AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ನಲ್ಲಿ ಮತ್ತೆ ಸ್ಫೋಟ; ಮಿನಿ ಬಸ್​​ನಲ್ಲಿ ನಡೆದ ಅವಘಡದಲ್ಲಿ ಒಬ್ಬ ಬಲಿ, ಐವರಿಗೆ ಗಾಯ

ಅಫ್ಘಾನಿಸ್ತಾನದಲ್ಲಿ ಹಜಾರಾಗಳು ಶಿಯಾ ಮುಸ್ಲಿಮರಾಗಿದ್ದಾರೆ. ಇವರು ಅನೇಕ ವರ್ಷಗಳಿಂದಲೂ ಹಿಂಸಾಚಾರಕ್ಕೆ ಗುರಿಯಾಗಿದ್ದು, ಅವರನ್ನು ಟಾರ್ಗೆಟ್​ ಮಾಡುತ್ತಿರುವುದು ಕ್ರೂರ ಐಸಿಸ್​ ಸಂಘಟನೆ.

ಅಫ್ಘಾನ್​​ನಲ್ಲಿ ಮತ್ತೆ ಸ್ಫೋಟ; ಮಿನಿ ಬಸ್​​ನಲ್ಲಿ ನಡೆದ ಅವಘಡದಲ್ಲಿ ಒಬ್ಬ ಬಲಿ, ಐವರಿಗೆ ಗಾಯ
ಸ್ಫೋಟದಿಂದ ಉಂಟಾದ ಹೊಗೆಯ ಚಿತ್ರ
TV9 Web
| Edited By: |

Updated on: Nov 14, 2021 | 11:44 AM

Share

ಅಫ್ಘಾನಿಸ್ತಾನ(Afghanistan)ದಲ್ಲಿ ಪದೇಪದೆ ಬಾಂಬ್​ ಸ್ಫೋಟದಂಥ ದುರ್ಘಟನೆ ನಡೆಯುತ್ತಲೇ ಇದೆ. ಮೊನ್ನೆಯಷ್ಟೇ ನಂಗರ್​ಹಾರ್ ಪ್ರಾಂತ್ಯದ ಮಸೀದಿಯೊಂದರಲ್ಲಿ ಭಾರಿ ಪ್ರಮಾಣದ ಸ್ಫೋಟವುಂಟಾಗಿ, ಮೂವರು ಮೃತಪಟ್ಟಿದ್ದರು. ಇಂದು ಮತ್ತೆ ಬಾಂಬ್​ ಸ್ಫೋಟ ಉಂಟಾಗಿದೆ. ಈ ಬಾರಿ ಮಿನಿ ಬಸ್​​ನಲ್ಲಿ ಬಾಂಬ್​ ಸ್ಫೋಟಿಸಿದೆ. ಈ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಕಾಬೂಲ್​ ಸಮೀಪದ ಕಮರ್ಷಿಯಲ್​ ಸ್ಟ್ರೀಟ್​ ಬಳಿ ದುರ್ಘಟನೆ ನಡೆದಿದೆ. ಇದು ಅಫ್ಘಾನ್​​ನ ಅಲ್ಪಸಂಖ್ಯಾತರಾದ ಹಜಾರಾ ಸಮುದಾಯದ ಜನರು ಹೆಚ್ಚಾಗಿ ವಾಸಿಸುವ ಪ್ರದೇಶ. ಅದರಲ್ಲೂ ಈ ಸ್ಥಳದಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸುವ ಕಾರ್ಯಕರ್ತರು, ಬಸ್​ ಚಾಲಕರು ಹೆಚ್ಚಾಗಿ ವಾಸಿಸುತ್ತಾರೆ.  ಸ್ಫೋಟಗೊಂಡ ಬಸ್​​ನ ಚಾಲಕ ಆಸ್ಪತ್ರೆಯಲ್ಲಿದ್ದು, ಮಾಧ್ಯಮವೊಂದು ಅವರನ್ನು ಸಂಪರ್ಕಿಸಿದಾಗ ಮಾತನಾಡಿ, ನಾವು ಸ್ವಲ್ಪ ದೂರ ಹೋದಾಗ ಅನುಮಾನಾಸ್ಪದ ವ್ಯಕ್ತಿಯೊಬ್ಬ ಬಸ್​ ಹತ್ತಿದ. ಅದಾದ ಕೆಲವೇ ಹೊತ್ತಲ್ಲಿ ಸ್ಫೋಟವುಂಟಾಯಿತು ಎಂದು ಹೇಳಿದ್ದಾರೆ.  ಸ್ಫೋಟವಾಗುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಆಗ ಹಿಂದೆ ಇದ್ದ ಇಬ್ಬರು ಪ್ರಯಾಣಿಕರ ಬಟ್ಟೆಗೆ ಆ ಬೆಂಕಿ ತಗುಲಿ ಅವರು ಹಿಂದಿನ ಬಾಗಿಲಿನಿಂದ ಕೆಳಗೆ ಬಿದ್ದರು. ಅದನ್ನು ನೋಡಿ ಉಳಿದ ಪ್ರಯಾಣಿಕರು ಮುಂದಿನ ಬಾಗಿಲಿನಿಂದ ಪಾರಾದರು ಎಂದೂ ಬಸ್​ ಚಾಲಕ ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಹಜಾರಾಗಳು ಶಿಯಾ ಮುಸ್ಲಿಮರಾಗಿದ್ದಾರೆ. ಇವರು ಅನೇಕ ವರ್ಷಗಳಿಂದಲೂ ಹಿಂಸಾಚಾರಕ್ಕೆ ಗುರಿಯಾಗಿದ್ದು, ಅವರನ್ನು ಟಾರ್ಗೆಟ್​ ಮಾಡುತ್ತಿರುವುದು ಕ್ರೂರ ಐಸಿಸ್​ ಸಂಘಟನೆ. ಈಗಾಗಲೇ ಹಲವು ಮಾರಣಾಂತಿಕ ದಾಳಿಗಳನ್ನು ಶಿಯಾ ಮುಸ್ಲಿಮರ ಮೇಲೆ ನಡೆಸಿದ್ದಾರೆ.  ಮಿನಿ ಬಸ್​ ಮೇಲಿನ ದಾಳಿಯೂ ಅವರೇ ನಡೆಸಿದ್ದಾರೆಂಬ ಅನುಮಾನ ವ್ಯಕ್ತವಾಗಿದ್ದು, ಇನ್ನೂ ಅವರು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಅಂದಹಾಗೆ ಘಟನೆ ಬಗ್ಗೆ ತಾಲಿಬಾನ್​ ವಕ್ತಾರ ಜಬೀವುಲ್ಲಾ ಮುಜಾಹಿದ್​ ಕೂಡ ಪ್ರತಿಕ್ರಿಯೆ ನೀಡಿದ್ದು, ಇದರಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದನ್ನು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬೇಕಾಬಿಟ್ಟಿ ಕೆಲಸ ಮಾಡಿ ರಸ್ತೆಗುಂಡಿ ಮುಚ್ಚಿದ ಬಿಬಿಎಂಪಿ; ನಗರದ ಬಹುತೇಕ ವಾರ್ಡ್​ಗಳಲ್ಲಿ ಕಳಪೆ ಕಾಮಗಾರಿ

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ