ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

"ಅಫ್ಘಾನ್-ಹಿಂದೂ ಸಿಖ್ ಸಮುದಾಯದಿಂದ ಬನ್ಸ್ರಿ ಲಾಲ್ ಅರೆಂದೆಹ್ ಅವರನ್ನು ನಿನ್ನೆ ಬೆಳಿಗ್ಗೆ 8 ಗಂಟೆಗೆ ತನ್ನ ಅಂಗಡಿಯ ಸಮೀಪದಿಂದ ಅಪಹರಿಸಲಾಗಿದೆ ಎಂದು ಅವರು ನನಗೆ ಮಾಹಿತಿ ನೀಡಿದ್ದಾರೆ. ಅವರು ಔಷಧ ಉತ್ಪನ್ನಗಳ ವ್ಯಾಪಾರದಲ್ಲಿ ನಿರತರಾಗಿದ್ದು ಮುನ್ನ ಅಂಗಡಿಯಲ್ಲಿ ತನ್ನ ಸಿಬ್ಬಂದಿಯೊಂದಿಗೆ ಇದ್ದಾಗ ಅಪಹರಣಕ್ಕೊಳಗಾಗಿದ್ದಾರೆ ಎಂದು ಚಾಂದೋಕ್ ಹೇಳಿದ್ದಾರೆ

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Sep 15, 2021 | 1:09 PM

ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ ಭಾರತದ ಪ್ರಜೆ, 50ರ ಹರೆಯದ ಬನ್ಸ್ರಿ ಲಾಲ್ ಅರೆಂದೆಹ್ (Bansri Lal Arendeh) ಎಂಬಾತನನ್ನು ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಅಪಹರಿಸಲಾಗಿದೆ ಎಂದು ಇಂಡಿಯನ್ ವರ್ಲ್ಡ್ ಫೋರಂ (Indian World Forum) ಅಧ್ಯಕ್ಷ ಪುನೀತ್ ಸಿಂಗ್ ಚಾಂದೋಕ್ ಹೇಳಿದ್ದಾರೆ. “ನಾನು ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ನೀಡಿದ್ದೇನೆ ಮತ್ತು ಈ ನಿಟ್ಟಿನಲ್ಲಿ ಅವರ ತಕ್ಷಣದ ಮಧ್ಯಸ್ಥಿಕೆ ಮತ್ತು ಸಹಾಯವನ್ನು ಕೋರಿದ್ದೇನೆ” ಎಂದು ಪುನೀತ್ ಸಿಂಗ್ ಚಾಂದೋಕ್ ಹೇಳಿದರು.

“ಅಫ್ಘಾನ್-ಹಿಂದೂ ಸಿಖ್ ಸಮುದಾಯದಿಂದ ಬನ್ಸ್ರಿ ಲಾಲ್ ಅರೆಂದೆಹ್ ಅವರನ್ನು ನಿನ್ನೆ ಬೆಳಿಗ್ಗೆ 8 ಗಂಟೆಗೆ ತನ್ನ ಅಂಗಡಿಯ ಸಮೀಪದಿಂದ ಅಪಹರಿಸಲಾಗಿದೆ ಎಂದು ಅವರು ನನಗೆ ಮಾಹಿತಿ ನೀಡಿದ್ದಾರೆ. ಅವರು ಔಷಧ ಉತ್ಪನ್ನಗಳ ವ್ಯಾಪಾರದಲ್ಲಿ ನಿರತರಾಗಿದ್ದು ಮುನ್ನ ಅಂಗಡಿಯಲ್ಲಿ ತನ್ನ ಸಿಬ್ಬಂದಿಯೊಂದಿಗೆ ಇದ್ದಾಗ ಅಪಹರಣಕ್ಕೊಳಗಾಗಿದ್ದಾರೆ ಎಂದು ಚಾಂದೋಕ್ ಹೇಳಿದ್ದಾರೆ.

ಅವರು ತನ್ನ ಸಿಬ್ಬಂದಿಯೊಂದಿಗೆ ಅಪಹರಿಸಲ್ಪಟ್ಟಿದ್ದು ಅವರ ಜತೆ ಇದ್ದ ಸಿಬ್ಬಂದಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅವರನ್ನು ಅಪಹರಣಕಾರರು ನಿಷ್ಕರುಣೆಯಿಂದ ಥಳಿಸಿದರು. ಕಾಬೂಲ್‌ನ 11 ನೇ ಪೊಲೀಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪುನೀತ್ ಸಿಂಗ್ ಚಾಂದೋಕ್ ಹೇಳಿದ್ದಾರೆ.

ಬನ್ಸ್ರಿ ಲಾಲ್ ಅರೆಂದೆಹ್ ಅವರ ಕುಟುಂಬ ದೆಹಲಿ ಎನ್‌ಸಿಆರ್‌ನಲ್ಲಿ ವಾಸಿಸುತ್ತಿದೆ. ಸ್ಥಳೀಯ ಸಮುದಾಯವು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದ್ದು ಸ್ಥಳೀಯ ತನಿಖಾ ಸಂಸ್ಥೆಗಳೊಂದಿಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅರೆಂದೆಹ್ ಪತ್ತೆಗಾಗಿ ಆತನ ಸ್ನೇಹಿತರು ವಿವಿಧ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಕಳ್ಳರ ಕೈ ಕಟ್, ಕಾನೂನು ಬಾಹಿರ ಸಂಭೋಗ ಮಾಡಿದವರ ಮೇಲೆ ಕಲ್ಲೆಸೆತ: ಶಿಕ್ಷೆ ರೂಪಿಸಲೆಂದೇ ಸಚಿವಾಲಯ

(Afghanistan-origin Indian national abducted at gunpoint in Kabul)

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ