AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ದೀರ್ಘ ಸಮಯದಿಂದ ತಾಲಿಬಾನಿಗಳ ಬೇಕು..ಬೇಡ ನೋಡಿಕೊಳ್ಳುತ್ತಿದ್ದೇವೆ’-ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಸಚಿವ

ಆಗಸ್ಟ್​ 28ರಂದು ಮಾತನಾಡಿದ್ದ ಪಾಕ್​ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮೊಹಮ್ಮದ್ ಖುರೇಷಿ, ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಸರ್ಕಾರ ರಚಿಸಲು ಅಗತ್ಯ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

’ದೀರ್ಘ ಸಮಯದಿಂದ ತಾಲಿಬಾನಿಗಳ ಬೇಕು..ಬೇಡ ನೋಡಿಕೊಳ್ಳುತ್ತಿದ್ದೇವೆ’-ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಸಚಿವ
ಶೇಖ್​ ರಶೀದ್​ ಅಹ್ಮದ್​
TV9 Web
| Edited By: |

Updated on: Sep 02, 2021 | 11:36 AM

Share

ಇಸ್ಲಮಾಬಾದ್​: ಬಹಳ ಹಿಂದಿನಿಂದಲೂ ತಾಲಿಬಾನಿಗಳ ಉಸ್ತುವಾರಿಯನ್ನು ತಾಲಿಬಾನ್​ ನೋಡಿಕೊಳ್ಳುತ್ತಿದೆ. ಅವರಿಗೆ ಆಶ್ರಯವನ್ನೂ ನೀಡಿದೆ ಎಂದು ಪಾಕಿಸ್ತಾನದ ಆಂತರಿಕ ವ್ಯವಹಾರಗಳ ಸಚಿವ ಶೇಖ್​ ರಶೀದ್ (Sheikh Rashid​) ಒಪ್ಪಿಕೊಂಡಿದ್ದಾರೆ. 20ವರ್ಷಗಳ ನಂತರ ಮತ್ತೆ ತಾಲಿಬಾನಿಗಳು ಆಡಳಿತ ಹಿಡಿದ ಬಳಿಕ ಅತ್ಯಂತ ಸಂತೋಷ ಪಟ್ಟಿದ್ದು ಪಾಕಿಸ್ತಾನವೇ ಎಂಬುದರಲ್ಲಿ ಎರಡು ಮಾತಿಲ್ಲ. ತಾಲಿಬಾನಿ (Taliban)ಗಳು ಕಾಶ್ಮೀರ (Jammu-Kashmir)ವನ್ನು ಗೆದ್ದು ನಮಗೆ ಕೊಡುತ್ತಾರೆ ಎಂಬಲ್ಲವರಿಗೆ ಆ ದೇಶ ಯೋಚನೆ ಮಾಡಿದೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳುವಾಗ ಪಾಕ್​ನಿಂದ 10-15ಸಾವಿರ ಉಗ್ರರು ಅಲ್ಲಿಗೆ ಹೋಗಿದ್ದರು ಎಂಬ ವಿಚಾರವನ್ನು ಅಂದಿನ ಅಧ್ಯಕ್ಷ ಅಶ್ರಫ್​ ಘನಿಯೇ ಹೇಳಿದ್ದಾರೆ.

ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೇಖ್​ ರಶೀದ್​, ನಾವು ತಾಲಿಬಾನಿಗಳ ಉಸ್ತುವಾರಿಯನ್ನು ಕಳೆದ ಅನೇಕ ದಿನಗಳಿಂದಲೂ ಹೊತ್ತಿದ್ದೇವೆ. ದೀರ್ಘಕಾಲದಿಂದಲೂ ಅವರನ್ನು ನೋಡಿಕೊಳ್ಳುತ್ತಿದ್ದೇವೆ. ತಾಲಿಬಾನಿಗಳಿಗೆ ಪಾಕಿಸ್ತಾನದಲ್ಲಿ ಶಿಕ್ಷಣ, ಆಶ್ರಯ ನೀಡಲಾಗಿದೆ. ಅವರಲ್ಲಿ ಅನೇಕರಿಗೆ ಇಲ್ಲಿ ಮನೆ ಕೂಡ ಇದೆ. ಅವರಿಗಾಗಿ ನಾವು ಏನೆಲ್ಲ ಸಾಧ್ಯವೋ ಅಷ್ಟನ್ನೂ ಮಾಡಿದ್ದೇವೆ ಎಂದು ಹೇಳಿದರು.

ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆ ಸಂಪೂರ್ಣವಾಗಿ ಹೊರಟುಹೋದ ಮೇಲೆ ತಾಲಿಬಾನ್​ ಉಗ್ರರು ತುಂಬ ಸಂಭ್ರಮಸಿದ್ದರು. ಅದಕ್ಕೂ ಮೊದಲು ಆಗಸ್ಟ್​ 28ರಂದು ಮಾತನಾಡಿದ್ದ ಪಾಕ್​ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮೊಹಮ್ಮದ್ ಖುರೇಷಿ, ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಸರ್ಕಾರ ರಚನೆ ಮಾಡಲು ಬೇಕಾಗಿರುವ ಎಲ್ಲ ರೀತಿಯ ಬೆಂಬಲವನ್ನೂ ಇಸ್ಲಮಾಬಾದ್​ ನೀಡಲಿದೆ ಎಂದು ಹೇಳಿದ್ದರು.

ತಾಲಿಬಾನ್​ ಮುಖಂಡನೊಂದಿಗೆ ಮಾತುಕತೆ ಇನ್ನು ಮೊನ್ನೆ ಕತಾರ್​ನ ರಾಜಧಾನಿ ದೋಹಾದಲ್ಲಿ ಭಾರತೀಯ ರಾಯಭಾರಿ ದೀಪಕ್​ ಮಿತ್ತಲ್​ ಮತ್ತು ತಾಲಿಬಾನ್​ ಮುಖಂಡ ಮೊಹಮ್ಮದ್​ ಅಬ್ಬಾಸ್​ ಸ್ಟಾನೆಕ್​ಝೈ ನಡುವೆ ರಾಜತಾಂತ್ರಿಕ ಮಾತುಕತೆ ನಡೆದಿದೆ. ಈ ವೇಳೆ ಅಫ್ಘಾನ್​ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಸುರಕ್ಷತೆ, ಭದ್ರತೆ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Meeting Point : ‘ನಮ್ಮೂರಿಗೆ ನ್ಯಾಷನಲ್ ಹೈವೇ ಬಂದಷ್ಟು ಸುಲಭವಾಗಿರಲಿಲ್ಲ ಹುಡುಗರನ್ನು ಮಾತಾಡಿಸುವುದು’

Vikrant Rona: ವಿಕ್ರಾಂತ್ ರೋಣದ ‘ಡೆಡ್ ಮ್ಯಾನ್ಸ್ ಆಂಥಮ್’ ರಿಲೀಸ್; ಕಿಚ್ಚನ ನೂತನ ಅವತಾರಕ್ಕೆ ಅಭಿಮಾನಿಗಳು ಫಿದಾ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ