ: Afghan Government ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ:  ನೂತನ ಅಫ್ಘಾನ್ ಸರ್ಕಾರದ ಬಗ್ಗೆ ಏಳು ಪ್ರಮುಖ ಸಂಗತಿಗಳು

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ