AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ ಗನ್​ ಹಿಡಿದು ನಿಂತ ತಾಲಿಬಾನಿಗಳು; ಆ ಒಂದು ಮಾತನ್ನು ಬಲವಂತವಾಗಿ ಹೇಳಿಸಿದರು !

ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಅವರು ನಾವು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಆ ಮಾತನ್ನು ಅವರು ಉಳಿಸಿಕೊಳ್ಳುತ್ತಿಲ್ಲ.

Video: ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ ಗನ್​ ಹಿಡಿದು ನಿಂತ ತಾಲಿಬಾನಿಗಳು; ಆ ಒಂದು ಮಾತನ್ನು ಬಲವಂತವಾಗಿ ಹೇಳಿಸಿದರು !
ಸುದ್ದಿ ನಿರೂಪಕನ ಹಿಂದೆ ಗನ್​ ಹಿಡಿದು ನಿಂತ ತಾಲಿಬಾನಿಗಳು
TV9 Web
| Edited By: |

Updated on:Aug 30, 2021 | 12:13 PM

Share

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಬಂದಿದ್ದೇಬಂದಿದ್ದು, ಅಲ್ಲಿಂದ ಪರಾರಿಯಾಗಲು ಅನೇಕರು ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದೆಡೆ ತಾಲಿಬಾನ್​ ಉಗ್ರರು ಜನರಿಗೆ ಭರವಸೆ ನೀಡುತ್ತಿದ್ದಾರೆ..ಯಾರೂ ದೇಶಬಿಟ್ಟು ಹೋಗಬೇಡಿ. ಇಸ್ಲಾಮಿಕ್​ ಆಡಳಿತಕ್ಕೆ ಹೆದರಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಮತ್ತೆಮತ್ತೆ ಭಯಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.

ಇದೀಗ ತಾಲಿಬಾನಿಗಳು, ಸುದ್ದಿ ವಾಹಿನಿಯೊಂದರ ಕಚೇರಿಗೆ ನುಗ್ಗಿ, ಅಲ್ಲಿ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ ಗನ್​ ಹಿಡಿದು ನಿಂತು ಹೆದರಿಸುತ್ತಿರುವ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗಿದೆ. ಆ ನಿರೂಪಕನ ಸುತ್ತ 6-7 ಉಗ್ರರು ನಿಂತಿದ್ದನ್ನು ವಿಡಿಯೋದಲ್ಲಿ ನೋಡಬಹುದು. ‘ತಾಲಿಬಾನಿಗಳಿಗೆ ಹೆದರಬೇಡಿ ಎಂದು ನಿಮ್ಮ ಸುದ್ದಿ ವಾಹಿನಿ ಮೂಲಕ ಹೇಳು..ಇಸ್ಲಾಮಿಕ್ ಆಡಳಿತಕ್ಕೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳು, ತಾಲಿಬಾನಿಗಳನ್ನು ಹೊಗಳು’ಎಂದು ನಿರೂಪಕನಿಗೆ ಗನ್​ ತೋರಿಸಿ, ಬಲವಂತವಾಗಿ ಹೇಳಿಸಿದ್ದಾರೆ.

ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಅವರು ನಾವು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಕೆಲವು ಮಾಧ್ಯಮಗಳು ತಾಲಿಬಾನಿಗಳ ಆಡಳಿತ ಶುರುವಾಗುತ್ತಿದ್ದಂತೆ ತಮ್ಮಲ್ಲಿರುವ ಮಹಿಳಾ ಉದ್ಯೋಗಿಗಳನ್ನೆಲ್ಲ ಕೆಲಸದಿಂದ ತೆಗೆದುಹಾಕಿದ್ದಾರೆ. ಕೆಲವೇ ದಿನಗಳ ಹಿಂದೆ, ಕಾಬೂಲ್​​ನಲ್ಲಿ ವರದಿ ಮಾಡುತ್ತಿದ್ದ ಟೋಲೋ ನ್ಯೂಸ್​ ವರದಿಗಾರ ಮತ್ತು ಕ್ಯಾಮರಾಮನ್​​ಗೆ ಉಗ್ರರು ಥಳಿಸಿದ್ದರು. ಕಾಬೂಲ್​ನ್ನು ವಶಪಡಿಸಿಕೊಂಡಾಗಿನಿಂದಲೂ ಅಲ್ಲಿನ ಪತ್ರಕರ್ತರ ಮನೆಗಳನ್ನು ತಾಲಿಬಾನಿಗಳು ಹುಡುಕುತ್ತಿದ್ದಾರೆ. DW ಎಂಬ ನ್ಯೂಸ್​ ಚಾನಲ್​ನಲ್ಲಿ ಕೆಲಸ ಮಾಡುತ್ತಿದ್ದ ವರದಿಗಾರನೊಬ್ಬನನ್ನು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: Viral News: ಪ್ರತಿ ಶುಕ್ರವಾರ ಮೀನು ಮತ್ತು ಚಿಪ್ಸ್ ಸೇವನೆಯಿಂದ ಇವರು ದೀರ್ಘಾಯುಷ್ಯ ಪಡೆದರಂತೆ!

ಅತಿ ಹೆಚ್ಚು ಸರ್ಜರಿಗಳನ್ನು ಯಶಸ್ವಿಯಾಗಿ ನೆರವೇರಿಸಿದ ಕಿಮ್ಸ್​​; ಕರ್ನಾಟಕದಲ್ಲಿಯೇ ಅಗ್ರಸ್ಥಾನವನ್ನು ಪಡೆಯುವಲ್ಲಿ ಸಫಲ

Published On - 10:06 am, Mon, 30 August 21

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ