AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ಬಳಿ ಇರುವ ಮಸೀದಿಯಲ್ಲಿ ಬಾಂಬ್​​ ಸ್ಫೋಟ; 4 ಸಾವು

ಆತ್ಮಾಹುತಿ ದಾಳಿಯಲ್ಲಿ ವ್ಯಕ್ತಿಯೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿರುವುದನ್ನು ಪ್ರತ್ಯಕ್ಷದರ್ಶಿಗಳು ನೋಡಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ಬಳಿ ಇರುವ ಮಸೀದಿಯಲ್ಲಿ ಬಾಂಬ್​​ ಸ್ಫೋಟ; 4 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 05, 2022 | 8:28 PM

Share

ಕಾಬೂಲ್: ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್​​ನಲ್ಲಿರುವ ಆಂತರಿಕ ಸಚಿವಾಲಯದ ಬಳಿ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟ (Bomb Blast) ಸಂಭವಿಸಿ ನಾಲ್ವರು ಸಾವಿಗೀಡಾಗಿದ್ದಾರೆ.  25 ಮಂದಿಗೆ ಗಾಯಗಳಾಗಿವೆ. ಆತ್ಮಾಹುತಿ ದಾಳಿಯಲ್ಲಿ ವ್ಯಕ್ತಿಯೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿರುವುದನ್ನು ಪ್ರತ್ಯಕ್ಷದರ್ಶಿಗಳು ನೋಡಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ಕಳೆದ ಆಗಸ್ಟ್‌ನಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳಿದ ನಂತರ ಅವರು ಭದ್ರತೆಯನ್ನು ಆದ್ಯತೆಯಾಗಿ ಮಾಡಿದ್ದಾರೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ದಾಳಿಗಳು ಹೆಚ್ಚಾಗುತ್ತಿರುವುದನ್ನು ಕಾಣಬಹುದು . ಕಾಬೂಲ್‌ನಲ್ಲಿ ಆಸ್ಪತ್ರೆಯನ್ನು ನಿರ್ವಹಿಸುತ್ತಿರುವ ಇಟಾಲಿಯನ್ ಸರ್ಕಾರೇತರ ಸಂಸ್ಥೆ ಎಮರ್ಜೆನ್ಸಿ, ಆಂತರಿಕ ಸಚಿವಾಲಯದ ಮಸೀದಿಯಲ್ಲಿ ಬಾಂಬ್ ದಾಳಿಯ ನಂತರ 20 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಇದರಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಒಬ್ಬ ವ್ಯಕ್ತಿಯು ಸಾಧನವನ್ನು ಸ್ಫೋಟಿಸುತ್ತಿರುವುದನ್ನು ಪ್ರತ್ಯಕ್ಷದರ್ಶಿಗಳು ನೋಡಿದ್ದಾರೆ ಎಂದು ಎಮರ್ಜೆನ್ಸಿ ಕಂಟ್ರಿ ಡೈರೆಕ್ಟರ್ ಡೆಜಾನ್ ಪ್ಯಾನಿಕ್ ಹೇಳಿದ್ದಾರೆ. ಇದು ಆತ್ಮಹತ್ಯಾ ದಾಳಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಟಾಕೋರ್ ಅವರು ಆಂತರಿಕ ಸಚಿವಾಲಯದಿಂದ ದೂರದಲ್ಲಿರುವ ಮಸೀದಿಯಲ್ಲಿ ಪ್ರವಾಸಿಗಳು ಮತ್ತು ಕೆಲವು ಉದ್ಯೋಗಿಗಳು ಪ್ರಾರ್ಥನೆ ಸಲ್ಲಿಸುವ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೇಳಿದರು. ಅವರು ಯಾವುದೇ ಅಧಿಕೃತ ಅಪಘಾತದ ಅಂಕಿಅಂಶವನ್ನು ನೀಡಲಿಲ್ಲ ಅಥವಾ ಸಚಿವಾಲಯದಿಂದ ಬಾಂಬ್ ಸ್ಫೋಟದ ನಿಖರವಾದ ದೂರವನ್ನು ನಿರ್ದಿಷ್ಟಪಡಿಸಲಿಲ್ಲ, ಆದರೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ