AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್​ನಿಂದ ಒಂದೇ ದಿನದಲ್ಲಿ 21,600 ಜನರನ್ನು ಸ್ಥಳಾಂತರಿಸಿದ ಅಮೆರಿಕ

ಆಗಸ್ಟ್​ 14ರಿಂದ ಈವರೆಗೆ ಒಟ್ಟು 63,900 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಅಮೆರಿಕ ಶ್ವೇತ ಭವನದ ಅಧಿಕಾರಿಗಳು ಹೇಳಿದ್ದಾರೆ.

ಕಾಬೂಲ್​ನಿಂದ ಒಂದೇ ದಿನದಲ್ಲಿ 21,600 ಜನರನ್ನು ಸ್ಥಳಾಂತರಿಸಿದ ಅಮೆರಿಕ
ಕಾಬೂಲ್ ವಿಮಾನ ನಿಲ್ದಾಣದಿಂದ ಅಮೆರಿಕ ಮಿಲಿಟರಿ ವಿಮಾನಗಳಲ್ಲಿ ಜನರನ್ನು ಕರೆದೊಯ್ಯಲಾಯಿತು.
TV9 Web
| Edited By: |

Updated on: Aug 24, 2021 | 7:36 PM

Share

ವಾಷಿಂಗ್​ಟನ್: ಕಾಬೂಲ್ ವಿಮಾನ ನಿಲ್ದಾಣದಿಂದ ಸೋಮವಾರ ಒಂದೇ ದಿನ 12,700 ಜನರನ್ನು ಅಮೆರಿಕ ಏರ್​ಲಿಫ್ಟ್ ಮಾಡಿದೆ. 37 ಮಿಲಿಟರಿ ವಿಮಾನಗಳು ಕಾರ್ಯಾಚರಣೆ ನಡೆಸಿವೆ. ಅಮೆರಿಕ ಮಿತ್ರಪಡೆಗಳು 57 ವಿಮಾನಗಳ ಮೂಲಕ 8,900 ಮಂದಿಯನ್ನು ಸ್ಥಳಾಂತರಿಸಿದೆ. ಆಗಸ್ಟ್​ 14ರಿಂದ ಈವರೆಗೆ ಒಟ್ಟು 63,900 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಅಮೆರಿಕ ಶ್ವೇತ ಭವನದ ಅಧಿಕಾರಿಗಳು ಹೇಳಿದ್ದಾರೆ. ಕಾಬೂಲ್​ನಿಂದ ಮಂಗಳವಾರ 6,273 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಕಾಬೂಲ್​ನಲ್ಲಿರುವ ಅಮೆರಿಕ ವಕ್ತಾರರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಮಹಿಳಾ ಹಕ್ಕು ಹೋರಾಟಗಾರ್ತಿ ಝಾರಿಫಾ ಘಫಾರಿ ತಮ್ಮ ಕುಟುಂಬದೊಂದಿಗೆ ಜರ್ಮನಿಗೆ ಪಲಾಯನ ಮಾಡಿದ್ದು, ಅಲ್ಲಿಯೇ ಅಶ್ರಯ ಪಡೆದಿದ್ದಾರೆ.

ಸ್ಥಳಾಂತರ ಬೇಡ: ತಾಲಿಬಾನ್ ಅಫ್ಘಾನಿಸ್ತಾನ ನಿವಾಸಿಗಳ ಸ್ಥಳಾಂತರಕ್ಕೆ ಅಮೆರಿಕ ಪ್ರೋತ್ಸಾಹಿಸಬಾರದು ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ. ಪಂಜ್​ಶಿರ್ ಪ್ರದೇಶದ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ತಾಲಿಬಾನ್ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಪಂಜ್​ಶಿರ್​ ಪ್ರಾಂತ್ಯದಲ್ಲಿ ಮುಂದುವರಿದ ಹೋರಾಟ ಅಫ್ಘಾನಿಸ್ತಾನದ ಪಂಜ್‌ಶಿರ್​ ಪ್ರಾಂತ್ಯದಲ್ಲಿ ತಾಲಿಬಾನ್ ಮತ್ತು ನಾರ್ದರ್ನ್ ಅಲಯನ್ಸ್​ ಮೈತ್ರಿಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ನೆರೆಯ ತಜಕಿಸ್ತಾನದಿಂದ ಹೆಲಿಕಾಪ್ಟರ್​ಗಳಲ್ಲಿ ಹೋರಾಟಗಾರರು ಪಂಜ್​ಶಿರ್​ಗೆ ಬಂದಿದ್ದಾರೆ. ತಾಲಿಬಾನ್​ ಉಗ್ರರು ಮತ್ತಷ್ಟು ಪಡೆಗಳನ್ನು ರವಾನಿಸಿದ್ದು ಹೋರಾಟ ತೀವ್ರವಾಗುತ್ತಿದೆ.

(America Evacuates 21600 people from Kabul helps coalition to evacuate their citizens)

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಹಂಗಾಮಿ ಸರ್ಕಾರ ರಚಿಸಿದ ತಾಲಿಬಾನ್: ಆಹಾರ ಧಾನ್ಯದ ಬೆಲೆ ಏರಿಕೆ

ಇದನ್ನೂ ಓದಿ: ತಾಲಿಬಾನ್​ ವಿರುದ್ಧ ಸೆಟೆದು ನಿಲ್ಲಲು ಹೆಲಿಕಾಪ್ಟರ್​ ಸಮೇತ ಮರಳಿ ಬಂದ ಯೋಧರು; ಪಂಜ್​ಶೀರ್​ ಪ್ರಾಂತ್ಯಕ್ಕೆ ಆಗಮನ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್