AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್​ನಿಂದ ಒಂದೇ ದಿನದಲ್ಲಿ 21,600 ಜನರನ್ನು ಸ್ಥಳಾಂತರಿಸಿದ ಅಮೆರಿಕ

ಆಗಸ್ಟ್​ 14ರಿಂದ ಈವರೆಗೆ ಒಟ್ಟು 63,900 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಅಮೆರಿಕ ಶ್ವೇತ ಭವನದ ಅಧಿಕಾರಿಗಳು ಹೇಳಿದ್ದಾರೆ.

ಕಾಬೂಲ್​ನಿಂದ ಒಂದೇ ದಿನದಲ್ಲಿ 21,600 ಜನರನ್ನು ಸ್ಥಳಾಂತರಿಸಿದ ಅಮೆರಿಕ
ಕಾಬೂಲ್ ವಿಮಾನ ನಿಲ್ದಾಣದಿಂದ ಅಮೆರಿಕ ಮಿಲಿಟರಿ ವಿಮಾನಗಳಲ್ಲಿ ಜನರನ್ನು ಕರೆದೊಯ್ಯಲಾಯಿತು.
TV9 Web
| Edited By: |

Updated on: Aug 24, 2021 | 7:36 PM

Share

ವಾಷಿಂಗ್​ಟನ್: ಕಾಬೂಲ್ ವಿಮಾನ ನಿಲ್ದಾಣದಿಂದ ಸೋಮವಾರ ಒಂದೇ ದಿನ 12,700 ಜನರನ್ನು ಅಮೆರಿಕ ಏರ್​ಲಿಫ್ಟ್ ಮಾಡಿದೆ. 37 ಮಿಲಿಟರಿ ವಿಮಾನಗಳು ಕಾರ್ಯಾಚರಣೆ ನಡೆಸಿವೆ. ಅಮೆರಿಕ ಮಿತ್ರಪಡೆಗಳು 57 ವಿಮಾನಗಳ ಮೂಲಕ 8,900 ಮಂದಿಯನ್ನು ಸ್ಥಳಾಂತರಿಸಿದೆ. ಆಗಸ್ಟ್​ 14ರಿಂದ ಈವರೆಗೆ ಒಟ್ಟು 63,900 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಅಮೆರಿಕ ಶ್ವೇತ ಭವನದ ಅಧಿಕಾರಿಗಳು ಹೇಳಿದ್ದಾರೆ. ಕಾಬೂಲ್​ನಿಂದ ಮಂಗಳವಾರ 6,273 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಕಾಬೂಲ್​ನಲ್ಲಿರುವ ಅಮೆರಿಕ ವಕ್ತಾರರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಮಹಿಳಾ ಹಕ್ಕು ಹೋರಾಟಗಾರ್ತಿ ಝಾರಿಫಾ ಘಫಾರಿ ತಮ್ಮ ಕುಟುಂಬದೊಂದಿಗೆ ಜರ್ಮನಿಗೆ ಪಲಾಯನ ಮಾಡಿದ್ದು, ಅಲ್ಲಿಯೇ ಅಶ್ರಯ ಪಡೆದಿದ್ದಾರೆ.

ಸ್ಥಳಾಂತರ ಬೇಡ: ತಾಲಿಬಾನ್ ಅಫ್ಘಾನಿಸ್ತಾನ ನಿವಾಸಿಗಳ ಸ್ಥಳಾಂತರಕ್ಕೆ ಅಮೆರಿಕ ಪ್ರೋತ್ಸಾಹಿಸಬಾರದು ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ. ಪಂಜ್​ಶಿರ್ ಪ್ರದೇಶದ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ತಾಲಿಬಾನ್ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಪಂಜ್​ಶಿರ್​ ಪ್ರಾಂತ್ಯದಲ್ಲಿ ಮುಂದುವರಿದ ಹೋರಾಟ ಅಫ್ಘಾನಿಸ್ತಾನದ ಪಂಜ್‌ಶಿರ್​ ಪ್ರಾಂತ್ಯದಲ್ಲಿ ತಾಲಿಬಾನ್ ಮತ್ತು ನಾರ್ದರ್ನ್ ಅಲಯನ್ಸ್​ ಮೈತ್ರಿಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ನೆರೆಯ ತಜಕಿಸ್ತಾನದಿಂದ ಹೆಲಿಕಾಪ್ಟರ್​ಗಳಲ್ಲಿ ಹೋರಾಟಗಾರರು ಪಂಜ್​ಶಿರ್​ಗೆ ಬಂದಿದ್ದಾರೆ. ತಾಲಿಬಾನ್​ ಉಗ್ರರು ಮತ್ತಷ್ಟು ಪಡೆಗಳನ್ನು ರವಾನಿಸಿದ್ದು ಹೋರಾಟ ತೀವ್ರವಾಗುತ್ತಿದೆ.

(America Evacuates 21600 people from Kabul helps coalition to evacuate their citizens)

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಹಂಗಾಮಿ ಸರ್ಕಾರ ರಚಿಸಿದ ತಾಲಿಬಾನ್: ಆಹಾರ ಧಾನ್ಯದ ಬೆಲೆ ಏರಿಕೆ

ಇದನ್ನೂ ಓದಿ: ತಾಲಿಬಾನ್​ ವಿರುದ್ಧ ಸೆಟೆದು ನಿಲ್ಲಲು ಹೆಲಿಕಾಪ್ಟರ್​ ಸಮೇತ ಮರಳಿ ಬಂದ ಯೋಧರು; ಪಂಜ್​ಶೀರ್​ ಪ್ರಾಂತ್ಯಕ್ಕೆ ಆಗಮನ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು