AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabul Blast: ಕಾಬೂಲ್ ವಿಮಾನ ನಿಲ್ದಾಣದಲ್ಲಿ 3ನೇ ಬಾಂಬ್ ಸ್ಫೋಟ, ಅಮೆರಿಕ ಯೋಧರ ಸಾವಿನ ಶಂಕೆ

ಅಫ್ಘಾನಿಸ್ತಾನದ ಕಾಬೂಲ್​​ನಲ್ಲಿ ಸರಣಿ ಸ್ಫೋಟ ಪ್ರಕರಣದಲ್ಲಿ ಸುಮಾರು 120 ಜನರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

Kabul Blast: ಕಾಬೂಲ್ ವಿಮಾನ ನಿಲ್ದಾಣದಲ್ಲಿ 3ನೇ ಬಾಂಬ್ ಸ್ಫೋಟ, ಅಮೆರಿಕ ಯೋಧರ ಸಾವಿನ ಶಂಕೆ
ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸ್ಫೋಟದ ನಂತರ ಎದ್ದಿರುವ ದಟ್ಟ ಹೊಗೆ
TV9 Web
| Edited By: |

Updated on: Aug 26, 2021 | 10:59 PM

Share

ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ನಲ್ಲಿ ಎರಡು ಆತ್ಮಾಹುತಿ ಬಾಂಬ್​ಗಳು ಸ್ಫೋಟಿಸಿದ ನಂತರ ಫ್ರಾನ್ಸ್​ ಪ್ರಜೆಯೊಬ್ಬರು ವಿಮಾನ ನಿಲ್ದಾಣದಿಂದ ದೂರ ಸರಿಯುವಂತೆ ಜನರನ್ನು ಎಚ್ಚರಿಸುತ್ತಿದ್ದರು. ಈ ವೇಳೆಯೇ ಅಲ್ಲಿ ಮತ್ತೊಂದು ಬಾಂಬ್ ಸ್ಫೋಟಿಸಿದ್ದು, ಜನರು ಭಯಭೀತರಾದರು. ವಿಮಾನ ನಿಲ್ದಾಣದಲ್ಲಿ ಮತ್ತೊಂದು ಬಾಂಬ್ ಸ್ಫೋಟಿಸುವ ಸಾಧ್ಯತೆಯಿದೆ. ಎಲ್ಲರೂ ವಿಮಾನ ನಿಲ್ದಾಣದ ಗೇಟ್​ಗಳಿಂದ ದೂರ ಸರಿಯಿರಿ ಎಂದು ಫ್ರಾನ್ಸ್​ ಪ್ರಜೆ ಜನರಿಗೆ ಎಚ್ಚರಿಕೆ ನೀಡುತ್ತಿದ್ದ. ಈ ಎಚ್ಚರಿಕೆಯ ನಡುವೆಯೇ ಮತ್ತೊಂದು ಬಾಂಬ್ ಸ್ಫೋಟಿಸಿತು.

ಕಾಬೂಲ್​​ನಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ ಅಮೆರಿಕದ ನಾಲ್ವರು ಯೋಧರು ಮೃತಪಟ್ಟಿರುವ ಬಗ್ಗೆ ಅಮೆರಿಕದ ರಕ್ಷಣಾ ಕಾರ್ಯಾಲಯ ಪೆಂಟಗನ್ ಮಾಹಿತಿ ನೀಡಿದೆ ಎಂದು ಕೆಲ ಮಾಧ್ಯಮಗಳು ಹೇಳಿಕೊಂಡಿವೆ. ಅಫ್ಘಾನಿಸ್ತಾನದ ಕಾಬೂಲ್​​ನಲ್ಲಿ ಸರಣಿ ಸ್ಫೋಟ ಪ್ರಕರಣದಲ್ಲಿ ಸುಮಾರು 120 ಜನರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣವನ್ನು ಅಮೆರಿಕ ಸೇನೆ ತನ್ನ ವಶಕ್ಕೆ ಪಡೆದುಕೊಂಡಿದೆ. ರಾಜಧಾನಿ ಕಾಬೂಲ್​ನಲ್ಲಿ ತಾಲಿಬಾನ್ ಆಡಳಿತ ಕರ್ಫ್ಯೂ ಹೇರಿದೆ.

ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ಪ್ರಮುಖ ನ್ಯಾಟೊ ದೇಶಗಳು ಉನ್ನತ ಮಟ್ಟದ ಸಭೆಗಳನ್ನು ನಡೆಸಿ ಅಫ್ಘಾನಿಸ್ತಾನದ ಭದ್ರತಾ ಸ್ಥಿತಿಗತಿ ಪರಿಶೀಲಿಸಿದರು. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್​, ಫ್ರಾನ್ಸ್​ ಅಧ್ಯಕ್ಷ ಇಮ್ಯಾನುಯೆಲ್​ ಮಕ್ರಾನ್, ತುರ್ತು ಸಭೆ ಕರೆದ ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ತಮ್ಮ ಇತರ ಕಾರ್ಯಕ್ರಮಗಳನ್ನು ರದ್ದುಪಡಿಸಿ ಉನ್ನತ ಮಟ್ಟದ ಸಭೆಗಳನ್ನು ನಡೆಸಿದರು.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ಎರಡು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 13 ಜನರು ಸಾವನ್ನಪ್ಪಿ, 15 ಜನರು ಗಾಯಗೊಂಡಿದ್ದಾರೆ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕದ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ.

(American Soldiers Suspected Death in Kabul Airport Blast)

ಇದನ್ನೂ ಓದಿ: Wall Street: ಕಾಬೂಲ್ ಸ್ಫೋಟಕ್ಕೆ ಕಂಪಿಸಿದ ಅಮೆರಿಕ ಷೇರುಪೇಟೆ; ಡೊ ಜೋನ್ಸ್ ಕುಸಿತ

ಇದನ್ನೂ ಓದಿ: Kabul Blast: 2 ಆತ್ಮಾಹುತಿ ದಾಳಿಯಲ್ಲಿ 13 ಸಾವು, 15 ಮಂದಿ ಗಾಯಗೊಂಡಿದ್ದಾರೆ ಎಂದ ರಷ್ಯಾ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ