AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ವರ್ಷಗಳ ಹಿಂದೆ ಬಂಧಿಸಿದ್ದ ಉಗ್ರನೊಂದಿಗೆ ಇಂದು ಅಮೆರಿಕದ ಗುಪ್ತಚರ ಸಂಸ್ಥೆಯ ಮುಖ್ಯಸ್ಥನ ಮಾತುಕತೆ

ಈಗ ಅಫ್ಘಾನಿಸ್ತಾನದ ಆಡಳಿತ ಚುಕ್ಕಾಣಿ ಹಿಡಿದಿರುವ ಬಾರದಾರ್​ನನ್ನು ಸಿಐಎ 11 ವರ್ಷಗಳ ಹಿಂದೆ ಬಂಧಿಸಿ, ಸುಮಾರು 8 ವರ್ಷಗಳವರೆಗೆ ಜೈಲಿನಲ್ಲಿಟ್ಟಿತ್ತು.

11 ವರ್ಷಗಳ ಹಿಂದೆ ಬಂಧಿಸಿದ್ದ ಉಗ್ರನೊಂದಿಗೆ ಇಂದು ಅಮೆರಿಕದ ಗುಪ್ತಚರ ಸಂಸ್ಥೆಯ ಮುಖ್ಯಸ್ಥನ ಮಾತುಕತೆ
ತಾಲಿಬಾನ್ ಆಡಳಿತದ ಮುಖ್ಯಸ್ಥ ಅಬ್ದುಲ್ ಘನಿ ಬಾರದಾರ್ ಮತ್ತು ಸಿಐಎ ಮುಖ್ಯಸ್ಥ ವಿಲಿಯಮ್ಸ್​ ಬರ್ನ್ಸ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 24, 2021 | 6:52 PM

ಅಮೆರಿಕದ ಪ್ರತಿಷ್ಠಿತ ಗುಪ್ತಚರ ಸಂಸ್ಥೆ ಸಿಐಎ (Central Intelligence Agency – CIA) ನಿರ್ದೇಶಕ ವಿಲಿಯಮ್ ಜೆ.ಬರ್ನ್ಸ್​ ಸೋಮವಾರ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ತಾಲಿಬಾನ್ ನಾಯಕ ಅಬ್ದುಲ್ ಘನಿ ಬಾರದಾರ್​ನನ್ನು ಭೇಟಿಯಾಗಿದ್ದಾರೆ. ಕಾಬೂಲ್ ಗೆದ್ದ ನಂತರ ಜೋ ಬೈಡೆನ್ ಆಡಳಿತದ ಅತ್ಯುನ್ನತ ಹಂತದ ಅಧಿಕಾರಿಯೊಂದಿಗೆ ತಾಲಿಬಾನ್ ನಡೆಸಿದ ಮೊದಲ ಮಾತುಕತೆಯಿದು. ಈ ವೇಳೆ ಅತಿಸೂಕ್ಷ್ಮ ರಾಜತಾಂತ್ರಿಕ ವಿಷಯಗಳು ಚರ್ಚೆಯಾಗಿವೆ ಎಂದು ಹೆಸರು ಹೇಳಲು ಇಚ್ಛಿಸದ ಅಮೆರಿಕ ಸರ್ಕಾರದ ಉನ್ನತ ಅಧಿಕಾರಿಗಳನ್ನು ಉಲ್ಲೇಖಿಸಿ ವಾಷಿಂಗ್​ಟನ್ ಪೋಸ್ಟ್​ ವರದಿ ಮಾಡಿದೆ.

ಸಿಐಎ 11 ವರ್ಷಗಳ ಹಿಂದೆ ಇದೇ ಬಾರದಾರ್​ನನ್ನು ಬಂಧಿಸಿ, ಸುಮಾರು 8 ವರ್ಷಗಳವರೆಗೆ ಜೈಲಿನಲ್ಲಿಟ್ಟಿತ್ತು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಸಿಐಎ ಮುಖ್ಯಸ್ಥನೇ ಮಾತುಕತೆಗೆಂದು ಅಫ್ಘಾನಿಸ್ತಾನಕ್ಕೆ ಹೋಗಬೇಕಾಗಿದೆ. ತಾಲಿಬಾನಿಗಳ ವಲಯದಲ್ಲಿ ಈ ಬೆಳವಣಿಗೆಯನ್ನು ಮತ್ತೊಂದು ಆಯಾಮದಿಂದ ವಿಶ್ಲೇಷಿಸಲಾಗುತ್ತಿದೆ.

ಕಾಬೂಲ್​ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕನ್ನರನ್ನು ಏರ್​ಲಿಫ್ಟ್ ಮಾಡುವುದು ಇತಿಹಾಸ ಕಂಡ ಅತ್ಯಂತ ಕಷ್ಟದ ಕಾರ್ಯಾಚರಣೆ ಎಂದು ಜೋ ಬೈಡೆನ್ ಈ ಹಿಂದೆ ಹೇಳಿದ್ದರು. ಇದಕ್ಕಾಗಿಯೇ ತಮ್ಮ ಸಂಪುಟದಲ್ಲಿರುವ ಅತ್ಯಂತ ಪ್ರಭಾವಿ ಮತ್ತು ಅಮೆರಿಕ ವಿದೇಶಾಂಗ ಸೇವೆಯ ಹಿರಿಯ ರಾಜತಾಂತ್ರಿಕ ನಿಪುಣನನ್ನು ಈ ಕೆಲಸಕ್ಕೆ ನಿಯೋಜಿಸಿದ್ದಾರೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಲು ಸಿಐಎ ನಿರಾಕರಿಸಿದೆ. ಆದರೆ ಆಗಸ್ಟ್​ 31ರ ಒಳಗೆ ಅಮೆರಿಕ ಮತ್ತು ಮಿತ್ರಪಡೆಗಳ ನಾಗರಿಕರ ಸ್ಥಳಾಂತರ ಪೂರ್ಣಗೊಳಿಸಬೇಕಾಗಿರುವುದರಿಂದ ತಾಲಿಬಾನ್ ನಾಯಕತ್ವದೊಂದಿಗೆ ಬರ್ನ್ಸ್​ ಇದೇ ವಿಚಾರ ಚರ್ಚಿಸಿರಬಹುದು ಎಂದು ಹೇಳಲಾಗಿದೆ.

ತಾಲಿಬಾನ್ ತೆಕ್ಕೆಗೆ ಕಾಬೂಲ್ ಸಿಕ್ಕ ನಂತರ ಸಾವಿರಾರು ಜನರು ದೇಶದಿಂದ ಹೊರಗೆ ಹೋಗಲು ಹಾತೊರೆಯುತ್ತಿದ್ದಾರೆ. ಆಗಸ್ಟ್​ 31ರ ಒಳಗೆ ಅವರನ್ನು ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದು ಅಮೆರಿಕಕ್ಕೆ ಈಗಾಗಲೇ ಹಲವು ಮಿತ್ರರಾಷ್ಟ್ರಗಳು ಸ್ಪಷ್ಟಪಡಿಸಿವೆ. ಆಗಸ್ಟ್​ 31ರ ನಂತರವೂ ಅಮೆರಿಕ ಸೇನೆಯು ಅಫ್ಘಾನಿಸ್ತಾನದಲ್ಲಿ ಇರಬೇಕಾದ ಪರಿಸ್ಥಿತಿ ಬಂದಿದೆ. ಈ ವಿಚಾರವನ್ನು ತಾಲಿಬಾನ್ ಆಡಳಿತಕ್ಕೆ ಮನವರಿಕೆ ಮಾಡಿಕೊಡಲು ಬರ್ನ್ಸ್​ ಯತ್ನಿಸಿದರು ಎನ್ನಲಾಗಿದೆ.

ತಮ್ಮ ನಾಗರಿಕರ ಸ್ಥಳಾಂತರಕ್ಕೆ ಮತ್ತಷ್ಟು ಸಮಯ ಬೇಕು ಎಂದು ಬ್ರಿಟನ್, ಫ್ರಾನ್ಸ್ ಮತ್ತು ಇತರ ಅಮೆರಿಕ ಮಿತ್ರರಾಷ್ಟ್ರಗಳು ಸ್ಪಷ್ಟಪಡಿಸಿವೆ. ತಾಲಿಬಾನ್ ವಕ್ತಾರನೊಬ್ಬ ಗಡುವು ಮೀರಿದರೆ ಪರಿಸ್ಥಿತಿ ಬದಲಾಗುತ್ತದೆ. ಆಗಸ್ಟ್​ 31ರ ನಂತರವೂ ಇಲ್ಲಿ ವಿದೇಶಿ ಪಡೆಗಳು ಇರುವುದನ್ನು ಸಹಿಸಲು ಆಗುವುದಿಲ್ಲ ಎಂದು ಎಚ್ಚರಿಸಿದ್ದ. ಈ ಕಾರಣದಿಂದಲೇ ಈ ಭೇಟಿಗೆ ಮಹತ್ವ ಬಂದಿದೆ.

(Americas CIA Director William Burns secret meeting in Kabul with Taliban leader Abdul Ghani Baradar)

ಇದನ್ನೂ ಓದಿ: ಅಫ್ಘಾನಿಸ್ತಾನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಾತುಕತೆ

ಇದನ್ನೂ ಓದಿ: TV9 Kannada Exclusive: ಅಫ್ಘಾನಿಸ್ತಾನದಲ್ಲಿಯೂ ಕೊವಿಡ್ ಇದೆ, ನಿಮಗೆ ನೆನಪಿದೆಯೇ?

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್