AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

"ಅಫ್ಘಾನ್-ಹಿಂದೂ ಸಿಖ್ ಸಮುದಾಯದಿಂದ ಬನ್ಸ್ರಿ ಲಾಲ್ ಅರೆಂದೆಹ್ ಅವರನ್ನು ನಿನ್ನೆ ಬೆಳಿಗ್ಗೆ 8 ಗಂಟೆಗೆ ತನ್ನ ಅಂಗಡಿಯ ಸಮೀಪದಿಂದ ಅಪಹರಿಸಲಾಗಿದೆ ಎಂದು ಅವರು ನನಗೆ ಮಾಹಿತಿ ನೀಡಿದ್ದಾರೆ. ಅವರು ಔಷಧ ಉತ್ಪನ್ನಗಳ ವ್ಯಾಪಾರದಲ್ಲಿ ನಿರತರಾಗಿದ್ದು ಮುನ್ನ ಅಂಗಡಿಯಲ್ಲಿ ತನ್ನ ಸಿಬ್ಬಂದಿಯೊಂದಿಗೆ ಇದ್ದಾಗ ಅಪಹರಣಕ್ಕೊಳಗಾಗಿದ್ದಾರೆ ಎಂದು ಚಾಂದೋಕ್ ಹೇಳಿದ್ದಾರೆ

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 15, 2021 | 1:09 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ ಭಾರತದ ಪ್ರಜೆ, 50ರ ಹರೆಯದ ಬನ್ಸ್ರಿ ಲಾಲ್ ಅರೆಂದೆಹ್ (Bansri Lal Arendeh) ಎಂಬಾತನನ್ನು ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಅಪಹರಿಸಲಾಗಿದೆ ಎಂದು ಇಂಡಿಯನ್ ವರ್ಲ್ಡ್ ಫೋರಂ (Indian World Forum) ಅಧ್ಯಕ್ಷ ಪುನೀತ್ ಸಿಂಗ್ ಚಾಂದೋಕ್ ಹೇಳಿದ್ದಾರೆ. “ನಾನು ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ನೀಡಿದ್ದೇನೆ ಮತ್ತು ಈ ನಿಟ್ಟಿನಲ್ಲಿ ಅವರ ತಕ್ಷಣದ ಮಧ್ಯಸ್ಥಿಕೆ ಮತ್ತು ಸಹಾಯವನ್ನು ಕೋರಿದ್ದೇನೆ” ಎಂದು ಪುನೀತ್ ಸಿಂಗ್ ಚಾಂದೋಕ್ ಹೇಳಿದರು.

“ಅಫ್ಘಾನ್-ಹಿಂದೂ ಸಿಖ್ ಸಮುದಾಯದಿಂದ ಬನ್ಸ್ರಿ ಲಾಲ್ ಅರೆಂದೆಹ್ ಅವರನ್ನು ನಿನ್ನೆ ಬೆಳಿಗ್ಗೆ 8 ಗಂಟೆಗೆ ತನ್ನ ಅಂಗಡಿಯ ಸಮೀಪದಿಂದ ಅಪಹರಿಸಲಾಗಿದೆ ಎಂದು ಅವರು ನನಗೆ ಮಾಹಿತಿ ನೀಡಿದ್ದಾರೆ. ಅವರು ಔಷಧ ಉತ್ಪನ್ನಗಳ ವ್ಯಾಪಾರದಲ್ಲಿ ನಿರತರಾಗಿದ್ದು ಮುನ್ನ ಅಂಗಡಿಯಲ್ಲಿ ತನ್ನ ಸಿಬ್ಬಂದಿಯೊಂದಿಗೆ ಇದ್ದಾಗ ಅಪಹರಣಕ್ಕೊಳಗಾಗಿದ್ದಾರೆ ಎಂದು ಚಾಂದೋಕ್ ಹೇಳಿದ್ದಾರೆ.

ಅವರು ತನ್ನ ಸಿಬ್ಬಂದಿಯೊಂದಿಗೆ ಅಪಹರಿಸಲ್ಪಟ್ಟಿದ್ದು ಅವರ ಜತೆ ಇದ್ದ ಸಿಬ್ಬಂದಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅವರನ್ನು ಅಪಹರಣಕಾರರು ನಿಷ್ಕರುಣೆಯಿಂದ ಥಳಿಸಿದರು. ಕಾಬೂಲ್‌ನ 11 ನೇ ಪೊಲೀಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪುನೀತ್ ಸಿಂಗ್ ಚಾಂದೋಕ್ ಹೇಳಿದ್ದಾರೆ.

ಬನ್ಸ್ರಿ ಲಾಲ್ ಅರೆಂದೆಹ್ ಅವರ ಕುಟುಂಬ ದೆಹಲಿ ಎನ್‌ಸಿಆರ್‌ನಲ್ಲಿ ವಾಸಿಸುತ್ತಿದೆ. ಸ್ಥಳೀಯ ಸಮುದಾಯವು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದ್ದು ಸ್ಥಳೀಯ ತನಿಖಾ ಸಂಸ್ಥೆಗಳೊಂದಿಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅರೆಂದೆಹ್ ಪತ್ತೆಗಾಗಿ ಆತನ ಸ್ನೇಹಿತರು ವಿವಿಧ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಕಳ್ಳರ ಕೈ ಕಟ್, ಕಾನೂನು ಬಾಹಿರ ಸಂಭೋಗ ಮಾಡಿದವರ ಮೇಲೆ ಕಲ್ಲೆಸೆತ: ಶಿಕ್ಷೆ ರೂಪಿಸಲೆಂದೇ ಸಚಿವಾಲಯ

(Afghanistan-origin Indian national abducted at gunpoint in Kabul)

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು