AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್​ನಿಂದ ಒಂದೇ ದಿನದಲ್ಲಿ 21,600 ಜನರನ್ನು ಸ್ಥಳಾಂತರಿಸಿದ ಅಮೆರಿಕ

ಆಗಸ್ಟ್​ 14ರಿಂದ ಈವರೆಗೆ ಒಟ್ಟು 63,900 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಅಮೆರಿಕ ಶ್ವೇತ ಭವನದ ಅಧಿಕಾರಿಗಳು ಹೇಳಿದ್ದಾರೆ.

ಕಾಬೂಲ್​ನಿಂದ ಒಂದೇ ದಿನದಲ್ಲಿ 21,600 ಜನರನ್ನು ಸ್ಥಳಾಂತರಿಸಿದ ಅಮೆರಿಕ
ಕಾಬೂಲ್ ವಿಮಾನ ನಿಲ್ದಾಣದಿಂದ ಅಮೆರಿಕ ಮಿಲಿಟರಿ ವಿಮಾನಗಳಲ್ಲಿ ಜನರನ್ನು ಕರೆದೊಯ್ಯಲಾಯಿತು.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Aug 24, 2021 | 7:36 PM

Share

ವಾಷಿಂಗ್​ಟನ್: ಕಾಬೂಲ್ ವಿಮಾನ ನಿಲ್ದಾಣದಿಂದ ಸೋಮವಾರ ಒಂದೇ ದಿನ 12,700 ಜನರನ್ನು ಅಮೆರಿಕ ಏರ್​ಲಿಫ್ಟ್ ಮಾಡಿದೆ. 37 ಮಿಲಿಟರಿ ವಿಮಾನಗಳು ಕಾರ್ಯಾಚರಣೆ ನಡೆಸಿವೆ. ಅಮೆರಿಕ ಮಿತ್ರಪಡೆಗಳು 57 ವಿಮಾನಗಳ ಮೂಲಕ 8,900 ಮಂದಿಯನ್ನು ಸ್ಥಳಾಂತರಿಸಿದೆ. ಆಗಸ್ಟ್​ 14ರಿಂದ ಈವರೆಗೆ ಒಟ್ಟು 63,900 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಅಮೆರಿಕ ಶ್ವೇತ ಭವನದ ಅಧಿಕಾರಿಗಳು ಹೇಳಿದ್ದಾರೆ. ಕಾಬೂಲ್​ನಿಂದ ಮಂಗಳವಾರ 6,273 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಕಾಬೂಲ್​ನಲ್ಲಿರುವ ಅಮೆರಿಕ ವಕ್ತಾರರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಮಹಿಳಾ ಹಕ್ಕು ಹೋರಾಟಗಾರ್ತಿ ಝಾರಿಫಾ ಘಫಾರಿ ತಮ್ಮ ಕುಟುಂಬದೊಂದಿಗೆ ಜರ್ಮನಿಗೆ ಪಲಾಯನ ಮಾಡಿದ್ದು, ಅಲ್ಲಿಯೇ ಅಶ್ರಯ ಪಡೆದಿದ್ದಾರೆ.

ಸ್ಥಳಾಂತರ ಬೇಡ: ತಾಲಿಬಾನ್ ಅಫ್ಘಾನಿಸ್ತಾನ ನಿವಾಸಿಗಳ ಸ್ಥಳಾಂತರಕ್ಕೆ ಅಮೆರಿಕ ಪ್ರೋತ್ಸಾಹಿಸಬಾರದು ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ. ಪಂಜ್​ಶಿರ್ ಪ್ರದೇಶದ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ತಾಲಿಬಾನ್ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಪಂಜ್​ಶಿರ್​ ಪ್ರಾಂತ್ಯದಲ್ಲಿ ಮುಂದುವರಿದ ಹೋರಾಟ ಅಫ್ಘಾನಿಸ್ತಾನದ ಪಂಜ್‌ಶಿರ್​ ಪ್ರಾಂತ್ಯದಲ್ಲಿ ತಾಲಿಬಾನ್ ಮತ್ತು ನಾರ್ದರ್ನ್ ಅಲಯನ್ಸ್​ ಮೈತ್ರಿಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ನೆರೆಯ ತಜಕಿಸ್ತಾನದಿಂದ ಹೆಲಿಕಾಪ್ಟರ್​ಗಳಲ್ಲಿ ಹೋರಾಟಗಾರರು ಪಂಜ್​ಶಿರ್​ಗೆ ಬಂದಿದ್ದಾರೆ. ತಾಲಿಬಾನ್​ ಉಗ್ರರು ಮತ್ತಷ್ಟು ಪಡೆಗಳನ್ನು ರವಾನಿಸಿದ್ದು ಹೋರಾಟ ತೀವ್ರವಾಗುತ್ತಿದೆ.

(America Evacuates 21600 people from Kabul helps coalition to evacuate their citizens)

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಹಂಗಾಮಿ ಸರ್ಕಾರ ರಚಿಸಿದ ತಾಲಿಬಾನ್: ಆಹಾರ ಧಾನ್ಯದ ಬೆಲೆ ಏರಿಕೆ

ಇದನ್ನೂ ಓದಿ: ತಾಲಿಬಾನ್​ ವಿರುದ್ಧ ಸೆಟೆದು ನಿಲ್ಲಲು ಹೆಲಿಕಾಪ್ಟರ್​ ಸಮೇತ ಮರಳಿ ಬಂದ ಯೋಧರು; ಪಂಜ್​ಶೀರ್​ ಪ್ರಾಂತ್ಯಕ್ಕೆ ಆಗಮನ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ