AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ ಗನ್​ ಹಿಡಿದು ನಿಂತ ತಾಲಿಬಾನಿಗಳು; ಆ ಒಂದು ಮಾತನ್ನು ಬಲವಂತವಾಗಿ ಹೇಳಿಸಿದರು !

ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಅವರು ನಾವು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಆ ಮಾತನ್ನು ಅವರು ಉಳಿಸಿಕೊಳ್ಳುತ್ತಿಲ್ಲ.

Video: ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ ಗನ್​ ಹಿಡಿದು ನಿಂತ ತಾಲಿಬಾನಿಗಳು; ಆ ಒಂದು ಮಾತನ್ನು ಬಲವಂತವಾಗಿ ಹೇಳಿಸಿದರು !
ಸುದ್ದಿ ನಿರೂಪಕನ ಹಿಂದೆ ಗನ್​ ಹಿಡಿದು ನಿಂತ ತಾಲಿಬಾನಿಗಳು
TV9 Web
| Edited By: |

Updated on:Aug 30, 2021 | 12:13 PM

Share

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಬಂದಿದ್ದೇಬಂದಿದ್ದು, ಅಲ್ಲಿಂದ ಪರಾರಿಯಾಗಲು ಅನೇಕರು ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದೆಡೆ ತಾಲಿಬಾನ್​ ಉಗ್ರರು ಜನರಿಗೆ ಭರವಸೆ ನೀಡುತ್ತಿದ್ದಾರೆ..ಯಾರೂ ದೇಶಬಿಟ್ಟು ಹೋಗಬೇಡಿ. ಇಸ್ಲಾಮಿಕ್​ ಆಡಳಿತಕ್ಕೆ ಹೆದರಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಮತ್ತೆಮತ್ತೆ ಭಯಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.

ಇದೀಗ ತಾಲಿಬಾನಿಗಳು, ಸುದ್ದಿ ವಾಹಿನಿಯೊಂದರ ಕಚೇರಿಗೆ ನುಗ್ಗಿ, ಅಲ್ಲಿ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ ಗನ್​ ಹಿಡಿದು ನಿಂತು ಹೆದರಿಸುತ್ತಿರುವ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗಿದೆ. ಆ ನಿರೂಪಕನ ಸುತ್ತ 6-7 ಉಗ್ರರು ನಿಂತಿದ್ದನ್ನು ವಿಡಿಯೋದಲ್ಲಿ ನೋಡಬಹುದು. ‘ತಾಲಿಬಾನಿಗಳಿಗೆ ಹೆದರಬೇಡಿ ಎಂದು ನಿಮ್ಮ ಸುದ್ದಿ ವಾಹಿನಿ ಮೂಲಕ ಹೇಳು..ಇಸ್ಲಾಮಿಕ್ ಆಡಳಿತಕ್ಕೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳು, ತಾಲಿಬಾನಿಗಳನ್ನು ಹೊಗಳು’ಎಂದು ನಿರೂಪಕನಿಗೆ ಗನ್​ ತೋರಿಸಿ, ಬಲವಂತವಾಗಿ ಹೇಳಿಸಿದ್ದಾರೆ.

ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಅವರು ನಾವು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಕೆಲವು ಮಾಧ್ಯಮಗಳು ತಾಲಿಬಾನಿಗಳ ಆಡಳಿತ ಶುರುವಾಗುತ್ತಿದ್ದಂತೆ ತಮ್ಮಲ್ಲಿರುವ ಮಹಿಳಾ ಉದ್ಯೋಗಿಗಳನ್ನೆಲ್ಲ ಕೆಲಸದಿಂದ ತೆಗೆದುಹಾಕಿದ್ದಾರೆ. ಕೆಲವೇ ದಿನಗಳ ಹಿಂದೆ, ಕಾಬೂಲ್​​ನಲ್ಲಿ ವರದಿ ಮಾಡುತ್ತಿದ್ದ ಟೋಲೋ ನ್ಯೂಸ್​ ವರದಿಗಾರ ಮತ್ತು ಕ್ಯಾಮರಾಮನ್​​ಗೆ ಉಗ್ರರು ಥಳಿಸಿದ್ದರು. ಕಾಬೂಲ್​ನ್ನು ವಶಪಡಿಸಿಕೊಂಡಾಗಿನಿಂದಲೂ ಅಲ್ಲಿನ ಪತ್ರಕರ್ತರ ಮನೆಗಳನ್ನು ತಾಲಿಬಾನಿಗಳು ಹುಡುಕುತ್ತಿದ್ದಾರೆ. DW ಎಂಬ ನ್ಯೂಸ್​ ಚಾನಲ್​ನಲ್ಲಿ ಕೆಲಸ ಮಾಡುತ್ತಿದ್ದ ವರದಿಗಾರನೊಬ್ಬನನ್ನು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: Viral News: ಪ್ರತಿ ಶುಕ್ರವಾರ ಮೀನು ಮತ್ತು ಚಿಪ್ಸ್ ಸೇವನೆಯಿಂದ ಇವರು ದೀರ್ಘಾಯುಷ್ಯ ಪಡೆದರಂತೆ!

ಅತಿ ಹೆಚ್ಚು ಸರ್ಜರಿಗಳನ್ನು ಯಶಸ್ವಿಯಾಗಿ ನೆರವೇರಿಸಿದ ಕಿಮ್ಸ್​​; ಕರ್ನಾಟಕದಲ್ಲಿಯೇ ಅಗ್ರಸ್ಥಾನವನ್ನು ಪಡೆಯುವಲ್ಲಿ ಸಫಲ

Published On - 10:06 am, Mon, 30 August 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ