AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taliban ಪೂರ್ವ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಮೇಲೆ ದಾಳಿ, 5 ಸಾವು

Afghanistan: ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಇಸ್ಲಾಮಿಕ್ ಸ್ಟೇಟ್ ಗುಂಪು ಕಳೆದ ವಾರ ಜಲಾಲಾಬಾದ್‌ನಲ್ಲಿ ಎಂಟು ಜನರ ಸಾವಿಗೆ ಇದೇ ರೀತಿಯ ದಾಳಿಯ ಹೊಣೆ ಹೊತ್ತಿದ್ದರೂ ಬುಧವಾರದ ದಾಳಿಗೆ ಯಾರೂ ತಕ್ಷಣದ ಹೊಣೆ ಹೊತ್ತಿಲ್ಲ.

Taliban ಪೂರ್ವ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಮೇಲೆ ದಾಳಿ, 5 ಸಾವು
ತಾಲಿಬಾನ್ ಹೋರಾಟಗಾರರು
TV9 Web
| Edited By: |

Updated on: Sep 22, 2021 | 5:37 PM

Share

ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ (Eastern Afghanistan)ಬುಧವಾರ ತಾಲಿಬಾನ್ (Taliban) ವಾಹನಗಳ ಮೇಲೆ ದಾಳಿಕೋರರು ದಾಳಿ ನಡೆಸಿದ್ದಾರೆ. ಆಗಸ್ಟ್ ಮಧ್ಯದಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರ ನಡೆದ ಇತ್ತೀಚಿನ ಹಿಂಸಾಚಾರದಲ್ಲಿ ಕನಿಷ್ಠ ಇಬ್ಬರು ಹೋರಾಟಗಾರರು ಮತ್ತು ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಒಂದು ದಾಳಿಯಲ್ಲಿ ಪ್ರಾಂತ್ಯ ರಾಜಧಾನಿ ಜಲಾಲಾಬಾದ್‌ನ ಸ್ಥಳೀಯ ಗ್ಯಾಸ್ ಸ್ಟೇಶನ್‌ನಲ್ಲಿ ಬಂದೂಕುಧಾರಿಗಳು ತಾಲಿಬಾನ್ ವಾಹನದ ಮೇಲೆ ಗುಂಡು ಹಾರಿಸಿದರು. ಇಬ್ಬರು ಹೋರಾಟಗಾರರು ಮತ್ತು ಗ್ಯಾಸ್ ಸ್ಟೇಷನ್ ಅಟೆಂಡೆಂಟ್ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಒಂದು ಮಗು ಕೂಡ ಹತ್ಯೆಗೀಡಾಗಿದೆ ಎಂದು ಅವರು ಹೇಳಿದರು.

ಪ್ರತ್ಯೇಕ ದಾಳಿಯಲ್ಲಿ ಮತ್ತೊಂದು ಮಗು ಸಾವನ್ನಪ್ಪಿದೆ ಮತ್ತು ಇಬ್ಬರು ತಾಲಿಬಾನ್ ಗಾಯಗೊಂಡಿದ್ದಾರೆ – ಇನ್ನೊಂದು ವಾಹನದ ಮೇಲೆ ಬಾಂಬ್ ದಾಳಿ ನಡೆದಿದೆ. ಜಲಾಲಾಬಾದ್‌ನಲ್ಲಿ ತಾಲಿಬಾನ್ ವಾಹನದ ಇನ್ನೊಂದು ಬಾಂಬ್ ಸ್ಫೋಟದಿಂದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಆದರೂ ಆ ವ್ಯಕ್ತಿಯು ತಾಲಿಬಾನ್ ಅಧಿಕಾರಿಯೇ ಅಥವಾ ಅಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಸಾಕ್ಷಿಗಳು ಪ್ರತೀಕಾರದ ಭಯದಿಂದ ಹೆಸರು ಹೇಳಲು ಹಿಂಜರಿದಿದ್ದಾರೆ.

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಇಸ್ಲಾಮಿಕ್ ಸ್ಟೇಟ್ ಗುಂಪು ಕಳೆದ ವಾರ ಜಲಾಲಾಬಾದ್‌ನಲ್ಲಿ ಎಂಟು ಜನರ ಸಾವಿಗೆ ಇದೇ ರೀತಿಯ ದಾಳಿಯ ಹೊಣೆ ಹೊತ್ತಿದ್ದರೂ ಬುಧವಾರದ ದಾಳಿಗೆ ಯಾರೂ ತಕ್ಷಣದ ಹೊಣೆ ಹೊತ್ತಿಲ್ಲ.

ತಾಲಿಬಾನ್ ಮತ್ತು ಐಎಸ್ ಪರಸ್ಪರ ಶತ್ರುಗಳಾಗಿದ್ದು ಈ ದಾಳಿಗಳು ದೇಶದ ಹೊಸ ತಾಲಿಬಾನ್ ಆಡಳಿತಗಾರರು ಮತ್ತು ಅವರ ದೀರ್ಘಕಾಲದ ಪ್ರತಿಸ್ಪರ್ಧಿಗಳ ನಡುವಿನ ವ್ಯಾಪಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿದೆ. ತಾಲಿಬಾನ್‌ಗಳು ಐಎಸ್ ಉಗ್ರರನ್ನು ಎದುರಿಸುವ ಒತ್ತಡದಲ್ಲಿವೆ. ಅಫ್ಘಾನ್ ನೆಲದಿಂದ ಭಯೋತ್ಪಾದಕ ದಾಳಿಗಳನ್ನು ತಡೆಯುತ್ತೇವೆ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ನೀಡಿದ ಭರವಸೆಯ ಮೇಲೆ ಭಾಗಶಃ. ಸಂಘರ್ಷದಿಂದ ಬೇಸತ್ತ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಗ್ಗೆ ಭಯ ಮತ್ತು ತಪ್ಪುಗ್ರಹಿಕೆಯ ಹೊರತಾಗಿಯೂ ಹೊಸ ಆಡಳಿತಗಾರರು ಕನಿಷ್ಠ ಸಾರ್ವಜನಿಕ ಸುರಕ್ಷತೆಯ ಕಾರ್ಯವನ್ನು ಪುನಃಸ್ಥಾಪಿಸುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅಧಿಕಾರಕ್ಕಾಗಿ ಕಿತ್ತಾಟ; ತಾಲಿಬಾನ್ ನಾಯಕ ಮುಲ್ಲಾ ಬರದಾರ್ ಒತ್ತೆಯಾಳು, ಹೈಬತುಲ್ಲಾ ಅಖುಂಡಜಾದ ಸಾವು: ವರದಿ

( Attackers struck Taliban vehicles in an eastern Afghanistan 5 Killed)

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?