AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್ ನಗರದ ಮಹಿಳಾ ಉದ್ಯೋಗಿಗಳಿಗೆ ಮನೆಯಲ್ಲೇ ಇರಿ ಎಂದು ಆದೇಶಿಸಿದ ತಾಲಿಬಾನ್

Taliban: ಕಾಬೂಲ್ ಪುರಸಭೆಯ ಇಲಾಖೆಗಳಲ್ಲಿ ಮಹಿಳಾ ಉದ್ಯೋಗಿಗಳ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ ಮತ್ತು ಈ ಮಧ್ಯೆ ಅವರು ತಮ್ಮ ಸಂಬಳವನ್ನು ತೆಗೆದುಕೊಳ್ಳುತ್ತಾರೆ ಎಂದು ಮೇಯರ್ ಹೇಳಿರುವುದಾಗಿ ಅಸೋಸಿಯೇಟ್ ಪ್ರೆಸ್ ವರದಿ ಮಾಡಿದೆ.

ಕಾಬೂಲ್ ನಗರದ ಮಹಿಳಾ ಉದ್ಯೋಗಿಗಳಿಗೆ ಮನೆಯಲ್ಲೇ ಇರಿ ಎಂದು ಆದೇಶಿಸಿದ ತಾಲಿಬಾನ್
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 19, 2021 | 6:13 PM

Share

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿಯ ಹಂಗಾಮಿ ಮೇಯರ್ ಹೇಳುವಂತೆ ಅನೇಕ ಮಹಿಳಾ ನಗರ ಉದ್ಯೋಗಿಗಳಿಗೆ ದೇಶದ ಹೊಸ ತಾಲಿಬಾನ್ ಆಡಳಿತಗಾರರು ಮನೆಯಲ್ಲೇ ಇರುವಂತೆ ಆದೇಶಿಸಲಾಗಿದೆ. ಪುರುಷರಿಂದ ಮಾಡಲು ಸಾಧ್ಯವಾಗದೇ ಇರುವ ಅಥವಾ ಮಹಿಳೆಯರಿಂದ ಮಾತ್ರ ಸಾಧ್ಯ ಎಂದು ಹೇಳುವ ಕೆಲಸಕ್ಕೆ ಮಾತ್ರ ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಹಮ್ದುಲ್ಲಾ ನಮೋನಿ (Hamdullah Namony) ಭಾನುವಾರ ಸುದ್ದಿಗಾರರಿಗೆ ತಿಳಿಸಿದರು. ಇದು ವಿನ್ಯಾಸ ಮತ್ತು ಎಂಜಿನಿಯರಿಂಗ್ ವಿಭಾಗಗಳಲ್ಲಿ ನುರಿತ ಕೆಲಸಗಾರರು ಹಾಗೂ ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯಗಳ ಮಹಿಳಾ ಪರಿಚಾರಕರನ್ನು ಒಳಗೊಂಡಿದೆ ಎಂದು ಅವರು ಹೇಳುತ್ತಾರೆ. ಸಹಿಷ್ಣುತೆ ಮತ್ತು ಸೇರ್ಪಡೆಯ ಆರಂಭಿಕ ಭರವಸೆಗಳ ಹೊರತಾಗಿಯೂ, ತಾಲಿಬಾನ್‌ಗಳು ಇಸ್ಲಾಂನ ಕಠಿಣ ವ್ಯಾಖ್ಯಾನವನ್ನು ಜಾರಿಗೊಳಿಸುತ್ತಿವೆ ಎಂಬುದಕ್ಕೆ ನಮೋನಿಯ ಈ ಹೇಳಿಕೆಗಳೇ ಸಾಕ್ಷಿ. ಸಾರ್ವಜನಿಕ ಜೀವನದಲ್ಲಿ ಮಹಿಳೆಯರಿಗೆ ನಿರ್ಬಂಧಗಳನ್ನು ವಿಧಿಸಿರುವುದಕ್ಕೆ ಇದು ಮತ್ತೊಂದು ಸಂಕೇತವಾಗಿದೆ. 1990 ರ ದಶಕದಲ್ಲಿ ಅವರ ಹಿಂದಿನ ಆಡಳಿತದಲ್ಲಿ, ತಾಲಿಬಾನ್ ಹುಡುಗಿಯರು ಮತ್ತು ಮಹಿಳೆಯರನ್ನು ಶಾಲೆಗಳು ಮತ್ತು ಉದ್ಯೋಗಗಳಿಂದ ನಿರ್ಬಂಧಿಸಿತ್ತು.

ಕಾಬೂಲ್ ಪುರಸಭೆಯ ಇಲಾಖೆಗಳಲ್ಲಿ ಮಹಿಳಾ ಉದ್ಯೋಗಿಗಳ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ ಮತ್ತು ಈ ಮಧ್ಯೆ ಅವರು ತಮ್ಮ ಸಂಬಳವನ್ನು ತೆಗೆದುಕೊಳ್ಳುತ್ತಾರೆ ಎಂದು ಮೇಯರ್ ಹೇಳಿರುವುದಾಗಿ ಅಸೋಸಿಯೇಟ್ ಪ್ರೆಸ್ ವರದಿ ಮಾಡಿದೆ.

ಕಳೆದ ತಿಂಗಳು ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಳ್ಳುವ ಮೊದಲು, 3,000 ನಗರ ಉದ್ಯೋಗಿಗಳ ಪೈಕಿ ಕೇವಲ ಮೂರನೇ ಒಂದು ಭಾಗದಷ್ಟು ಮಹಿಳೆಯರು ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ನಮೋನಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಬೂಲ್​ ಏರ್​ಪೋರ್ಟ್​​ ಮೇಲೆ ನಾವು ಡ್ರೋನ್​ ದಾಳಿ ಮಾಡಿದ್ದು ತಪ್ಪಾಯ್ತು’-ಕ್ಷಮೆ ಕೇಳಿದ ಯುಎಸ್​

ಇದನ್ನೂ ಓದಿ: Punjab CM: ಚರಣ್‌ಜಿತ್ ಸಿಂಗ್ ಛನ್ನಿ ಪಂಜಾಬ್‌ನ ನೂತನ ಮುಖ್ಯಮಂತ್ರಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು