AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​​ನಲ್ಲಿ ಮತ್ತೆ ಸ್ಫೋಟ; ಮಿನಿ ಬಸ್​​ನಲ್ಲಿ ನಡೆದ ಅವಘಡದಲ್ಲಿ ಒಬ್ಬ ಬಲಿ, ಐವರಿಗೆ ಗಾಯ

ಅಫ್ಘಾನಿಸ್ತಾನದಲ್ಲಿ ಹಜಾರಾಗಳು ಶಿಯಾ ಮುಸ್ಲಿಮರಾಗಿದ್ದಾರೆ. ಇವರು ಅನೇಕ ವರ್ಷಗಳಿಂದಲೂ ಹಿಂಸಾಚಾರಕ್ಕೆ ಗುರಿಯಾಗಿದ್ದು, ಅವರನ್ನು ಟಾರ್ಗೆಟ್​ ಮಾಡುತ್ತಿರುವುದು ಕ್ರೂರ ಐಸಿಸ್​ ಸಂಘಟನೆ.

ಅಫ್ಘಾನ್​​ನಲ್ಲಿ ಮತ್ತೆ ಸ್ಫೋಟ; ಮಿನಿ ಬಸ್​​ನಲ್ಲಿ ನಡೆದ ಅವಘಡದಲ್ಲಿ ಒಬ್ಬ ಬಲಿ, ಐವರಿಗೆ ಗಾಯ
ಸ್ಫೋಟದಿಂದ ಉಂಟಾದ ಹೊಗೆಯ ಚಿತ್ರ
TV9 Web
| Edited By: |

Updated on: Nov 14, 2021 | 11:44 AM

Share

ಅಫ್ಘಾನಿಸ್ತಾನ(Afghanistan)ದಲ್ಲಿ ಪದೇಪದೆ ಬಾಂಬ್​ ಸ್ಫೋಟದಂಥ ದುರ್ಘಟನೆ ನಡೆಯುತ್ತಲೇ ಇದೆ. ಮೊನ್ನೆಯಷ್ಟೇ ನಂಗರ್​ಹಾರ್ ಪ್ರಾಂತ್ಯದ ಮಸೀದಿಯೊಂದರಲ್ಲಿ ಭಾರಿ ಪ್ರಮಾಣದ ಸ್ಫೋಟವುಂಟಾಗಿ, ಮೂವರು ಮೃತಪಟ್ಟಿದ್ದರು. ಇಂದು ಮತ್ತೆ ಬಾಂಬ್​ ಸ್ಫೋಟ ಉಂಟಾಗಿದೆ. ಈ ಬಾರಿ ಮಿನಿ ಬಸ್​​ನಲ್ಲಿ ಬಾಂಬ್​ ಸ್ಫೋಟಿಸಿದೆ. ಈ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಕಾಬೂಲ್​ ಸಮೀಪದ ಕಮರ್ಷಿಯಲ್​ ಸ್ಟ್ರೀಟ್​ ಬಳಿ ದುರ್ಘಟನೆ ನಡೆದಿದೆ. ಇದು ಅಫ್ಘಾನ್​​ನ ಅಲ್ಪಸಂಖ್ಯಾತರಾದ ಹಜಾರಾ ಸಮುದಾಯದ ಜನರು ಹೆಚ್ಚಾಗಿ ವಾಸಿಸುವ ಪ್ರದೇಶ. ಅದರಲ್ಲೂ ಈ ಸ್ಥಳದಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸುವ ಕಾರ್ಯಕರ್ತರು, ಬಸ್​ ಚಾಲಕರು ಹೆಚ್ಚಾಗಿ ವಾಸಿಸುತ್ತಾರೆ.  ಸ್ಫೋಟಗೊಂಡ ಬಸ್​​ನ ಚಾಲಕ ಆಸ್ಪತ್ರೆಯಲ್ಲಿದ್ದು, ಮಾಧ್ಯಮವೊಂದು ಅವರನ್ನು ಸಂಪರ್ಕಿಸಿದಾಗ ಮಾತನಾಡಿ, ನಾವು ಸ್ವಲ್ಪ ದೂರ ಹೋದಾಗ ಅನುಮಾನಾಸ್ಪದ ವ್ಯಕ್ತಿಯೊಬ್ಬ ಬಸ್​ ಹತ್ತಿದ. ಅದಾದ ಕೆಲವೇ ಹೊತ್ತಲ್ಲಿ ಸ್ಫೋಟವುಂಟಾಯಿತು ಎಂದು ಹೇಳಿದ್ದಾರೆ.  ಸ್ಫೋಟವಾಗುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಆಗ ಹಿಂದೆ ಇದ್ದ ಇಬ್ಬರು ಪ್ರಯಾಣಿಕರ ಬಟ್ಟೆಗೆ ಆ ಬೆಂಕಿ ತಗುಲಿ ಅವರು ಹಿಂದಿನ ಬಾಗಿಲಿನಿಂದ ಕೆಳಗೆ ಬಿದ್ದರು. ಅದನ್ನು ನೋಡಿ ಉಳಿದ ಪ್ರಯಾಣಿಕರು ಮುಂದಿನ ಬಾಗಿಲಿನಿಂದ ಪಾರಾದರು ಎಂದೂ ಬಸ್​ ಚಾಲಕ ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಹಜಾರಾಗಳು ಶಿಯಾ ಮುಸ್ಲಿಮರಾಗಿದ್ದಾರೆ. ಇವರು ಅನೇಕ ವರ್ಷಗಳಿಂದಲೂ ಹಿಂಸಾಚಾರಕ್ಕೆ ಗುರಿಯಾಗಿದ್ದು, ಅವರನ್ನು ಟಾರ್ಗೆಟ್​ ಮಾಡುತ್ತಿರುವುದು ಕ್ರೂರ ಐಸಿಸ್​ ಸಂಘಟನೆ. ಈಗಾಗಲೇ ಹಲವು ಮಾರಣಾಂತಿಕ ದಾಳಿಗಳನ್ನು ಶಿಯಾ ಮುಸ್ಲಿಮರ ಮೇಲೆ ನಡೆಸಿದ್ದಾರೆ.  ಮಿನಿ ಬಸ್​ ಮೇಲಿನ ದಾಳಿಯೂ ಅವರೇ ನಡೆಸಿದ್ದಾರೆಂಬ ಅನುಮಾನ ವ್ಯಕ್ತವಾಗಿದ್ದು, ಇನ್ನೂ ಅವರು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಅಂದಹಾಗೆ ಘಟನೆ ಬಗ್ಗೆ ತಾಲಿಬಾನ್​ ವಕ್ತಾರ ಜಬೀವುಲ್ಲಾ ಮುಜಾಹಿದ್​ ಕೂಡ ಪ್ರತಿಕ್ರಿಯೆ ನೀಡಿದ್ದು, ಇದರಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದನ್ನು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬೇಕಾಬಿಟ್ಟಿ ಕೆಲಸ ಮಾಡಿ ರಸ್ತೆಗುಂಡಿ ಮುಚ್ಚಿದ ಬಿಬಿಎಂಪಿ; ನಗರದ ಬಹುತೇಕ ವಾರ್ಡ್​ಗಳಲ್ಲಿ ಕಳಪೆ ಕಾಮಗಾರಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್