AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್ ನಗರದ ಮಹಿಳಾ ಉದ್ಯೋಗಿಗಳಿಗೆ ಮನೆಯಲ್ಲೇ ಇರಿ ಎಂದು ಆದೇಶಿಸಿದ ತಾಲಿಬಾನ್

Taliban: ಕಾಬೂಲ್ ಪುರಸಭೆಯ ಇಲಾಖೆಗಳಲ್ಲಿ ಮಹಿಳಾ ಉದ್ಯೋಗಿಗಳ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ ಮತ್ತು ಈ ಮಧ್ಯೆ ಅವರು ತಮ್ಮ ಸಂಬಳವನ್ನು ತೆಗೆದುಕೊಳ್ಳುತ್ತಾರೆ ಎಂದು ಮೇಯರ್ ಹೇಳಿರುವುದಾಗಿ ಅಸೋಸಿಯೇಟ್ ಪ್ರೆಸ್ ವರದಿ ಮಾಡಿದೆ.

ಕಾಬೂಲ್ ನಗರದ ಮಹಿಳಾ ಉದ್ಯೋಗಿಗಳಿಗೆ ಮನೆಯಲ್ಲೇ ಇರಿ ಎಂದು ಆದೇಶಿಸಿದ ತಾಲಿಬಾನ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 19, 2021 | 6:13 PM

Share

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿಯ ಹಂಗಾಮಿ ಮೇಯರ್ ಹೇಳುವಂತೆ ಅನೇಕ ಮಹಿಳಾ ನಗರ ಉದ್ಯೋಗಿಗಳಿಗೆ ದೇಶದ ಹೊಸ ತಾಲಿಬಾನ್ ಆಡಳಿತಗಾರರು ಮನೆಯಲ್ಲೇ ಇರುವಂತೆ ಆದೇಶಿಸಲಾಗಿದೆ. ಪುರುಷರಿಂದ ಮಾಡಲು ಸಾಧ್ಯವಾಗದೇ ಇರುವ ಅಥವಾ ಮಹಿಳೆಯರಿಂದ ಮಾತ್ರ ಸಾಧ್ಯ ಎಂದು ಹೇಳುವ ಕೆಲಸಕ್ಕೆ ಮಾತ್ರ ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಹಮ್ದುಲ್ಲಾ ನಮೋನಿ (Hamdullah Namony) ಭಾನುವಾರ ಸುದ್ದಿಗಾರರಿಗೆ ತಿಳಿಸಿದರು. ಇದು ವಿನ್ಯಾಸ ಮತ್ತು ಎಂಜಿನಿಯರಿಂಗ್ ವಿಭಾಗಗಳಲ್ಲಿ ನುರಿತ ಕೆಲಸಗಾರರು ಹಾಗೂ ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯಗಳ ಮಹಿಳಾ ಪರಿಚಾರಕರನ್ನು ಒಳಗೊಂಡಿದೆ ಎಂದು ಅವರು ಹೇಳುತ್ತಾರೆ. ಸಹಿಷ್ಣುತೆ ಮತ್ತು ಸೇರ್ಪಡೆಯ ಆರಂಭಿಕ ಭರವಸೆಗಳ ಹೊರತಾಗಿಯೂ, ತಾಲಿಬಾನ್‌ಗಳು ಇಸ್ಲಾಂನ ಕಠಿಣ ವ್ಯಾಖ್ಯಾನವನ್ನು ಜಾರಿಗೊಳಿಸುತ್ತಿವೆ ಎಂಬುದಕ್ಕೆ ನಮೋನಿಯ ಈ ಹೇಳಿಕೆಗಳೇ ಸಾಕ್ಷಿ. ಸಾರ್ವಜನಿಕ ಜೀವನದಲ್ಲಿ ಮಹಿಳೆಯರಿಗೆ ನಿರ್ಬಂಧಗಳನ್ನು ವಿಧಿಸಿರುವುದಕ್ಕೆ ಇದು ಮತ್ತೊಂದು ಸಂಕೇತವಾಗಿದೆ. 1990 ರ ದಶಕದಲ್ಲಿ ಅವರ ಹಿಂದಿನ ಆಡಳಿತದಲ್ಲಿ, ತಾಲಿಬಾನ್ ಹುಡುಗಿಯರು ಮತ್ತು ಮಹಿಳೆಯರನ್ನು ಶಾಲೆಗಳು ಮತ್ತು ಉದ್ಯೋಗಗಳಿಂದ ನಿರ್ಬಂಧಿಸಿತ್ತು.

ಕಾಬೂಲ್ ಪುರಸಭೆಯ ಇಲಾಖೆಗಳಲ್ಲಿ ಮಹಿಳಾ ಉದ್ಯೋಗಿಗಳ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ ಮತ್ತು ಈ ಮಧ್ಯೆ ಅವರು ತಮ್ಮ ಸಂಬಳವನ್ನು ತೆಗೆದುಕೊಳ್ಳುತ್ತಾರೆ ಎಂದು ಮೇಯರ್ ಹೇಳಿರುವುದಾಗಿ ಅಸೋಸಿಯೇಟ್ ಪ್ರೆಸ್ ವರದಿ ಮಾಡಿದೆ.

ಕಳೆದ ತಿಂಗಳು ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಳ್ಳುವ ಮೊದಲು, 3,000 ನಗರ ಉದ್ಯೋಗಿಗಳ ಪೈಕಿ ಕೇವಲ ಮೂರನೇ ಒಂದು ಭಾಗದಷ್ಟು ಮಹಿಳೆಯರು ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ನಮೋನಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಬೂಲ್​ ಏರ್​ಪೋರ್ಟ್​​ ಮೇಲೆ ನಾವು ಡ್ರೋನ್​ ದಾಳಿ ಮಾಡಿದ್ದು ತಪ್ಪಾಯ್ತು’-ಕ್ಷಮೆ ಕೇಳಿದ ಯುಎಸ್​

ಇದನ್ನೂ ಓದಿ: Punjab CM: ಚರಣ್‌ಜಿತ್ ಸಿಂಗ್ ಛನ್ನಿ ಪಂಜಾಬ್‌ನ ನೂತನ ಮುಖ್ಯಮಂತ್ರಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ