AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಶಿರ್​ ಹೋರಾಟ ಪಡೆಯ ವಕ್ತಾರ ಫಾಹಿಮ್​ ದಷ್ಟಿ ಸಾವು; ಮೂವರು ಪ್ರಮುಖ ನಾಯಕರನ್ನು ಕೊಂದ ತಾಲಿಬಾನ್​

Fahim Dashti: ಫಾಹಿಮ್​ ದಷ್ಟಿ ಪಂಜಶಿರ್​ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದವರು. ವಕ್ತಾರರಾಗಿದ್ದ ಅವರು, ತಮ್ಮ ಸಂಘಟನೆಯ ನಿಲುವಿನ ಬಗ್ಗೆ ಆಗಾಗ ಸಾರ್ವಜನಿಕವಾಗಿ ಮಾತನಾಡುತ್ತಿದ್ದರು.

ಪಂಜಶಿರ್​ ಹೋರಾಟ ಪಡೆಯ ವಕ್ತಾರ ಫಾಹಿಮ್​ ದಷ್ಟಿ ಸಾವು; ಮೂವರು ಪ್ರಮುಖ ನಾಯಕರನ್ನು ಕೊಂದ ತಾಲಿಬಾನ್​
ಫಾಹಿಮ್​ ದಷ್ಟಿ
TV9 Web
| Edited By: |

Updated on:Sep 06, 2021 | 10:04 AM

Share

ಪಂಜಶಿರ್ (PanjShir)​ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ, ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್ ಆಫ್​ ಅಫ್ಘಾನಿಸ್ತಾನ ಪಡೆಯ ವಕ್ತಾರ ಫಾಹಿಮ್​ ದಷ್ಟಿ (Fahim Dashti) ತಾಲಿಬಾನ್​ ಉಗ್ರರ (Taliban Terrorists) ದಾಳಿಗೆ ಬಲಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆ್ಯಂಟಿ-ತಾಲಿಬಾನ್​ ಹೋರಾಟ ಪಡೆಯ  ಫಾಹಿಮ್ ದಷ್ಟಿ ಸೇರಿ ಒಟ್ಟು ಮೂವರು ಪ್ರಮುಖ ನಾಯಕರು ಅಸುನೀಗಿದ್ದರಿಂದಲೇ ಇದೀಗ ಎನ್​ಆರ್​ಎಫ್​ಎ ಪಡೆ ಕದನ ವಿರಾಮಕ್ಕೆ ಕರೆ ನೀಡಿದೆ ಎಂದು ಹೇಳಲಾಗಿದೆ.  ಈ ಬಗ್ಗೆ National Resistance Front of Afghanistan ಸಂಘಟನೆ ಫೇಸ್​ಬುಕ್​ ಪೋಸ್ಟ್ (Facebook Post) ಹಾಕಿದ್ದು, ನಾವು ನಮ್ಮ ಇಬ್ಬರು ನೆಚ್ಚಿನ ಸಹೋದರರು, ಸಹೋದ್ಯೋಗಿಗಳನ್ನು ಕಳೆದುಕೊಂಡಿದ್ದೇವೆ. ಈ ಬಗ್ಗೆ ತುಂಬ ನೋವಾಗುತ್ತಿದೆ. ಅಮಿರ್​ ಸಾಹೇಬ್​ ಅಹ್ಮದ್​ ಮಸೂದ್​ ಅವರ ಕಚೇರಿಯ ವಕ್ತಾರನಾಗಿದ್ದ ಫಾಹಿಮ್​ ದಷ್ಟಿ ಮತ್ತು ಜನರಲ್​ ಸಾಹಿಬ್ ಅಬ್ದುಲ್​ ವಡೂದ್​ ಝೋರ್​ ಅವರು ಹುತಾತ್ಮರಾಗಿದ್ದಾರೆ ಎಂದು ಹೇಳಿದೆ.

ಅಫ್ಘಾನಿಸ್ತಾನ ಪತ್ರಕರ್ತ ಫ್ರೆಡ್ ಬೆಜಾನ್​ ಕೂಡ ಫಾಹಿಮ್​ ದಷ್ಟಿ ಸಾವಿನ ಬಗ್ಗೆ ಟ್ವೀಟ್ ಮಾಡಿದ್ದಾರೆ.  ತಾಲಿಬಾನಿಗಳ ದಾಳಿಗೆ ಪಂಜಶಿರ್​ ಹೋರಾಟ ಪಡೆಯ ವಕ್ತಾರ ಫಾಹಿಮ್​ ದಷ್ಟಿ ಸೇರಿ ಮೂವರು ಪ್ರಮುಖ ನಾಯಕರು ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಇದು ಪಂಜಶಿರ್​ ಪ್ರತಿರೋದಕ ಪಡೆಗೆ ದೊಡ್ಡ ಹೊಡೆತ ಎಂದು ಹೇಳಿದ್ದಾರೆ.

ಫಾಹಿಮ್​ ದಷ್ಟಿ ಪಂಜಶಿರ್​ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದವರು. ವಕ್ತಾರರಾಗಿದ್ದ ಅವರು, ತಮ್ಮ ಸಂಘಟನೆಯ ನಿಲುವಿನ ಬಗ್ಗೆ ಆಗಾಗ ಸಾರ್ವಜನಿಕವಾಗಿ ಮಾತನಾಡುತ್ತಿದ್ದರು. ಕಳೆದ ತಿಂಗಳು ಮಾತನಾಡಿದಾಗ, ನಾವು ಪಂಜಶಿರ್ ಹೋರಾಟವನ್ನು ಮುಂದುವರಿಸುತ್ತೇವೆ. ಆ ಹೋರಾಟ ಪಂಜಶಿರ್​ ಪ್ರಾಂತ್ಯಕ್ಕಷ್ಟೇ ಸೀಮಿತವಲ್ಲ. ಇಡೀ ಅಫ್ಘಾನಿಸ್ತಾನಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದಿದ್ದರು. ನಿನ್ನೆ ಟ್ವೀಟ್ ಮಾಡಿದ್ದ ಫಾಹಿಮ್​ ದಷ್ಟಿ, ನಾವು ತಾಲಿಬಾನಿಗಳನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದೇವೆ. 600ಕ್ಕೂ ಹೆಚ್ಚು ಉಗ್ರರನ್ನು ಕೊಂದಿದ್ದೇವೆ. ಸುಮಾರು 100 ಉಗ್ರರು ನಮ್ಮ ಸೆರೆಯಲ್ಲಿ ಇದ್ದಾರೆ ಎಂದು ಹೇಳಿದ್ದರು.

ಸಾಲೇಹ್​ ಮೊಹಮ್ಮದ್​ ಕೂಡ ಸಾವು ! ಫಾಹಿಮ್​ ದಷ್ಟಿ ಮೃತಪಟ್ಟಿದ್ದಾಗ ನ್ಯಾಷನಲ್​ ರೆಸಿಸ್ಟೆನ್ಸ್ ಫ್ರಂಟ್ ಆಫ್​ ಅಫ್ಘಾನಿಸ್ತಾನ ಪಡೆ ಹೇಳಿದೆ. ಹಾಗೇ, ಎನ್​ಆರ್​ಎಫ್​ಎ ಪಡೆಯ ಇನ್ನೊಬ್ಬ ಮುಖ್ಯ ಕಮಾಂಡರ್​ ಸಾಲೇಹ್​ ಮೊಹಮ್ಮದ್​​ರನ್ನು ಕೂಡ ಕೊಂದಿದ್ದಾಗಿ ತಾಲಿಬಾನ್​ ಹೇಳಿಕೊಂಡಿದೆ.  ಇವರೂ ಕೂಡ ಪ್ರಮುಖ ನಾಯಕರೇ ಆಗಿದ್ದು, ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದರು. ಪ್ರಮುಖ ನಾಯಕರನ್ನೆಲ್ಲ ಕಳೆದುಕೊಂಡ ಪಂಜಶಿರ್​ ಪಡೆ ಇದೀಗ ಮಾತುಕತೆಗೆ ಮುಂದಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ನಿರಂತರ ಹೋರಾಟ, ಅಪಾರ ಸಾವು-ನೋವು: ಕದನ ವಿರಾಮಕ್ಕೆ ಕರೆ ನೀಡಿದ ಪಂಜಶಿರ್​ ಹೋರಾಟಗಾರರು

ಬೇಬಿ ಕಾರ್ನ್ ಕ್ರಿಸ್ಪಿ ಡ್ರೈ; ಮನೆಯಲ್ಲೇ ಸರಳವಾಗಿ ತಯಾರಿಸಬಹುದು

(Fahim Dashti spokesperson of Ahmad Massouds resistance front killed By Taliban)

Published On - 9:39 am, Mon, 6 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ