AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

"ಅಫ್ಘಾನ್-ಹಿಂದೂ ಸಿಖ್ ಸಮುದಾಯದಿಂದ ಬನ್ಸ್ರಿ ಲಾಲ್ ಅರೆಂದೆಹ್ ಅವರನ್ನು ನಿನ್ನೆ ಬೆಳಿಗ್ಗೆ 8 ಗಂಟೆಗೆ ತನ್ನ ಅಂಗಡಿಯ ಸಮೀಪದಿಂದ ಅಪಹರಿಸಲಾಗಿದೆ ಎಂದು ಅವರು ನನಗೆ ಮಾಹಿತಿ ನೀಡಿದ್ದಾರೆ. ಅವರು ಔಷಧ ಉತ್ಪನ್ನಗಳ ವ್ಯಾಪಾರದಲ್ಲಿ ನಿರತರಾಗಿದ್ದು ಮುನ್ನ ಅಂಗಡಿಯಲ್ಲಿ ತನ್ನ ಸಿಬ್ಬಂದಿಯೊಂದಿಗೆ ಇದ್ದಾಗ ಅಪಹರಣಕ್ಕೊಳಗಾಗಿದ್ದಾರೆ ಎಂದು ಚಾಂದೋಕ್ ಹೇಳಿದ್ದಾರೆ

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 15, 2021 | 1:09 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ ಭಾರತದ ಪ್ರಜೆ, 50ರ ಹರೆಯದ ಬನ್ಸ್ರಿ ಲಾಲ್ ಅರೆಂದೆಹ್ (Bansri Lal Arendeh) ಎಂಬಾತನನ್ನು ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಅಪಹರಿಸಲಾಗಿದೆ ಎಂದು ಇಂಡಿಯನ್ ವರ್ಲ್ಡ್ ಫೋರಂ (Indian World Forum) ಅಧ್ಯಕ್ಷ ಪುನೀತ್ ಸಿಂಗ್ ಚಾಂದೋಕ್ ಹೇಳಿದ್ದಾರೆ. “ನಾನು ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ನೀಡಿದ್ದೇನೆ ಮತ್ತು ಈ ನಿಟ್ಟಿನಲ್ಲಿ ಅವರ ತಕ್ಷಣದ ಮಧ್ಯಸ್ಥಿಕೆ ಮತ್ತು ಸಹಾಯವನ್ನು ಕೋರಿದ್ದೇನೆ” ಎಂದು ಪುನೀತ್ ಸಿಂಗ್ ಚಾಂದೋಕ್ ಹೇಳಿದರು.

“ಅಫ್ಘಾನ್-ಹಿಂದೂ ಸಿಖ್ ಸಮುದಾಯದಿಂದ ಬನ್ಸ್ರಿ ಲಾಲ್ ಅರೆಂದೆಹ್ ಅವರನ್ನು ನಿನ್ನೆ ಬೆಳಿಗ್ಗೆ 8 ಗಂಟೆಗೆ ತನ್ನ ಅಂಗಡಿಯ ಸಮೀಪದಿಂದ ಅಪಹರಿಸಲಾಗಿದೆ ಎಂದು ಅವರು ನನಗೆ ಮಾಹಿತಿ ನೀಡಿದ್ದಾರೆ. ಅವರು ಔಷಧ ಉತ್ಪನ್ನಗಳ ವ್ಯಾಪಾರದಲ್ಲಿ ನಿರತರಾಗಿದ್ದು ಮುನ್ನ ಅಂಗಡಿಯಲ್ಲಿ ತನ್ನ ಸಿಬ್ಬಂದಿಯೊಂದಿಗೆ ಇದ್ದಾಗ ಅಪಹರಣಕ್ಕೊಳಗಾಗಿದ್ದಾರೆ ಎಂದು ಚಾಂದೋಕ್ ಹೇಳಿದ್ದಾರೆ.

ಅವರು ತನ್ನ ಸಿಬ್ಬಂದಿಯೊಂದಿಗೆ ಅಪಹರಿಸಲ್ಪಟ್ಟಿದ್ದು ಅವರ ಜತೆ ಇದ್ದ ಸಿಬ್ಬಂದಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅವರನ್ನು ಅಪಹರಣಕಾರರು ನಿಷ್ಕರುಣೆಯಿಂದ ಥಳಿಸಿದರು. ಕಾಬೂಲ್‌ನ 11 ನೇ ಪೊಲೀಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪುನೀತ್ ಸಿಂಗ್ ಚಾಂದೋಕ್ ಹೇಳಿದ್ದಾರೆ.

ಬನ್ಸ್ರಿ ಲಾಲ್ ಅರೆಂದೆಹ್ ಅವರ ಕುಟುಂಬ ದೆಹಲಿ ಎನ್‌ಸಿಆರ್‌ನಲ್ಲಿ ವಾಸಿಸುತ್ತಿದೆ. ಸ್ಥಳೀಯ ಸಮುದಾಯವು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದ್ದು ಸ್ಥಳೀಯ ತನಿಖಾ ಸಂಸ್ಥೆಗಳೊಂದಿಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅರೆಂದೆಹ್ ಪತ್ತೆಗಾಗಿ ಆತನ ಸ್ನೇಹಿತರು ವಿವಿಧ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಕಳ್ಳರ ಕೈ ಕಟ್, ಕಾನೂನು ಬಾಹಿರ ಸಂಭೋಗ ಮಾಡಿದವರ ಮೇಲೆ ಕಲ್ಲೆಸೆತ: ಶಿಕ್ಷೆ ರೂಪಿಸಲೆಂದೇ ಸಚಿವಾಲಯ

(Afghanistan-origin Indian national abducted at gunpoint in Kabul)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ