AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

"ಅಫ್ಘಾನ್-ಹಿಂದೂ ಸಿಖ್ ಸಮುದಾಯದಿಂದ ಬನ್ಸ್ರಿ ಲಾಲ್ ಅರೆಂದೆಹ್ ಅವರನ್ನು ನಿನ್ನೆ ಬೆಳಿಗ್ಗೆ 8 ಗಂಟೆಗೆ ತನ್ನ ಅಂಗಡಿಯ ಸಮೀಪದಿಂದ ಅಪಹರಿಸಲಾಗಿದೆ ಎಂದು ಅವರು ನನಗೆ ಮಾಹಿತಿ ನೀಡಿದ್ದಾರೆ. ಅವರು ಔಷಧ ಉತ್ಪನ್ನಗಳ ವ್ಯಾಪಾರದಲ್ಲಿ ನಿರತರಾಗಿದ್ದು ಮುನ್ನ ಅಂಗಡಿಯಲ್ಲಿ ತನ್ನ ಸಿಬ್ಬಂದಿಯೊಂದಿಗೆ ಇದ್ದಾಗ ಅಪಹರಣಕ್ಕೊಳಗಾಗಿದ್ದಾರೆ ಎಂದು ಚಾಂದೋಕ್ ಹೇಳಿದ್ದಾರೆ

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 15, 2021 | 1:09 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ ಭಾರತದ ಪ್ರಜೆ, 50ರ ಹರೆಯದ ಬನ್ಸ್ರಿ ಲಾಲ್ ಅರೆಂದೆಹ್ (Bansri Lal Arendeh) ಎಂಬಾತನನ್ನು ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಅಪಹರಿಸಲಾಗಿದೆ ಎಂದು ಇಂಡಿಯನ್ ವರ್ಲ್ಡ್ ಫೋರಂ (Indian World Forum) ಅಧ್ಯಕ್ಷ ಪುನೀತ್ ಸಿಂಗ್ ಚಾಂದೋಕ್ ಹೇಳಿದ್ದಾರೆ. “ನಾನು ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಮಾಹಿತಿ ನೀಡಿದ್ದೇನೆ ಮತ್ತು ಈ ನಿಟ್ಟಿನಲ್ಲಿ ಅವರ ತಕ್ಷಣದ ಮಧ್ಯಸ್ಥಿಕೆ ಮತ್ತು ಸಹಾಯವನ್ನು ಕೋರಿದ್ದೇನೆ” ಎಂದು ಪುನೀತ್ ಸಿಂಗ್ ಚಾಂದೋಕ್ ಹೇಳಿದರು.

“ಅಫ್ಘಾನ್-ಹಿಂದೂ ಸಿಖ್ ಸಮುದಾಯದಿಂದ ಬನ್ಸ್ರಿ ಲಾಲ್ ಅರೆಂದೆಹ್ ಅವರನ್ನು ನಿನ್ನೆ ಬೆಳಿಗ್ಗೆ 8 ಗಂಟೆಗೆ ತನ್ನ ಅಂಗಡಿಯ ಸಮೀಪದಿಂದ ಅಪಹರಿಸಲಾಗಿದೆ ಎಂದು ಅವರು ನನಗೆ ಮಾಹಿತಿ ನೀಡಿದ್ದಾರೆ. ಅವರು ಔಷಧ ಉತ್ಪನ್ನಗಳ ವ್ಯಾಪಾರದಲ್ಲಿ ನಿರತರಾಗಿದ್ದು ಮುನ್ನ ಅಂಗಡಿಯಲ್ಲಿ ತನ್ನ ಸಿಬ್ಬಂದಿಯೊಂದಿಗೆ ಇದ್ದಾಗ ಅಪಹರಣಕ್ಕೊಳಗಾಗಿದ್ದಾರೆ ಎಂದು ಚಾಂದೋಕ್ ಹೇಳಿದ್ದಾರೆ.

ಅವರು ತನ್ನ ಸಿಬ್ಬಂದಿಯೊಂದಿಗೆ ಅಪಹರಿಸಲ್ಪಟ್ಟಿದ್ದು ಅವರ ಜತೆ ಇದ್ದ ಸಿಬ್ಬಂದಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅವರನ್ನು ಅಪಹರಣಕಾರರು ನಿಷ್ಕರುಣೆಯಿಂದ ಥಳಿಸಿದರು. ಕಾಬೂಲ್‌ನ 11 ನೇ ಪೊಲೀಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪುನೀತ್ ಸಿಂಗ್ ಚಾಂದೋಕ್ ಹೇಳಿದ್ದಾರೆ.

ಬನ್ಸ್ರಿ ಲಾಲ್ ಅರೆಂದೆಹ್ ಅವರ ಕುಟುಂಬ ದೆಹಲಿ ಎನ್‌ಸಿಆರ್‌ನಲ್ಲಿ ವಾಸಿಸುತ್ತಿದೆ. ಸ್ಥಳೀಯ ಸಮುದಾಯವು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದ್ದು ಸ್ಥಳೀಯ ತನಿಖಾ ಸಂಸ್ಥೆಗಳೊಂದಿಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅರೆಂದೆಹ್ ಪತ್ತೆಗಾಗಿ ಆತನ ಸ್ನೇಹಿತರು ವಿವಿಧ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಕಳ್ಳರ ಕೈ ಕಟ್, ಕಾನೂನು ಬಾಹಿರ ಸಂಭೋಗ ಮಾಡಿದವರ ಮೇಲೆ ಕಲ್ಲೆಸೆತ: ಶಿಕ್ಷೆ ರೂಪಿಸಲೆಂದೇ ಸಚಿವಾಲಯ

(Afghanistan-origin Indian national abducted at gunpoint in Kabul)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ